Homeಮುಖಪುಟಜಮ್ಮು-ಕಾಶ್ಮೀರ: ಶಂಕಿತ ಉಗ್ರರಿಂದ ಕಾಶ್ಮೀರಿ ಪಂಡಿತನ ಹತ್ಯೆ

ಜಮ್ಮು-ಕಾಶ್ಮೀರ: ಶಂಕಿತ ಉಗ್ರರಿಂದ ಕಾಶ್ಮೀರಿ ಪಂಡಿತನ ಹತ್ಯೆ

- Advertisement -
- Advertisement -

ಭಾನುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶಂಕಿತ ಉಗ್ರರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆಂದು ವರದಿಯಾಗಿದೆ.

ಮೃತರನ್ನು ಸಂಜಯ್ ಶರ್ಮಾ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಶರ್ಮಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು ತೀವ್ರವಾಗಿ ಗಾಯಗೊಂಡಿದ್ದರಿಂದ ಸಾವನ್ನಪ್ಪಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರ ವಿರುದ್ಧ ನಡೆಯುತ್ತಿರುವ ಉದ್ದೇಶಿತ ದಾಳಿಗಳ ಮತ್ತೊಂದು ಕೃತ್ಯವೇ ಈ ದಾಳಿಯಾಗಿದೆ.

ಆಗಸ್ಟ್ 16 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಕಾಶ್ಮೀರಿ ಪಂಡಿತ್ ಒಬ್ಬರನ್ನು ಕೊಂದು ಮತ್ತೊಬ್ಬರನ್ನು ಗಾಯಗೊಳಿಸಿದ್ದರು. ಮೃತಪಟ್ಟ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಪಿಂಟು ಕುಮಾರ್. ಬುದ್ಗಾಮ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮತ್ತೊಬ್ಬ ನಾಗರಿಕ ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರರಾದ ರಾಹುಲ್ ಭಟ್ ಅವರನ್ನು ಬುದ್ಗಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಅವರ ಕಚೇರಿಗೆ ನುಗ್ಗಿ ಮೇ 12ರಂದು ಕೊಂದಿದ್ದರು. ರಾಹುಲ್ ಹತ್ಯೆಯ ಬಳಿಕ ಕೇಂದ್ರಾಡಳಿತ ಪ್ರದೇಶದ ಹಲವು ಭಾಗಗಳಲ್ಲಿ ಕಾಶ್ಮೀರಿ ಪಂಡಿತರು ಬೃಹತ್ ಪ್ರತಿಭಟನೆ ನಡೆಸಿದ್ದರು.

ಎರಡು ವಾರಗಳ ನಂತರ, ಬುದ್ಗಾಮ್‌ನ ಚದೂರ ಪಟ್ಟಣದಲ್ಲಿ ಉಗ್ರರು, ಕಾಶ್ಮೀರಿ ಪಂಡಿತ್ ಸಮುದಾಯದ ನಟಿ ಅಮರೀನ್ ಭಟ್ ಅವರನ್ನು ಗುಂಡಿಕ್ಕಿ ಕೊಂದಿದ್ದರು. ದಾಳಿಯ ವೇಳೆ ಅಮರೀನ್‌ ಅವರ ಹತ್ತು ವರ್ಷದ ಸೋದರಳಿಯನಿಗೆ ಗುಂಡುಗಳು ತಾಕಿ ಗಾಯಗಳಾಗಿದ್ದವು.

ಕಳೆದ ಮೂರು ವರ್ಷಗಳಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಎಂಟು ಕಾಶ್ಮೀರಿ ಪಂಡಿತರು ಮತ್ತು ಒಬ್ಬ ಕಾಶ್ಮೀರಿ ರಜಪೂತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಡಿಸೆಂಬರ್ 14 ರಂದು ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ತಿಳಿಸಿದೆ.

370 ನೇ ವಿಧಿಯ ಅಡಿಯಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಆಗಸ್ಟ್ 5, 2019 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ದಾಳಿಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರವು ಮೇಲ್ಮನೆಗೆ ತಿಳಿಸಿದೆ.

ಆದಾಗ್ಯೂ, 2008 ರಲ್ಲಿ ಪ್ರಧಾನ ಮಂತ್ರಿಗಳ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ನೇಮಕಗೊಂಡ ಕಾಶ್ಮೀರಿ ಪಂಡಿತ್ ನೌಕರರ ಗುಂಪು ಮೇ ತಿಂಗಳಿನಿಂದ ಪ್ರತಿಭಟನೆಗಳನ್ನು ನಡೆಸುತ್ತಿದೆ. ತಮ್ಮನ್ನು ಕಣಿವೆಯಿಂದ ಹೊರಗಿರುವ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...