Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...