Homeಮುಖಪುಟಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆ | ಪ್ರಧಾನಿ ಭರವಸೆ

ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆ | ಪ್ರಧಾನಿ ಭರವಸೆ

- Advertisement -
- Advertisement -

ಜಮ್ಮು ಕಾಶ್ಮೀರದ ಯುವಕರು ಪ್ರಜಾಪ್ರಭುತ್ವದಲ್ಲಿ ಮತ್ತೆ ವಿಶ್ವಾಸವನ್ನು ಕಂಡುಕೊಂಡಿದ್ದು, ತಮ್ಮ ಮತವು ಬದಲಾವಣೆಯನ್ನು ತರಬಹುದು ಎಂದು ಭಾವಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. ಇದು ಅವರ ಸಬಲೀಕರಣದ ಮೊದಲ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಶ್ರಿನಗರದ ಶೇರ್-ಎ-ಕಾಶ್ಮೀರ ಸ್ಟೇಡಿಯಂನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ಭರವಸೆಯನ್ನು ಬಿಜೆಪಿ ಈಡೇರಿಸುತ್ತದೆ ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನನ್ನ ಜಮ್ಮು ಕಾಶ್ಮೀರದ ಯುವಕರು ಇನ್ನು ಅಸಹಾಯಕರಲ್ಲ. ಅವರು ಮೋದಿ ಸರ್ಕಾರದ ಅಡಿಯಲ್ಲಿ ಅಧಿಕಾರ ಪಡೆಯುತ್ತಿದ್ದಾರೆ. ಜಮ್ಮು ಕಾಶ್ಮೀರ ಬಿಜೆಪಿಯು ಯುವಕರ ಉದ್ಯೋಗಕ್ಕಾಗಿ ಬೃಹತ್ ಕಾರ್ಯಕ್ರಮಗಳನ್ನು ಮಾಡಿರುವುದು ನನಗೆ ಸಂತೋಷವಾಗಿದೆ. ಅವರಿಗೆ ಉದ್ಯೋಗ ನೀಡುವ ಕೆಲಸವನ್ನು ಬಿಜೆಪಿ ಮಾಡಲಿದೆ’’ ಎಂದು ಮೋದಿ ಹೇಳಿದ್ದಾರೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಈ ಮೂರು ಪಕ್ಷಗಳು ತಮ್ಮ ಕುಟುಂಬಗಳ ಲಾಭಕ್ಕಾಗಿ ಪ್ರಜಾಪ್ರಭುತ್ವ ಮತ್ತು ಕಾಶ್ಮೀರವನ್ನು “ತುಳಿದು ಹಾಕಿವೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ‘ರಾಹುಲ್ ಗಾಂಧಿ ಭಾರತೀಯರಲ್ಲ’ ಎಂಬ ಹೇಳಿಕೆ; ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಹಿಂದೂ ಸೇನಾ ಮುಖ್ಯಸ್ಥ

“1980ರ ದಶಕದಲ್ಲಿ ಅವರು ಮಾಡಿದ್ದೇನು ಎಂಬುದು ನಿಮಗೆ ನೆನಪಿದೆಯೇ? ಅವರು ಜಮ್ಮು ಕಾಶ್ಮೀರದ ರಾಜಕೀಯವನ್ನು ತಮ್ಮ ಸ್ವಂತ ದುರಾಸೆಗಾಗಿ ಬಳಸಿಕೊಂಡರು. ಅವರು ತಮ್ಮ ಕುಟುಂಬವನ್ನು ಹೊರತುಪಡಿಸಿ ಯಾರೂ ಮುಂದೆ ಬರಲು ಬಯಸಲಿಲ್ಲ? ಇಲ್ಲದಿದ್ದರೆ, ಅವರು ಪಂಚಾಯತ್, ಡಿಡಿಸಿ ಮತ್ತು ಬಿಡಿಸಿ ಚುನಾವಣೆಗಳನ್ನು ಏಕೆ ನಿಲ್ಲಿಸಿದರು?. ತಮ್ಮ ಸ್ವಾರ್ಥದ ಫಲವಾಗಿ ಈ ಮೂರು ಕುಟುಂಬಗಳು ಮಾತ್ರ ಅಧಿಕಾರಕ್ಕೆ ಬರುತ್ತವೆ ಎಂದು ಭಾವಿಸಿದ ಯುವಕರು ಪ್ರಜಾಪ್ರಭುತ್ವದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರದ ಪರಿಸ್ಥಿತಿಯು ಸಾಕಷ್ಟು ಬದಲಾಗಿದೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಯುವಕರ ವಿಶ್ವಾಸವನ್ನು ಪುನಃಸ್ಥಾಪಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. “ಮೊದಲು ಚುನಾವಣೆ ನಡೆದ ಸಂದರ್ಭಗಳನ್ನು ನೆನಪಿಸಿಕೊಳ್ಳಿ. ಸಂಜೆ 6 ಗಂಟೆಗೆ ಪ್ರಚಾರಗಳು ನಿಲ್ಲುತ್ತವೆ. ಮನೆ-ಮನೆ ಪ್ರಚಾರ ಅಸಾಧ್ಯವಾಗಿತ್ತು. ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿ ಈ ಮೂರು ಕುಟುಂಬಗಳು ಇದರಿಂದ ಸಂತೋಷವಾಗಿದ್ದವು” ಎಂದು ಅವರು ಹೇಳಿದ್ದಾರೆ.

“ಇಂದು, ಪ್ರಚಾರವು ತಡರಾತ್ರಿಯಲ್ಲಿ ನಡೆಯುತ್ತದೆ. ಈಗ, ಜನರು ಪ್ರಜಾಪ್ರಭುತ್ವವನ್ನು ಆಚರಿಸುತ್ತಿದ್ದಾರೆ. ಯುವಕರು ಮತ್ತೆ ಪ್ರಜಾಪ್ರಭುತ್ವದಲ್ಲಿ ವಿಶ್ವಾಸವನ್ನು ಕಂಡುಕೊಂಡಿದ್ದಾರೆ, ಅವರು ತಮ್ಮ ಮತ, ತಮ್ಮ ಪ್ರಜಾಪ್ರಭುತ್ವದ ಹಕ್ಕು, ಬದಲಾವಣೆಯನ್ನು ತರಬಹುದು ಎಂದು ಭಾವಿಸುತ್ತಾರೆ. ಇದು ಸಬಲೀಕರಣದ ಮೊದಲ ಹೆಜ್ಜೆಯಾಗಿದೆ.” ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...