Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...