Homeಮುಖಪುಟ4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ...

4 ಬಾರಿ ಶಾಸಕ, 2 ಬಾರಿ ಮಂತ್ರಿಯಾದರೂ ಸ್ವಂತ ಮನೆಯೂ ಇಲ್ಲದ ಸರಳ, ಸಜ್ಜನಿಕೆಯ ಜಮುನಾ ಪ್ರಸಾದ್

- Advertisement -
- Advertisement -

ಭಾರತದಲ್ಲಿ ಭ್ರಷ್ಟ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ. ಹೇಳೋದೊಂದು ಮಾಡೋದು ಮತ್ತೊಂದು ಅನ್ನೋದು ರಾಜಕಾರಣಿಗಳಿಗೆ ರೂಢಿಯಾಗಿದೆ. ಕೊಟ್ಟ ಆಶ್ವಾಸನೆಗಳು, ನೀಡಿದ ಭರವಸೆಗಳು, ಮಾಡಿಯೇ ತೀರುತ್ತೇನೆ ಅಂತಾ ಕೊಚ್ಚಿಕೊಂಡ ಬಡಾಯಿ ಮಾತುಗಳನ್ನು ನಂಬುತ್ತಲೇ ಬಂದಿರೋ ನಮ್ಮ ಜನ ಮೂರ್ಖರೇ ಬಿಡಿ. ಜನತೆಗಾಗಿ ಎಲ್ಲಾ ಅನ್ನುತ್ತಲೇ ಎಲ್ಲವನ್ನೂ ಬಾಚಿಕೊಂಡು ಸದ್ದಿಲ್ಲದೇ, ಬಿಲ್ಡಿಂಗ್ ಮೇಲೆ ಬಿಲ್ಡಿಂಗ್ ಕಟ್ಟಿಸಿ, ಮುಂದಿನ ಮೂರ್ನಾಲ್ಕು ಪೀಳಿಗೆಯವರು ಕುಳಿತು ತಿನ್ನುವಷ್ಟು ಆಸ್ತಿ ಮಾಡಿಟ್ಟಿರುತ್ತಾರೆ. ಐದು ವರ್ಷದ ಅಧಿಕಾರ ಮುಗಿಯುತ್ತಲೇ ದರ್ಬಾರು, ದೌಲತ್ತಿನಿಂದ ಮೆರೆಯೋದೆ.

ಇಂಥ ಜನಪ್ರತಿನಿಧಿಗಳು ಇರೋವಾಗ ರಾಜಕೀಯದಲ್ಲಿ ಪ್ರಾಮಾಣಿಕತೆ ಎಲ್ಲಿಂದ ಬರಬೇಕು..? ಬಡವರಿಗಾಗಿ, ಮಕ್ಕಳಿಗಾಗಿ, ಮಹಿಳಾ ಕಲ್ಯಾಣಕ್ಕಾಗಿ, ಸಾರ್ವಜನಿಕರಿಗಾಗಿ, ಜಿಲ್ಲೆ, ರಾಜ್ಯ, ದೇಶದ ಅಭಿವೃದ್ಧಿಗಾಗಿ ತನ್ನೆಲ್ಲವನ್ನೂ ಅರ್ಪಿಸುವ ಮನೋಭಾವವಂತೂ ತುಂಬಾ ಕಡಿಮೆಯಾಗಿ ಹೋಗಿದೆ. ನಾನು ಚೆನ್ನಾಗಿದ್ದರೆ ಸಾಕು, ನನ್ನ ಕುಟುಂಬ ಸೇಫ್ ಆಗಿದ್ದರೆ ಸಾಕು ಅಂತಾ ಬಯಸುವವರೇ ಅತ್ಯಧಿಕ. ಒಳ್ಳೆಯ ಮನಸ್ಸಿನಿಂದ ಜನರ ಒಳಿತಿಗಾಗಿ, ಸಮಾಜ ಸುಧಾರಣೆಗೆ ಮಿಡಿಯುವ ಹೃದಯವುಳ್ಳ ರಾಜಕಾರಣಿಗಳು ಇರುವುದೇ ವಿರಳ. ಅಂದ ಹಾಗೇ ಇಷ್ಟೆಲ್ಲಾ ಪೀಠಿಕೆ ಯಾಕೆ.. ಅಂದ್ರೆ.. ಭ್ರಷ್ಟ ರಾಜಕಾರಣಿಗಳ ಮಧ್ಯೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ರಾಜಕಾರಣಿಯೊಬ್ಬರು ಇದ್ದಾರೆ. ಇಷ್ಟು ದಿನ ಅವರ್ಯಾರು, ಏನೂ ಅಂತಲೇ ಯಾರಿಗೂ ತಿಳಿದಿರಲಿಲ್ಲ. ಆದರೀಗ ಅವರ ಪ್ರಾಮಾಣಿಕ ಸೇವೆ, ಬದುಕಿನ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರೇ ಜಮುನಾ ಪ್ರಸಾದ್ ಬೋಸ್.

92 ವರ್ಷದ ಜಮುನಾ ಪ್ರಸಾದ್ ಬೋಸ್ ಅವರನ್ನು ಮತ್ತೊಬ್ಬ ಸುಭಾಷ್ ಚಂದ್ರ ಬೋಸ್ ಎಂತಲೇ ಕರೆಯುತ್ತಾರೆ. ಉತ್ತರಪ್ರದೇಶದಲ್ಲಿ ಸುಮಾರು 4 ಬಾರಿ ಶಾಸಕರಾಗಿ ಆಯ್ಕೆಯಾದವರು. 2 ಬಾರಿ ಸಚಿವರಾಗಿಯೂ ಕೆಲಸ ಮಾಡಿದವರು. ಅವರ ಸರಳ ಜೀವನ, ವ್ಯಕ್ತಿತ್ವ, ಪ್ರಾಮಾಣಿಕತೆ, ಸಜ್ಜನಿಕೆ, ನಿಸ್ವಾರ್ಥ ಸೇವೆಯಿಂದಲೇ ಹೆಸರು ಗಳಿಸಿದವರು. ನಾಲ್ಕು ಬಾರಿ ಶಾಸಕರಾದ್ರೂ ಹಣ, ಆಸ್ತಿ ಮಾಡಿಕೊಳ್ಳುವ ಭ್ರಷ್ಟ ಕೆಲಸಕ್ಕೆ ಕೈ ಹಾಕದೇ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ.

ಜಮುನಾ ಪ್ರಸಾದ್ ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. 1955ರಲ್ಲಿ ಸಹೋದರಿಯ ಮದುವೆಗಾಗಿ ಸ್ವಂತ ಮನೆಯನ್ನೇ ಮಾರಿ, ಮದುವೆ ಮಾಡಿದ್ದರು. ಹೀಗಾಗಿ ಇಂದಿಗೂ ಬಾಡಿಗೆ ಮನೆಯಲ್ಲೇ ಬದುಕುತ್ತಿದ್ದಾರೆ.

ಜಮುನಾ ಪ್ರಸಾದ್ ಶಾಸಕರಾಗಿದ್ದಾಗ ಅವರಿಗೆ ಜೀವನಕ್ಕಾಗಿ ಉಳಿಸಬಹುದಾದಷ್ಟು ಸಂಬಳ ಬರುತ್ತಿತ್ತು. ಆದರೆ ಮನೆಯ ಖರ್ಚಿಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದ ಹಣವನ್ನು ಬಡವರಿಗೆ ಮತ್ತು ಹಣದ ಅವಶ್ಯಕತೆ ಇರುವವರಿಗೆ ಕೊಟ್ಟು ಸಹಾಯ ಮಾಡುತ್ತಿದ್ದರು. ಹೀಗಾಗಿ ಜಮುನಾ ಪ್ರಸಾದ್ ಮತ್ತೆ ಸ್ವಂತ ಮನೆ ಕಟ್ಟಿಕೊಳ್ಳಲೇ ಇಲ್ಲ. ಈಗಲೂ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿರುವ ಜಮುನಾ ಪ್ರಸಾದ್, ಹೆಚ್ಚು ಹಣ ಆಸ್ಪತ್ರೆ, ಔಷಧಿಗಾಗಿ ಖರ್ಚಾಗುತ್ತದೆ. ಆದರೂ ಉಳಿದ ಹಣವನ್ನು ಇಲ್ಲದವರಿಗೆ ಕೊಟ್ಟು ಸಹಕರಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರಾಮಾಣಿಕ ಬದುಕು ಕಟ್ಟಿಕೊಂಡಿರುವ ಇಲ್ಲದವರಿಗಾಗಿ ತುಡಿಯುವ ಅವರನ್ನು ಸ್ಥಳೀಯರು ಸುಭಾಷ್ ಚಂದ್ರ ಬೋಸ್ ಅಂತಲೇ ಕರೆಯುತ್ತಾರೆ. ಯಾವತ್ತೂ ಅವರು ತಮ್ಮ ಹುದ್ದೆಯನ್ನು ಕೆಟ್ಟ ಹಾಗೂ ಭ್ರಷ್ಟ ಕೆಲಸಗಳಿಗೆ ಬಳಕೆ ಮಾಡಿಕೊಂಡಿಲ್ಲ. ಜಮುನಾ ಪ್ರಸಾದ್ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಜನ ಬಯಸುತ್ತಿದ್ದಾರೆ. ವಯಸ್ಸಾಗಿದ್ದರೂ ಅವರು ಜನರ ಕಲ್ಯಾಣಕ್ಕಾಗಿ ದುಡಿಯಬಲ್ಲರು ಎಂಬುದು ಸ್ಥಳೀಯರ ನಂಬಿಕೆ.

ಚುನಾಯಿತರಾಗಿ ಅಧಿಕಾರ ಗದ್ದುಗೆ ಹಿಡಿಯುತ್ತಿದ್ದಂತೆ, ಅಡ್ಡದಾರಿ ಬಳಸಿ, ಹಣ ಗಳಿಸುವ ರಾಜಕಾರಣಿಗಳ ಮಧ್ಯೆ ಸದ್ದಿಲ್ಲದ ನಿಸ್ವಾರ್ಥ ಸೇವೆ ಸಲ್ಲಿಸಿದ ಸರಳ ಜೀವಿ ಜಮುನಾ ಪ್ರಸಾದ್‍ಗೆ ಅಭಿನಂದನೆ ಹೇಳಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...