Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...