Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...