Homeಮುಖಪುಟಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

- Advertisement -
- Advertisement -

370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು, ಕಾಶ್ಮೀರ, ಲಡಾಖ್‌ ಮೂರು ವಿಭಾಗಗಳ ೩೧೦   ಬ್ಲಾಕ್ ಗಳ ಅಧ್ಗಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಚಿತ್ರ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಇತಿಹಾಸದಲ್ಲೇ ಯಾವುದೇ ಒಂದು ರಾಜಕೀಯ ಪಕ್ಷಕ್ಕಿಂತ ಪಕ್ಷೇತರ ಅಭ್ಯರ್ಥಿಗಳೇ, ಹತ್ತಿರದ ಅತಿದೊಡ್ಡ ಪಕ್ಷ ಗಳಿಸಿದ ಸ್ಥಾನಗಳಿಗಿಂತ ಮೂರು ಪಟ್ಟು ಹೆಚ್ಚು ಸ್ಥಾನ ಗೆದ್ದಿರೋದು ಈ ಫಲಿತಾಂಶದ ವಿಶೇಷ. ಹೌದು, ಒಟ್ಟು 310 ಬ್ಲಾಕ್ ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳೇ 217 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ 81 ಬ್ಲಾಕ್ ಗಳಲ್ಲಷ್ಟೇ ಜಯಗಳಿಸಿದೆ. ಅಂದಹಾಗೆ, ಜಮ್ಮು ಕಾಶ್ಮೀರದ ಜನರನ್ನು ಗೃಹಬಂಧನದಲ್ಲಿರಿಸಿ, ದೂರವಾಣಿ ಸಂಪರ್ಕವೂ ಇಲ್ಲದಂತೆ ಮಾಡಿ ಜಮ್ಮು ಕಾಶ್ಮೀರಕ್ಕಿದ್ದ ಸಾಂವಿಧಾನಿಕ 370 ಕಾಯ್ದೆಯನ್ನೇ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಲುವಾಗಿ ಜಮ್ಮು-ಕಾಶ್ಮೀರ ಕಣಿವೆಯ ಪ್ರಧಾನ ರಾಜಕೀಯ ಪಕ್ಷಗಳಾದ ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಾರ್ಟಿಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದವು. ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಅಷ್ಟಕ್ಕೂ ಇದು ಜಮ್ಮು-ಕಾಶ್ಮೀರ-ಲಡಾಖ್ ವಿಭಾಗಗಳ ಜನಸಾಮಾನ್ಯ ಮತದಾರರು ಓಟ್ ಮಾಡಿದ ಚುನಾವಣೆಯಲ್ಲ. ಜನರಿಂದ ಈ ಮೊದಲೇ ಚುನಾಯಿತರಾಗಿದ್ದ ಪಂಚಾಯಿತಿಗಳ `ಪಂಚ’ರು ಮತ್ತು `ಸರಪಂಚ’ರು ಮಾತ್ರವೇ ಮತದಾನ ಮಾಡಿದ ಚುನಾವಣೆ. ಹಾಗಾಗಿ ಶೇ.98ಕ್ಕು ಹೆಚ್ಚು ಮತದಾನ ಸಾಧ್ಯವಾಗಿತ್ತು.

ಪ್ರಮುಖ ಪಕ್ಷಗಳ ಬೈಕಾಟ್ ನ ಹೊರತಾಗಿಯೂ ಮೂರು ವಿಭಾಗಗಳ ೩೧೦ ಬ್ಲಾಕ್ ಗಳಲ್ಲಿ ಕೇವಲ 81 ಸ್ಥಾನಗಳನ್ನು ಮಾತ್ರ ಬಿಜೆಪಿ ಗಳಿಸಿಕೊಂಡಿದೆ. ಉಳಿದ 217 ಸ್ಥಾನಗಳು ಪಕ್ಷೇತರರ ಪಾಲಾಗಿವೆ. ಜಮ್ಮು ಮೂಲದ ಪ್ಯಾಂಥರ್ಸ್ ಪಾರ್ಟಿ 8 ಬ್ಲಾಕ್ ಗಳಲ್ಲಿ ಜಯ ಗಳಿಸಿದೆ. ಜಮ್ಮು ಕಾಶ್ಮೀರದ ಒಟ್ಟು 22 ಜಿಲ್ಲೆಗಳಲ್ಲಿ 19 ಜಿಲ್ಲೆಗಳಲ್ಲಿ ಪಕ್ಷೇತರರೇ ಪ್ರಾಬಲ್ಯ ಮೆರೆದಿದ್ದಾರೆ.

ಕಾಶ್ಮೀರದ 128 ಬ್ಲಾಕ್ ಗಳಲ್ಲಿ 109 ಸ್ಥಾನಗಳನ್ನು ಪಕ್ಷೇತರರು ಪಡೆದಿದ್ದಾರೆ. ಇಲ್ಲಿ ಬಿಜೆಪಿ 18 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಶ್ಮೀರ ವಿಭಾಗದ ಕುಪ್ವಾರ, ಬಂಡೀಪುರ, ಗಂಡರ್ ಬಾಲ್, ಶ್ರೀನಗರ ಕುಲ್ಗಾಮ್ ನಲ್ಲಿ ಬಿಜೆಪಿ ಶೂನ್ಯ ಫಲಿತಾಂಶ ದಾಖಲಿಸಿದೆ. ಇಲ್ಲಿಯೂ ಕೂಡ ಪಕ್ಷೇತರ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯಲ್ಲಿ ಬಿಜೆಪಿ 1 ಸ್ಥಾನ ಗಳಿಸಿ ಮುಖಭಂಗ ಅನುಭವಿಸಿದೆ. ಪಕ್ಷೇತರರು 24 ಬ್ಲಾಕ್ ಗಳಲ್ಲಿ ಜಯ ದಾಖಲಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲ ಲಭಿಸಿಲ್ಲ.

ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ ಕಾನ್ಫರೆನ್ಸ್, ಪೀಪಲ್ ಡೆಮಾಕ್ರೆಟಿಕ್ ಪಾರ್ಟಿಯ ಯಾವುದೇ ನಾಯಕರು ಚುನಾವಣೆಯಲ್ಲಿ ಭಾಗಿಯಾಗಿರಲಿಲ್ಲ. ಅವರೆಲ್ಲರೂ ಗೃಹ ಬಂಧನದಲ್ಲಿದ್ದರು. ಹೀಗಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರಲಿಲ್ಲ. ಕಾಂಗ್ರೆಸ್ ಕೂಡ ಕೊನೆಯ ಕ್ಷಣದಲ್ಲಿ ಚುನಾವಣೆಯಿಂದ ಹಿಂದೆ ಸರಿದಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳು ಚುನಾವಣಾ ತಯಾರಿ ನಡೆಸಿರಲಿಲ್ಲ.

ಬಿಡಿಸಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ ಸ್ಪರ್ಧೆಗೆ ಇಳಿದಿತ್ತು. ಸಾಕಷ್ಟು ಚುನಾವಣಾ ತಯಾರಿ ನಡೆಸಿತ್ತು. ಪ್ರಾದೇಶಿಕ ಪಕ್ಷಗಳ ಸ್ಪರ್ಧೆಗೆ ಇಳಿಯದೇ ಇದ್ದ ನಡುವೆಯೂ ಬಿಜೆಪಿ ಸಾಕಷ್ಟು ಸ್ಥಾನಗಳನ್ನು ಗಳಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...