Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...