Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...