Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...