Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...