Homeಮುಖಪುಟಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

- Advertisement -
- Advertisement -

370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು, ಕಾಶ್ಮೀರ, ಲಡಾಖ್‌ ಮೂರು ವಿಭಾಗಗಳ ೩೧೦   ಬ್ಲಾಕ್ ಗಳ ಅಧ್ಗಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಚಿತ್ರ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಇತಿಹಾಸದಲ್ಲೇ ಯಾವುದೇ ಒಂದು ರಾಜಕೀಯ ಪಕ್ಷಕ್ಕಿಂತ ಪಕ್ಷೇತರ ಅಭ್ಯರ್ಥಿಗಳೇ, ಹತ್ತಿರದ ಅತಿದೊಡ್ಡ ಪಕ್ಷ ಗಳಿಸಿದ ಸ್ಥಾನಗಳಿಗಿಂತ ಮೂರು ಪಟ್ಟು ಹೆಚ್ಚು ಸ್ಥಾನ ಗೆದ್ದಿರೋದು ಈ ಫಲಿತಾಂಶದ ವಿಶೇಷ. ಹೌದು, ಒಟ್ಟು 310 ಬ್ಲಾಕ್ ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳೇ 217 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ 81 ಬ್ಲಾಕ್ ಗಳಲ್ಲಷ್ಟೇ ಜಯಗಳಿಸಿದೆ. ಅಂದಹಾಗೆ, ಜಮ್ಮು ಕಾಶ್ಮೀರದ ಜನರನ್ನು ಗೃಹಬಂಧನದಲ್ಲಿರಿಸಿ, ದೂರವಾಣಿ ಸಂಪರ್ಕವೂ ಇಲ್ಲದಂತೆ ಮಾಡಿ ಜಮ್ಮು ಕಾಶ್ಮೀರಕ್ಕಿದ್ದ ಸಾಂವಿಧಾನಿಕ 370 ಕಾಯ್ದೆಯನ್ನೇ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಲುವಾಗಿ ಜಮ್ಮು-ಕಾಶ್ಮೀರ ಕಣಿವೆಯ ಪ್ರಧಾನ ರಾಜಕೀಯ ಪಕ್ಷಗಳಾದ ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಾರ್ಟಿಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದವು. ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಅಷ್ಟಕ್ಕೂ ಇದು ಜಮ್ಮು-ಕಾಶ್ಮೀರ-ಲಡಾಖ್ ವಿಭಾಗಗಳ ಜನಸಾಮಾನ್ಯ ಮತದಾರರು ಓಟ್ ಮಾಡಿದ ಚುನಾವಣೆಯಲ್ಲ. ಜನರಿಂದ ಈ ಮೊದಲೇ ಚುನಾಯಿತರಾಗಿದ್ದ ಪಂಚಾಯಿತಿಗಳ `ಪಂಚ’ರು ಮತ್ತು `ಸರಪಂಚ’ರು ಮಾತ್ರವೇ ಮತದಾನ ಮಾಡಿದ ಚುನಾವಣೆ. ಹಾಗಾಗಿ ಶೇ.98ಕ್ಕು ಹೆಚ್ಚು ಮತದಾನ ಸಾಧ್ಯವಾಗಿತ್ತು.

ಪ್ರಮುಖ ಪಕ್ಷಗಳ ಬೈಕಾಟ್ ನ ಹೊರತಾಗಿಯೂ ಮೂರು ವಿಭಾಗಗಳ ೩೧೦ ಬ್ಲಾಕ್ ಗಳಲ್ಲಿ ಕೇವಲ 81 ಸ್ಥಾನಗಳನ್ನು ಮಾತ್ರ ಬಿಜೆಪಿ ಗಳಿಸಿಕೊಂಡಿದೆ. ಉಳಿದ 217 ಸ್ಥಾನಗಳು ಪಕ್ಷೇತರರ ಪಾಲಾಗಿವೆ. ಜಮ್ಮು ಮೂಲದ ಪ್ಯಾಂಥರ್ಸ್ ಪಾರ್ಟಿ 8 ಬ್ಲಾಕ್ ಗಳಲ್ಲಿ ಜಯ ಗಳಿಸಿದೆ. ಜಮ್ಮು ಕಾಶ್ಮೀರದ ಒಟ್ಟು 22 ಜಿಲ್ಲೆಗಳಲ್ಲಿ 19 ಜಿಲ್ಲೆಗಳಲ್ಲಿ ಪಕ್ಷೇತರರೇ ಪ್ರಾಬಲ್ಯ ಮೆರೆದಿದ್ದಾರೆ.

ಕಾಶ್ಮೀರದ 128 ಬ್ಲಾಕ್ ಗಳಲ್ಲಿ 109 ಸ್ಥಾನಗಳನ್ನು ಪಕ್ಷೇತರರು ಪಡೆದಿದ್ದಾರೆ. ಇಲ್ಲಿ ಬಿಜೆಪಿ 18 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಶ್ಮೀರ ವಿಭಾಗದ ಕುಪ್ವಾರ, ಬಂಡೀಪುರ, ಗಂಡರ್ ಬಾಲ್, ಶ್ರೀನಗರ ಕುಲ್ಗಾಮ್ ನಲ್ಲಿ ಬಿಜೆಪಿ ಶೂನ್ಯ ಫಲಿತಾಂಶ ದಾಖಲಿಸಿದೆ. ಇಲ್ಲಿಯೂ ಕೂಡ ಪಕ್ಷೇತರ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯಲ್ಲಿ ಬಿಜೆಪಿ 1 ಸ್ಥಾನ ಗಳಿಸಿ ಮುಖಭಂಗ ಅನುಭವಿಸಿದೆ. ಪಕ್ಷೇತರರು 24 ಬ್ಲಾಕ್ ಗಳಲ್ಲಿ ಜಯ ದಾಖಲಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲ ಲಭಿಸಿಲ್ಲ.

ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ ಕಾನ್ಫರೆನ್ಸ್, ಪೀಪಲ್ ಡೆಮಾಕ್ರೆಟಿಕ್ ಪಾರ್ಟಿಯ ಯಾವುದೇ ನಾಯಕರು ಚುನಾವಣೆಯಲ್ಲಿ ಭಾಗಿಯಾಗಿರಲಿಲ್ಲ. ಅವರೆಲ್ಲರೂ ಗೃಹ ಬಂಧನದಲ್ಲಿದ್ದರು. ಹೀಗಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರಲಿಲ್ಲ. ಕಾಂಗ್ರೆಸ್ ಕೂಡ ಕೊನೆಯ ಕ್ಷಣದಲ್ಲಿ ಚುನಾವಣೆಯಿಂದ ಹಿಂದೆ ಸರಿದಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳು ಚುನಾವಣಾ ತಯಾರಿ ನಡೆಸಿರಲಿಲ್ಲ.

ಬಿಡಿಸಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ ಸ್ಪರ್ಧೆಗೆ ಇಳಿದಿತ್ತು. ಸಾಕಷ್ಟು ಚುನಾವಣಾ ತಯಾರಿ ನಡೆಸಿತ್ತು. ಪ್ರಾದೇಶಿಕ ಪಕ್ಷಗಳ ಸ್ಪರ್ಧೆಗೆ ಇಳಿಯದೇ ಇದ್ದ ನಡುವೆಯೂ ಬಿಜೆಪಿ ಸಾಕಷ್ಟು ಸ್ಥಾನಗಳನ್ನು ಗಳಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...