Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...