Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...