Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...