Homeಮುಖಪುಟಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

- Advertisement -
- Advertisement -

370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು, ಕಾಶ್ಮೀರ, ಲಡಾಖ್‌ ಮೂರು ವಿಭಾಗಗಳ ೩೧೦   ಬ್ಲಾಕ್ ಗಳ ಅಧ್ಗಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಚಿತ್ರ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಇತಿಹಾಸದಲ್ಲೇ ಯಾವುದೇ ಒಂದು ರಾಜಕೀಯ ಪಕ್ಷಕ್ಕಿಂತ ಪಕ್ಷೇತರ ಅಭ್ಯರ್ಥಿಗಳೇ, ಹತ್ತಿರದ ಅತಿದೊಡ್ಡ ಪಕ್ಷ ಗಳಿಸಿದ ಸ್ಥಾನಗಳಿಗಿಂತ ಮೂರು ಪಟ್ಟು ಹೆಚ್ಚು ಸ್ಥಾನ ಗೆದ್ದಿರೋದು ಈ ಫಲಿತಾಂಶದ ವಿಶೇಷ. ಹೌದು, ಒಟ್ಟು 310 ಬ್ಲಾಕ್ ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳೇ 217 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ 81 ಬ್ಲಾಕ್ ಗಳಲ್ಲಷ್ಟೇ ಜಯಗಳಿಸಿದೆ. ಅಂದಹಾಗೆ, ಜಮ್ಮು ಕಾಶ್ಮೀರದ ಜನರನ್ನು ಗೃಹಬಂಧನದಲ್ಲಿರಿಸಿ, ದೂರವಾಣಿ ಸಂಪರ್ಕವೂ ಇಲ್ಲದಂತೆ ಮಾಡಿ ಜಮ್ಮು ಕಾಶ್ಮೀರಕ್ಕಿದ್ದ ಸಾಂವಿಧಾನಿಕ 370 ಕಾಯ್ದೆಯನ್ನೇ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಲುವಾಗಿ ಜಮ್ಮು-ಕಾಶ್ಮೀರ ಕಣಿವೆಯ ಪ್ರಧಾನ ರಾಜಕೀಯ ಪಕ್ಷಗಳಾದ ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಾರ್ಟಿಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದವು. ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಅಷ್ಟಕ್ಕೂ ಇದು ಜಮ್ಮು-ಕಾಶ್ಮೀರ-ಲಡಾಖ್ ವಿಭಾಗಗಳ ಜನಸಾಮಾನ್ಯ ಮತದಾರರು ಓಟ್ ಮಾಡಿದ ಚುನಾವಣೆಯಲ್ಲ. ಜನರಿಂದ ಈ ಮೊದಲೇ ಚುನಾಯಿತರಾಗಿದ್ದ ಪಂಚಾಯಿತಿಗಳ `ಪಂಚ’ರು ಮತ್ತು `ಸರಪಂಚ’ರು ಮಾತ್ರವೇ ಮತದಾನ ಮಾಡಿದ ಚುನಾವಣೆ. ಹಾಗಾಗಿ ಶೇ.98ಕ್ಕು ಹೆಚ್ಚು ಮತದಾನ ಸಾಧ್ಯವಾಗಿತ್ತು.

ಪ್ರಮುಖ ಪಕ್ಷಗಳ ಬೈಕಾಟ್ ನ ಹೊರತಾಗಿಯೂ ಮೂರು ವಿಭಾಗಗಳ ೩೧೦ ಬ್ಲಾಕ್ ಗಳಲ್ಲಿ ಕೇವಲ 81 ಸ್ಥಾನಗಳನ್ನು ಮಾತ್ರ ಬಿಜೆಪಿ ಗಳಿಸಿಕೊಂಡಿದೆ. ಉಳಿದ 217 ಸ್ಥಾನಗಳು ಪಕ್ಷೇತರರ ಪಾಲಾಗಿವೆ. ಜಮ್ಮು ಮೂಲದ ಪ್ಯಾಂಥರ್ಸ್ ಪಾರ್ಟಿ 8 ಬ್ಲಾಕ್ ಗಳಲ್ಲಿ ಜಯ ಗಳಿಸಿದೆ. ಜಮ್ಮು ಕಾಶ್ಮೀರದ ಒಟ್ಟು 22 ಜಿಲ್ಲೆಗಳಲ್ಲಿ 19 ಜಿಲ್ಲೆಗಳಲ್ಲಿ ಪಕ್ಷೇತರರೇ ಪ್ರಾಬಲ್ಯ ಮೆರೆದಿದ್ದಾರೆ.

ಕಾಶ್ಮೀರದ 128 ಬ್ಲಾಕ್ ಗಳಲ್ಲಿ 109 ಸ್ಥಾನಗಳನ್ನು ಪಕ್ಷೇತರರು ಪಡೆದಿದ್ದಾರೆ. ಇಲ್ಲಿ ಬಿಜೆಪಿ 18 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಶ್ಮೀರ ವಿಭಾಗದ ಕುಪ್ವಾರ, ಬಂಡೀಪುರ, ಗಂಡರ್ ಬಾಲ್, ಶ್ರೀನಗರ ಕುಲ್ಗಾಮ್ ನಲ್ಲಿ ಬಿಜೆಪಿ ಶೂನ್ಯ ಫಲಿತಾಂಶ ದಾಖಲಿಸಿದೆ. ಇಲ್ಲಿಯೂ ಕೂಡ ಪಕ್ಷೇತರ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯಲ್ಲಿ ಬಿಜೆಪಿ 1 ಸ್ಥಾನ ಗಳಿಸಿ ಮುಖಭಂಗ ಅನುಭವಿಸಿದೆ. ಪಕ್ಷೇತರರು 24 ಬ್ಲಾಕ್ ಗಳಲ್ಲಿ ಜಯ ದಾಖಲಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲ ಲಭಿಸಿಲ್ಲ.

ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ ಕಾನ್ಫರೆನ್ಸ್, ಪೀಪಲ್ ಡೆಮಾಕ್ರೆಟಿಕ್ ಪಾರ್ಟಿಯ ಯಾವುದೇ ನಾಯಕರು ಚುನಾವಣೆಯಲ್ಲಿ ಭಾಗಿಯಾಗಿರಲಿಲ್ಲ. ಅವರೆಲ್ಲರೂ ಗೃಹ ಬಂಧನದಲ್ಲಿದ್ದರು. ಹೀಗಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರಲಿಲ್ಲ. ಕಾಂಗ್ರೆಸ್ ಕೂಡ ಕೊನೆಯ ಕ್ಷಣದಲ್ಲಿ ಚುನಾವಣೆಯಿಂದ ಹಿಂದೆ ಸರಿದಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳು ಚುನಾವಣಾ ತಯಾರಿ ನಡೆಸಿರಲಿಲ್ಲ.

ಬಿಡಿಸಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ ಸ್ಪರ್ಧೆಗೆ ಇಳಿದಿತ್ತು. ಸಾಕಷ್ಟು ಚುನಾವಣಾ ತಯಾರಿ ನಡೆಸಿತ್ತು. ಪ್ರಾದೇಶಿಕ ಪಕ್ಷಗಳ ಸ್ಪರ್ಧೆಗೆ ಇಳಿಯದೇ ಇದ್ದ ನಡುವೆಯೂ ಬಿಜೆಪಿ ಸಾಕಷ್ಟು ಸ್ಥಾನಗಳನ್ನು ಗಳಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...