Homeಮುಖಪುಟಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ಇಂದು (ಅ.8) ಹೊರ ಬೀಳಲಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭಗೊಂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆದರೆ, ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಜನರು ಮತ ಚಲಾಯಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ 61.38 ಶೇಕಡಾ ಮತದಾನವಾಗಿದೆ, ನಂತರ ಸೆಪ್ಟೆಂಬರ್ 25 ರಂದು ಎರಡನೇ ಹಂತದಲ್ಲಿ 57.31 ಶೇಕಡಾ ಮತ್ತು ಅಕ್ಟೋಬರ್ 1ರಂದು ಅಂತಿಮ ಹಂತದಲ್ಲಿ 65.48ರಷ್ಟು ಮತದಾನವಾಗಿದೆ.

10 ವರ್ಷಗಳ ಬಳಿಕ, 2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಇದು ಮೊದಲನೆಯ ಚುನಾವಣೆಯಾಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಯ ಬಳಿಕ ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇಂಡಿಯಾ ಒಕ್ಕೂಟದ ಜೊತೆಯೇ ಗುರುತಿಸಿಕೊಂಡಿರುವ ಮತ್ತೊಂದು ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಏಕಾಂಗಿಯಾಗಿ ಸ್ಪರ್ಧಿಸಿದೆ.

370ನೇ ವಿಧಿಯ ರದ್ದತಿ, ಸಂಪೂರ್ಣ ರಾಜ್ಯತ್ವದ ಮರುಸ್ಥಾಪನೆ, ನಿರುದ್ಯೋಗ ಈ ಬಾರಿಯ ಚುನಾವಣೆಯ ಪ್ರಮುಖ ವಿಷಯಗಳಾಗಿತ್ತು.

ಈ ಬಾರಿಯ ಚುನಾವಣೆಯಲ್ಲಿ ಗಂದೇರ್ಬಲ್ ಮತ್ತು ಬುದ್ಗಾಮ್‌ನಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಉಮರ್ ಅಬ್ದುಲ್ಲಾ, ಬಿಜ್‌ಬೆಹರಾದಿಂದ ಸ್ಪರ್ಧಿಸಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ, ಕುಪ್ವಾರ ಮತ್ತು ಹಂದ್ವಾರದಿಂದ ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಾಜದ್ ಲೋನ್, ನೌಶೇರಾದಿಂದ ಬಿಜೆಪಿಯ ರವೀಂದರ್ ರೈನಾ, ನಗ್ರೋಟಾದಿಂದ ಬಿಜೆಪಿಯ ರಾಣಾ ಸಿಂಗ್ ದೇವೇಂದ್ರ ರೈನಾ, ಸೆಂಟ್ರಲ್ ಶಾಲ್ತೆಂಗ್‌ನಿಂದ ಕಾಂಗ್ರೆಸ್‌ನ ತಾರಿಕ್ ಹಮೀದ್ ಕರ್ರಾ ಮತ್ತು ಚನ್ನಪೋರಾದಿಂದ ಸ್ಪರ್ಧಿಸಿರುವ ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ ಮುಖ್ಯಸ್ಥ ಸೈಯದ್ ಮೊಹಮ್ಮದ್ ಅಲ್ತಾಫ್ ಬುಖಾರಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಹರಿಯಾಣದಲ್ಲೂ ಇಂದು ಮತ ಎಣಿಕೆ

ಹರಿಯಾಣದಲ್ಲಿ ಅಕ್ಟೋಬರ್ 5ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ.67.9ರಷ್ಟು ಮತದಾನವಾಗಿದೆ. ಇಲ್ಲಿ 2014 ರಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಗೆ ವರದಾನವಾಗುವ ಸಾಧ್ಯತೆ ಇದೆ. ಬಿಜೆಪಿ ತನ್ನ ಎರಡನೇ ಅವಧಿಯ ಮಧ್ಯದಲ್ಲಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ್ದು ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ ಎಂದೂ ಹೇಳಲಾಗ್ತಿದೆ. ಇವೆಲ್ಲವೂ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರೈತ ಹೋರಾಟ ಹರಿಯಾಣ ಚುನಾವಣೆಯ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದ ರೈತ ಸಮುದಾಯಕ್ಕೆ ಬಿಜೆಪಿ ವಿರುದ್ದ ದೊಡ್ಡ ಅಸಮಾಧಾನವಿದೆ. ಕಳೆದ ಎರಡು ಮೂರು ವರ್ಷಗಳಲ್ಲಿ ನಡೆದ ರೈತ ಹೋರಾಟಗಳಲ್ಲಿ ಹರಿಯಾಣದ ರೈತರೇ ಮುಂಚೂಣಿಯಲ್ಲಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರೈತ ಹೋರಾಟದ ಬಿಸಿ ತಟ್ಟಿತ್ತು.

ಈ ಬಾರಿಯ ಚುನಾವಣೆಯಲ್ಲಿ ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರದಲ್ಲಿ ಬಿಜೆಪಿಯ ಮಂಜು ಹೂಡಾ ವಿರುದ್ಧ ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ, ಲಾಡ್ವಾದಲ್ಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಮೇವಾ ಸಿಂಗ್, ಜೂಲಾನಾದಲ್ಲಿ ಕಾಂಗ್ರೆಸ್‌ನ ವಿನೇಶ್ ಫೋಗಟ್ ಮತ್ತು ಬಿಜೆಪಿಯ ಕ್ಯಾಪ್ಟನ್ ಯೋಗೇಶ್, ಬೈರಾಗಿ ಮತ್ತು ಉಚ್ಚನ ಕಾಲನ್‌ನಲ್ಲಿ ಕಾಂಗ್ರೆಸ್‌ನ ಬ್ರಿಜೇಂದ್ರ ಸಿಂಗ್ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ

ಜಮ್ಮು ಕಾಶ್ಮೀರ ಮತ್ತು ಹರಿಯಾಣ ಎರಡೂ ಕಡೆಯೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಒಟ್ಟು 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 50-58 ಸ್ಥಾನಗಳೊಂದಿಗೆ ಕಾಂಗ್ರೆಸ್ ಆರಾಮದಾಯಕ ಬಹುಮತ ಪಡೆಯುವ ಸಾಧ್ಯತೆ ಇದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸುವ ಸಾಧ್ಯತೆ ಇದೆ ಎಂದು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಹೇಳಿದರೂ, ಕೆಲ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದಿವೆ. ಇಲ್ಲಿ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಲು ಮುಂದಾಗಿರುವುದು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಆದರೆ, ಐವರ ನಾಮನಿರ್ದೇಶನ ಸಂವಿಧಾನ ವಿರೋಧಿ, ಒಂದು ನಾಮನಿರ್ದೇಶನ ಮಾಡಿದರೆ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ವಿವಿಧ ಪಕ್ಷಗಳು ಎಚ್ಚರಿಕೆ ನೀಡಿವೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...