Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...