Homeಮುಖಪುಟಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ...

ಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ…

- Advertisement -
- Advertisement -

ಜನವರಿ 8ರ ಭಾನುವಾರದಂದು ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ನಾಡು-ನುಡಿ ಒಳಗೊಳ್ಳುವ ಪರಂಪರೆಯ ಹೊರತು ಯಾರನ್ನು, ಯಾವುದನ್ನು ಹೊರಗಿಡುವ ಸಂಕುಚಿತ ಮನಸ್ಥಿತಿಯಲ್ಲ ಎಂಬುದನ್ನು ಸಾರಲು ನಡೆಯುತ್ತಿರುವ ಸಮ್ಮೇಳನಕ್ಕೆ ‘ಸಂತ ಶಿಶುನಾಳ ಶರೀಫ ಮತ್ತು ಗುರು ಗೋವಿಂದ ಭಟ್ಟ’ ಸಭಾಂಗಣವೆಂದು ಹೆಸರಿಡಲಾಗಿದೆ. ಇತ್ತೀಚಿಗೆ ನಿಧನರಾದ ಖ್ಯಾತ ಪತ್ರಕರ್ತರು ಮತ್ತು ಲೇಖಕರಾದ ಎಂ.ಎಸ್ ಪ್ರಭಾಕರರವರ ನೆನಪಿನಲ್ಲಿ ‘ಕಾಮರೂಪಿ’ ದ್ವಾರ ಸಿದ್ಧಪಡಿಸಲಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆಗೆ ಕನ್ನಡ ಧ್ಜಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ್, ಶಿವರಾಮೇಗೌಡ ಮತ್ತು ಬಿ.ಎನ್ ಜಗದೀಶರವರು ಪಾಲ್ಗೊಳ್ಳಲಿದ್ದಾರೆ. 9.30ಕ್ಕೆ ‘ಬಂಡಾಯದ ಗೆರೆಗಳು: ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನ’ ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿಗಳಾದ ರಘುನಂದನರವರು ಉದ್ಘಾಟಿಸಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ.ಮಹಮದ್, ದಿನೇಶ್ ಕುಕ್ಕುಜಡ್ಕ, ಸತೀಶ್ ಆಚಾರ್ಯ, ಪಂಜು ಗಂಗೊಳ್ಳಿ, ಬಾದಲ್ ನಂಜುಂಡಸ್ವಾಮಿ, ಚಂದ್ರಶೇಖರ್ ಶೆಟ್ಟಿ ಭಾಗವಹಿಸಲಿದ್ದಾರೆ. ಚಿತ್ರಕಲಾವಿದರಾದ ಚೇತನ್ ಪುತ್ತೂರು, ಸರೋವರ್ ಬೆಂಕಿಕೆರೆ, ಉದಯ ಗಾಂವ್ಕರ್, ನವೀನ್ ಹಾಸನ, ವಿಶ್ವವಿನ್ಯಾಸ, ಸುನೈಫ್, ರೂಮಿ ಹರೀಶ್, ರೂಪಶ್ರೀ ಕಲ್ಲಿಗನೂರು, ಚರಿತಾ ಮೈಸೂರು, ನಭಾ ಒಕ್ಕುಂದ, ಸನತ್ ಕುಮಾರ್, ರಾಜೇಂದ್ರ ಪ್ರಸಾದ್ ಮತ್ತು ಸಾತ್ವಿಕ್ ನೆಲ್ಲಿತೀರ್ಥ ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 10 ಗಂಟೆಗೆ ಚಂಪಾ ವೇದಿಕೆಯಲ್ಲಿ ಜನಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಕವಿಗಳು ಮತ್ತು ಲೇಖಕರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರು ಉದ್ಟಾಟಿಸಲಿದ್ದು, ಲೇಖಕಿ ಬಾನು ಮುಶ್ತಾಕ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ದಿಕ್ಸೂಚಿ ಭಾಷಣ ಮಾಡಿದರೆ, ಮುಖ್ಯ ಅತಿಥಿಗಳಾಗಿ ಪ್ರೊ.ಎಸ್.ಜಾಫೆಟ್, ಜಾಣಗೆರೆ ವೆಂಕಟರಾಮಯ್ಯ, ಚೆನ್ನಿ ಜನಾರ್ದನ್, ಅಗ್ನಿಶ್ರೀಧರ್, ಅಕ್ಕೈ ಪದ್ಮಶಾಲಿ, ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ಭೈರಪ್ಪ ಹರೀಶ್ ಕುಮಾರ್‌ರವರು ಪ್ರಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮಧ್ಯಾಹ್ನ 12.30 ರಿಂದ 1.30ರವರೆಗೆ ನಡೆಯುವ ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವದ ಕುರಿತ ವಿಚಾರ ಗೋಷ್ಠಿಯಲ್ಲಿ ಡಾ. ಮಹಮ್ಮದ್ ಮುಸ್ತಾಫಾ ವಿಷಯ ಮಂಡನೆ ಮಾಡಿದರೆ ಅಕ್ಷತಾ ಕೆ ಸಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಕನ್ನಡ ನಾಡು ನುಡಿ – ಟಿಪ್ಪು ಕೊಡುಗೆಗಳು ವಿಷಯದ ಕುರಿತು ಟಿ ಗುರುರಾಜ್ ವಿಷಯ ಮಂಡನೆ ಮಾಡಿದರೆ ಕಲೀಂ ಪಾಷಾರವರು ಪ್ರತಿಕ್ರಿಯೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಲಿಂಗದೇವರು ಹಳೆಮನೆ ಸಂಪಾದಕತ್ವದ ‘ಧೀರ ಟಿಪ್ಪು ಲಾವಣಿಗಳು ಮತ್ತು ಟಿ ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು – ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕಗಳ ಬಿಡುಗಡೆ ನಡೆಯಲಿದೆ. ನಾ ದಿವಾಕರ್‌ರವರು ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 1.30 ರಿಂದ 2:00ರವರೆ ಆಹಾರ ಗೋಷ್ಠಿ ನಡೆಯಲಿದೆ. ಆಹಾರದ ಮೇಲಿನ ರಾಜಕಾರಣ ಮತ್ತು ದೌರ್ಜನ್ಯ ವಿಷಯದ ಕುರಿತು ರಂಗನಾಥ ಕಂಟನಕುಂಟೆ ಮತ್ತು ಪಲ್ಲವಿ ಇಡೂ‌ರುರವರು ವಿಷಯ ಮಂಡಿಸುತ್ತಾರೆ. ಊಟದ ಕೌಂಟರ್‌ನಲ್ಲಿ ಬಹುತ್ವವನ್ನು ಸಾರು ಉಪ್ಪಿನಕಾಯಿ, ತರಕಾರಿ ಪಲ್ಯ, ಅನ್ನ, ಮೀನು ಸಾರು, ತರಕಾರಿ ಸಾಂಬರ್, ಗೀ ರೈಸ್, ದಾಲ್, ಚಿಕನ್ ಕಬಾಬ್ ಮತ್ತು ಪಾಯಸ ಇರುವ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

ಮದ್ಯಾಹ್ನ 2:00 ರಿಂದ 3:00ವರೆಗೆ ಕವಿಗೋಷ್ಠಿ ನಡೆಯಲಿದ್ದು, ಬಂಜಗೆರೆ ಜಯಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎಚ್ ಆರ್ ಸುಜಾತರವರು ಆಶಯ ಮಾತುಗಳನ್ನಾಡಿದರೆ, ದೀಪದ ಮಲ್ಲಿ, ದಾದಪೀರ್ ಜೈಮನ್, ಚಾಂದ್ ಪಾಷಾ, ಪ್ರಕಾಶ್ ಮಂಟೇದಾ, ಟೀನಾ ಶಶಿಕಾಂತ್, ಸಿರಾಜ್ ಬಿಸ್ರಳ್ಳಿ, ಫಾತಿಮಾ ರಾಲಿಯಾ, ಹಾಜಿರ ಖಾನಂ, ಚಾಂದಿನಿ, ಶಿವರಾಜ್ ಮೋತಿ, ಪಂಚಮಿ ಎಸ್, ಸಂಘಮಿತ್ರೆ, ಮಂಜುನಾಥ ಮಾಗೊದಿ, ಪುನೀತ್, ಧನಂಜಯ ದೇವರಹಳ್ಳಿ, ವಿಕಾಸ್ ಮೌರ್ಯ, ರೂಮಿ ಹರೀಶ್ ಮತ್ತು ಪ್ರವೀಣ್ ಬಿ ಎಂ ಕವನ ವಾಚಿಸಲಿದ್ದಾರೆ.

ಸೌಹಾರ್ದತೆ ಮತ್ತು ಕನ್ನಡತನ ವಿಷಯದ ಕುರಿತ ಮಧ್ಯಾಹ್ನದ ಗೋಷ್ಟಿಯಲ್ಲಿ ಚಿಂತಕರಾದ ರಾಜೇಂದ್ರ ಚೆನ್ನಿಯವರು ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದಾಳಿ : ಸಾಹಿತ್ಯ ಲೋಕದ ಜವಾಬ್ದಾರಿಗಳು ವಿಷಯದ ಕುರಿತು ಮಾವಳ್ಳಿ ಶಂಕರ್ ಮುನೀರ್ ಕಾಟಿಪಳ್ಳ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡವನ್ನು ಬೆಳಗಿಸಿದ ಕ್ರೈಸ್ತ ಮಿಷನರಿಗಳು ವಿಷಯದ ಕುರಿತು ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ವಿಷಯ ಮಂಡನೆ ಮಾಡಿದರೆ ಪ್ರಿಯಾಂಕ ಮಾವಿನಕರ್ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 5:00 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಡಾ. ಜಿ ರಾಮಕೃಷ್ಣರವರು ಅಧ್ಯಕ್ಷತೆ ವಹಿಸಿದರೆ ಡಾ ಕೆ ಮರುಳಸಿದ್ದಪ್ಪನವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿ. ಬಸವಲಿಂಗಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ದು. ಸರಸ್ವತಿ, ಯು. ಟಿ ಫರ್ಜಾನ, ವಸಂತರಾಜ್, ಅನಂತ್ ನಾಯಕ್, ರವಿಕುಮಾರ್ ಟೆಲೆಕ್ಸ್ ಭಾಗವಹಿಸಲಿದ್ದಾರೆ.

ಬೀದಿಗೆ ಬರಲಿ ಕಲೆ – ಸಾಹಿತ್ಯ ಗೋಷ್ಟಿಯಲ್ಲಿ ಸಮುದಾಯ ಬೆಂಗಳೂರು ವತಿಯಿಂದ ಬೀದಿ ನಾಟಕ ನಡೆಯಲಿದೆ. ಅದಕ್ಕೂ ಮೊದಲು ಗುಂಡಣ್ಣ ಚಿಕ್ಕಮಗಳೂರುರವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮ್ಮೇಳನ ಆಯ ವ್ಯಯ ವಿವರ ಘೋಷಿಸಬೇಕಿತ್ತು. ಅಂದಾಜು ವೆಚ್ಚ ಮಾಹಿತಿ. ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧದ ಸದರಿ ಸಮ್ಮೇಳನದ ಕ್ರಿಯಾಯೋಜನೆಯನ್ನೂ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು.

  2. ಕಾತರದಿಂದ ಕಾಯುತ್ತಿರುವ ಜನ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ; ಜಯಧ್ವನಿ ಮೊಳಗಲಿ.

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...