Homeಮುಖಪುಟಜಮ್ಮು ಕಾಶ್ಮೀರ | ವಿಧಾನಸಭೆ ಚುನಾವಣೆ ಮತದಾನ ಆರಂಭ

ಜಮ್ಮು ಕಾಶ್ಮೀರ | ವಿಧಾನಸಭೆ ಚುನಾವಣೆ ಮತದಾನ ಆರಂಭ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬುಧವಾರ ವಿಧಾನಸಭೆ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ರಾಜ್ಯದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. 370ನೇ ವಿಧಿ ರದ್ದು ಮಾಡಿ ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಕ್‌ ಎಂದು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳಲ್ಲಿ ಇಂದು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ 1 ನೇ ಹಂತದಲ್ಲಿ ಮತದಾನ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಜಮ್ಮು ಕಾಶ್ಮೀರವು ಕೇಂದ್ರಾಡಳಿತ ಪ್ರದೇಶ ಎಂದು ಆದ ನಂತರ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆಯಾಗಿದ್ದು, ಕಳೆದ 10 ವರ್ಷಗಳಲ್ಲಿ ವಿಧಾನಸಭಾ ಚುನಾವಣೆ ಇಲ್ಲಿ ನಡೆದಿಲ್ಲ.

ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆಗಳು ಜಾರಿಯಲ್ಲಿದ್ದು, ಜಮ್ಮು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಮೂರು ಹಂತದ ಚುನಾವಣೆಯ ಮೊದಲ ಹಂತ ಇದಾಗಿದ್ದು, ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಕಾಶ್ಮೀರದ ಏಳು ಜಿಲ್ಲೆಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನ ಮಾಡುತ್ತಿದ್ದಾರೆ.

ಇದನ್ನೂಓದಿ: ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಮಣಿದ ಮಮತಾ ಸರ್ಕಾರ!

ಜಮ್ಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳ 16 – 24 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ಇಂದು ನಿರ್ಧರಿಸಲಿದ್ದಾರೆ.

ಚುನಾವಣಾ ಆಯೋಗದ (EC) ಪ್ರಕಾರ, 11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯಲಿಂಗಿ ಮತದಾರರನ್ನು ಒಳಗೊಂಡಂತೆ ಒಟ್ಟು 23,27,580 ಮತದಾರರು ಹಂತ 1 ರಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

“18 ರಿಂದ 19 ವರ್ಷ ವಯಸ್ಸಿನ 1.23 ಲಕ್ಷ ಯುವಕರು, 28,309 ವಿಕಲಾಂಗ ವ್ಯಕ್ತಿಗಳು (PwDs) ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 15,774 ಹಿರಿಯ ಮತದಾರರು ಸಹ ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ” ಎಂದು EC ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

3,276 ಮತಗಟ್ಟೆಗಳಲ್ಲಿ ಒಟ್ಟು 14,000 ಮತಗಟ್ಟೆ ಸಿಬ್ಬಂದಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

“302 ನಗರ ಮತಗಟ್ಟೆಗಳು ಮತ್ತು 2,974 ಗ್ರಾಮೀಣ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಯಲ್ಲಿ ಅಧ್ಯಕ್ಷರು ಸೇರಿದಂತೆ ನಾಲ್ವರು ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಒಟ್ಟು 14,000 ಕ್ಕೂ ಹೆಚ್ಚು ಚುನಾವಣಾ ಸಿಬ್ಬಂದಿಯನ್ನು 1 ನೇ ಹಂತದ ಚುನಾವಣೆಗೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು.” ಅವರು ಹೇಳಿದ್ದಾರೆ.

ಭದ್ರತಾ ವ್ಯವಸ್ಥೆಗಳಲ್ಲಿ ಕೇಂದ್ರ ಸಶಸ್ತ್ರ ಅರೆಸೇನಾ ಪಡೆ (ಸಿಎಪಿಎಫ್), ಜಮ್ಮು ಕಾಶ್ಮೀರ ಸಶಸ್ತ್ರ ಪೊಲೀಸ್ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಬಹು ಹಂತದ ಪಡೆಗಳು ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರದ ಪ್ರಮುಖ ಅಭ್ಯರ್ಥಿಗಳ ಪೈಕಿ ಬುಧವಾರದಂದು ಸಿಪಿಐ (ಎಂ)ನ ಮೊಹಮ್ಮದ್ ಯೂಸುಫ್ ತರಿಗಾಮಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್, ನ್ಯಾಷನಲ್ ಕಾನ್ಫರೆನ್ಸ್‌ನ ಸಕೀನಾ ಇಟೂ ಮತ್ತು ಪಿಡಿಪಿಯ ಸರ್ತಾಜ್ ಮದ್ನಿ ಮತ್ತು ಅಬ್ದುಲ್ ರೆಹಮಾನ್ ವೀರಿ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಶ್ರೀಗುಫ್ವಾರಾ-ಬಿಜ್‌ಬೆಹರಾದಿಂದ ಸ್ಪರ್ಧಿಸುತ್ತಿರುವ ಪಿಡಿಪಿಯ ಇಲ್ತಿಜಾ ಮುಫ್ತಿ ಮತ್ತು ಪುಲ್ವಾಮಾದಿಂದ ಪಕ್ಷದ ಯುವ ನಾಯಕ ವಹೀದ್ ಪಾರಾ ಕೂಡ ಮೊದಲ ಹಂತದ ಮತದಾನದ ಕಣದಲ್ಲಿದ್ದಾರೆ.

ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಇನ್ನೆರಡು ಹಂತಗಳು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯುತ್ತಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ವಿಡಿಯೊ ನೋಡಿ: ಗದ್ದರ್ ಪ್ರಥಮ ಪರಿನಿಬ್ಬಾಣ: ಗದ್ದರ್‌ ಜೊತೆಗಿನ ಒಡನಾಟದ ನೆನಪು ಹಂಚಿಕೊಂಡ ಪಿಚ್ಚಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...