Homeಮುಖಪುಟಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ...

ಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ…

- Advertisement -
- Advertisement -

ಜನವರಿ 8ರ ಭಾನುವಾರದಂದು ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ನಾಡು-ನುಡಿ ಒಳಗೊಳ್ಳುವ ಪರಂಪರೆಯ ಹೊರತು ಯಾರನ್ನು, ಯಾವುದನ್ನು ಹೊರಗಿಡುವ ಸಂಕುಚಿತ ಮನಸ್ಥಿತಿಯಲ್ಲ ಎಂಬುದನ್ನು ಸಾರಲು ನಡೆಯುತ್ತಿರುವ ಸಮ್ಮೇಳನಕ್ಕೆ ‘ಸಂತ ಶಿಶುನಾಳ ಶರೀಫ ಮತ್ತು ಗುರು ಗೋವಿಂದ ಭಟ್ಟ’ ಸಭಾಂಗಣವೆಂದು ಹೆಸರಿಡಲಾಗಿದೆ. ಇತ್ತೀಚಿಗೆ ನಿಧನರಾದ ಖ್ಯಾತ ಪತ್ರಕರ್ತರು ಮತ್ತು ಲೇಖಕರಾದ ಎಂ.ಎಸ್ ಪ್ರಭಾಕರರವರ ನೆನಪಿನಲ್ಲಿ ‘ಕಾಮರೂಪಿ’ ದ್ವಾರ ಸಿದ್ಧಪಡಿಸಲಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆಗೆ ಕನ್ನಡ ಧ್ಜಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ್, ಶಿವರಾಮೇಗೌಡ ಮತ್ತು ಬಿ.ಎನ್ ಜಗದೀಶರವರು ಪಾಲ್ಗೊಳ್ಳಲಿದ್ದಾರೆ. 9.30ಕ್ಕೆ ‘ಬಂಡಾಯದ ಗೆರೆಗಳು: ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನ’ ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿಗಳಾದ ರಘುನಂದನರವರು ಉದ್ಘಾಟಿಸಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ.ಮಹಮದ್, ದಿನೇಶ್ ಕುಕ್ಕುಜಡ್ಕ, ಸತೀಶ್ ಆಚಾರ್ಯ, ಪಂಜು ಗಂಗೊಳ್ಳಿ, ಬಾದಲ್ ನಂಜುಂಡಸ್ವಾಮಿ, ಚಂದ್ರಶೇಖರ್ ಶೆಟ್ಟಿ ಭಾಗವಹಿಸಲಿದ್ದಾರೆ. ಚಿತ್ರಕಲಾವಿದರಾದ ಚೇತನ್ ಪುತ್ತೂರು, ಸರೋವರ್ ಬೆಂಕಿಕೆರೆ, ಉದಯ ಗಾಂವ್ಕರ್, ನವೀನ್ ಹಾಸನ, ವಿಶ್ವವಿನ್ಯಾಸ, ಸುನೈಫ್, ರೂಮಿ ಹರೀಶ್, ರೂಪಶ್ರೀ ಕಲ್ಲಿಗನೂರು, ಚರಿತಾ ಮೈಸೂರು, ನಭಾ ಒಕ್ಕುಂದ, ಸನತ್ ಕುಮಾರ್, ರಾಜೇಂದ್ರ ಪ್ರಸಾದ್ ಮತ್ತು ಸಾತ್ವಿಕ್ ನೆಲ್ಲಿತೀರ್ಥ ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 10 ಗಂಟೆಗೆ ಚಂಪಾ ವೇದಿಕೆಯಲ್ಲಿ ಜನಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಕವಿಗಳು ಮತ್ತು ಲೇಖಕರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರು ಉದ್ಟಾಟಿಸಲಿದ್ದು, ಲೇಖಕಿ ಬಾನು ಮುಶ್ತಾಕ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ದಿಕ್ಸೂಚಿ ಭಾಷಣ ಮಾಡಿದರೆ, ಮುಖ್ಯ ಅತಿಥಿಗಳಾಗಿ ಪ್ರೊ.ಎಸ್.ಜಾಫೆಟ್, ಜಾಣಗೆರೆ ವೆಂಕಟರಾಮಯ್ಯ, ಚೆನ್ನಿ ಜನಾರ್ದನ್, ಅಗ್ನಿಶ್ರೀಧರ್, ಅಕ್ಕೈ ಪದ್ಮಶಾಲಿ, ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ಭೈರಪ್ಪ ಹರೀಶ್ ಕುಮಾರ್‌ರವರು ಪ್ರಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮಧ್ಯಾಹ್ನ 12.30 ರಿಂದ 1.30ರವರೆಗೆ ನಡೆಯುವ ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವದ ಕುರಿತ ವಿಚಾರ ಗೋಷ್ಠಿಯಲ್ಲಿ ಡಾ. ಮಹಮ್ಮದ್ ಮುಸ್ತಾಫಾ ವಿಷಯ ಮಂಡನೆ ಮಾಡಿದರೆ ಅಕ್ಷತಾ ಕೆ ಸಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಕನ್ನಡ ನಾಡು ನುಡಿ – ಟಿಪ್ಪು ಕೊಡುಗೆಗಳು ವಿಷಯದ ಕುರಿತು ಟಿ ಗುರುರಾಜ್ ವಿಷಯ ಮಂಡನೆ ಮಾಡಿದರೆ ಕಲೀಂ ಪಾಷಾರವರು ಪ್ರತಿಕ್ರಿಯೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಲಿಂಗದೇವರು ಹಳೆಮನೆ ಸಂಪಾದಕತ್ವದ ‘ಧೀರ ಟಿಪ್ಪು ಲಾವಣಿಗಳು ಮತ್ತು ಟಿ ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು – ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕಗಳ ಬಿಡುಗಡೆ ನಡೆಯಲಿದೆ. ನಾ ದಿವಾಕರ್‌ರವರು ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 1.30 ರಿಂದ 2:00ರವರೆ ಆಹಾರ ಗೋಷ್ಠಿ ನಡೆಯಲಿದೆ. ಆಹಾರದ ಮೇಲಿನ ರಾಜಕಾರಣ ಮತ್ತು ದೌರ್ಜನ್ಯ ವಿಷಯದ ಕುರಿತು ರಂಗನಾಥ ಕಂಟನಕುಂಟೆ ಮತ್ತು ಪಲ್ಲವಿ ಇಡೂ‌ರುರವರು ವಿಷಯ ಮಂಡಿಸುತ್ತಾರೆ. ಊಟದ ಕೌಂಟರ್‌ನಲ್ಲಿ ಬಹುತ್ವವನ್ನು ಸಾರು ಉಪ್ಪಿನಕಾಯಿ, ತರಕಾರಿ ಪಲ್ಯ, ಅನ್ನ, ಮೀನು ಸಾರು, ತರಕಾರಿ ಸಾಂಬರ್, ಗೀ ರೈಸ್, ದಾಲ್, ಚಿಕನ್ ಕಬಾಬ್ ಮತ್ತು ಪಾಯಸ ಇರುವ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

ಮದ್ಯಾಹ್ನ 2:00 ರಿಂದ 3:00ವರೆಗೆ ಕವಿಗೋಷ್ಠಿ ನಡೆಯಲಿದ್ದು, ಬಂಜಗೆರೆ ಜಯಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎಚ್ ಆರ್ ಸುಜಾತರವರು ಆಶಯ ಮಾತುಗಳನ್ನಾಡಿದರೆ, ದೀಪದ ಮಲ್ಲಿ, ದಾದಪೀರ್ ಜೈಮನ್, ಚಾಂದ್ ಪಾಷಾ, ಪ್ರಕಾಶ್ ಮಂಟೇದಾ, ಟೀನಾ ಶಶಿಕಾಂತ್, ಸಿರಾಜ್ ಬಿಸ್ರಳ್ಳಿ, ಫಾತಿಮಾ ರಾಲಿಯಾ, ಹಾಜಿರ ಖಾನಂ, ಚಾಂದಿನಿ, ಶಿವರಾಜ್ ಮೋತಿ, ಪಂಚಮಿ ಎಸ್, ಸಂಘಮಿತ್ರೆ, ಮಂಜುನಾಥ ಮಾಗೊದಿ, ಪುನೀತ್, ಧನಂಜಯ ದೇವರಹಳ್ಳಿ, ವಿಕಾಸ್ ಮೌರ್ಯ, ರೂಮಿ ಹರೀಶ್ ಮತ್ತು ಪ್ರವೀಣ್ ಬಿ ಎಂ ಕವನ ವಾಚಿಸಲಿದ್ದಾರೆ.

ಸೌಹಾರ್ದತೆ ಮತ್ತು ಕನ್ನಡತನ ವಿಷಯದ ಕುರಿತ ಮಧ್ಯಾಹ್ನದ ಗೋಷ್ಟಿಯಲ್ಲಿ ಚಿಂತಕರಾದ ರಾಜೇಂದ್ರ ಚೆನ್ನಿಯವರು ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದಾಳಿ : ಸಾಹಿತ್ಯ ಲೋಕದ ಜವಾಬ್ದಾರಿಗಳು ವಿಷಯದ ಕುರಿತು ಮಾವಳ್ಳಿ ಶಂಕರ್ ಮುನೀರ್ ಕಾಟಿಪಳ್ಳ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡವನ್ನು ಬೆಳಗಿಸಿದ ಕ್ರೈಸ್ತ ಮಿಷನರಿಗಳು ವಿಷಯದ ಕುರಿತು ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ವಿಷಯ ಮಂಡನೆ ಮಾಡಿದರೆ ಪ್ರಿಯಾಂಕ ಮಾವಿನಕರ್ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 5:00 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಡಾ. ಜಿ ರಾಮಕೃಷ್ಣರವರು ಅಧ್ಯಕ್ಷತೆ ವಹಿಸಿದರೆ ಡಾ ಕೆ ಮರುಳಸಿದ್ದಪ್ಪನವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿ. ಬಸವಲಿಂಗಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ದು. ಸರಸ್ವತಿ, ಯು. ಟಿ ಫರ್ಜಾನ, ವಸಂತರಾಜ್, ಅನಂತ್ ನಾಯಕ್, ರವಿಕುಮಾರ್ ಟೆಲೆಕ್ಸ್ ಭಾಗವಹಿಸಲಿದ್ದಾರೆ.

ಬೀದಿಗೆ ಬರಲಿ ಕಲೆ – ಸಾಹಿತ್ಯ ಗೋಷ್ಟಿಯಲ್ಲಿ ಸಮುದಾಯ ಬೆಂಗಳೂರು ವತಿಯಿಂದ ಬೀದಿ ನಾಟಕ ನಡೆಯಲಿದೆ. ಅದಕ್ಕೂ ಮೊದಲು ಗುಂಡಣ್ಣ ಚಿಕ್ಕಮಗಳೂರುರವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮ್ಮೇಳನ ಆಯ ವ್ಯಯ ವಿವರ ಘೋಷಿಸಬೇಕಿತ್ತು. ಅಂದಾಜು ವೆಚ್ಚ ಮಾಹಿತಿ. ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧದ ಸದರಿ ಸಮ್ಮೇಳನದ ಕ್ರಿಯಾಯೋಜನೆಯನ್ನೂ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು.

  2. ಕಾತರದಿಂದ ಕಾಯುತ್ತಿರುವ ಜನ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ; ಜಯಧ್ವನಿ ಮೊಳಗಲಿ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...