Homeಮುಖಪುಟಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ...

ಕಲಬುರಗಿಯಲ್ಲಿ ಬೃಹತ್‌ ಜನಸಾಗರದ ನಡುವೆ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶ…

- Advertisement -
- Advertisement -

ಕಲಬುರಗಿಯಲ್ಲಿ ಇಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿ ಜನಾಂದೋಲನ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಕರ್ನಾಟಕ ಪೀಪಲ್ಸ್‌ ಫೋರಂ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿನಾಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಚಿಂತಕರಾದ ಸ್ವಾಮಿ ಅಗ್ನಿವೇಶ್, ಸಿ.ಎಂ ಇಬ್ರಾಹಿಂ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮುಸ್ಲಿಂ ಮುಖಂಡರಾದ ತಸ್ಲೀಫ್‌ ಶರ್ಮಾ, ಚಿಂತಕಿ ಕೆ.ನೀಲಾ, ಸ್ಟೆನಿ ಲೋಬೋ ಸೇರಿದಂತೆ ಹಲವಾರು ಜನ ಭಾಗವಹಿಸಿ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದಾರೆ.

ನಮ್ಮ ದೇಶಪ್ರೇಮವನ್ನು ನಾವು ನಮ್ಮ ಸಂವಿಧಾನವನ್ನು ಗೌರವಿಸುವುದರ ಮೂಲಕ ತೋರಿಸುತ್ತೇವೆ. ಸಂವಿಧಾನದ ವಿರುದ್ಧ ಕಾನೂನು ರೂಪಿಸುವ ಮೂಲಕ ನೀವು ದೇಶದ್ರೋಹಿಗಳು ಎಂದು ತೋರಿಸುತ್ತಿದ್ದೀರಿ ಎಂದು ಸಿಪಿಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿ ತಿಳಿಸಿದ್ದಾರೆ.

ಹಿಂದೂ ಧರ್ಮದ ಹ ಮತ್ತು ಮುಸ್ಲಿಂ ಮ್ ಸೇರಿದರೆ ಹಮ್‌ ಆಗುತ್ತದೆ. ಇದು ನಮ್ಮ ದೇಶ ಎಂದ ಯೆಚೂರಿಯವರು, ಎನ್‌ಪಿಆರ್‌ಗೆ ನಾವು ಮಾಹಿತಿ ಕೊಡುವುದಿಲ್ಲ, ಎನ್‌ಆರ್‌ಸಿಗೆ ನಾವು ದಾಖಲೆ ತೋರಿಸುವುದಿಲ್ಲ ಎಂದು ಘೋಷಿಸಿದರು.

ಬೇವುಕೂಫ್‌ ಸರ್ಕಾರ : ಸಸಿಕಾಂತ್‌ ಸೆಂಥಿಲ್‌

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಎನ್‌ಆರ್‌ಸಿಗೆ ರೂಲ್ಸ್ ಇನ್ನು ಮಾಡಿಲ್ಲ ಎಂಬುದು ಮೊದಲ ಸುಳ್ಳಾಗಿದೆ. 2003ರಲ್ಲಿಯೇ ರೂಲ್ಸ್‌ ಮಾಡಿದ್ದಾರೆ. ಎನ್‌ಆರ್‌ಸಿ ಬಗ್ಗೆ ನಾನು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಇನ್ನೊಂದು ಕಡೆ ಗೃಹಮಂತ್ರಿ ಅಮಿತ್‌ ಶಾ ಎನ್‌ಆರ್‌ಸಿ ಜಾರಿಗೆ ತರುವುದಾಗಿ ಹತ್ತು ಬಾರಿ ಹೇಳಿದ್ದಾರೆ ಯಾರನ್ನು ನಂಬುವುದು, ಬೇವುಕೂಫ್‌ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಎನ್‌ಪಿಆರ್‌ ಎನ್‌ಆರ್‌ಸಿಗೂ ಸಂಬಂಧವಿಲ್ಲ ಎಂದು ಒಬ್ಬ ಸಂಸದರು ಹೇಳುತ್ತಾರೆ. ಇದು ಎರಡನೇ ಸುಳ್ಳು. ಎನ್‌ಪಿಆರ್‌ಗೆ ನೀವು ಸ್ಪಂದಿಸದಿದ್ದರೆ ನಿಮಗೆ ಗ್ಯಾಸ್‌ ಕೊಡುವುದಿಲ್ಲ, ನಿಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳುತ್ತಾರೆ. ಅದು ಸುಳ್ಳು.. ಅದಕ್ಕೂ ಜನಗಣತಿಗೂ ಸಂಬಂಧವಿಲ್ಲ ಎಂದು ಸೆಂಥಿಲ್‌ ತಿಳಿಸಿದರು.

ಎನ್‌ಪಿ‍ಆ‌ರ್‌ಗೆ ನಾವು ಮಾಹಿತಿ ಕೊಡುವುದಿಲ್ಲ. ಎನ್‌ಪಿಆರ್‌ ಮತ್ತು ಜನಗಣತಿ ಒಟ್ಟಿಗೆ ಬಂದರೆ ಜನಗಣತಿಗೆ ಮಾತ್ರ ಉತ್ತರ ಕೊಡಿ. ಮುಂಬರುವ ದಿನಗಳಲ್ಲಿ  ನಮ್ಮ ಐಕ್ಯತೆಯನ್ನು ಸಡಿಲವಾಗಲು ನಾವು ಬಿಡಬಾರದು.. ದುಡಿಯುವ ವರ್ಗ ಬಹುಸಂಖ್ಯಾತರಾಗಿದ್ದು ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಅವರು ಕರೆ ನೀಡಿದ್ದರು.

ಇಷ್ಟು ದಿನ ದೇಶದ ಹೆಸರಿನಲ್ಲಿ ಸರ್ಕಾರ ನಮಗೆ ಮೋಸ ಮಾಡಿದ್ದರು. ನಮ್ಮ ಪ್ರತಿಭಟನೆಗಳ ಮೂಲಕ ಮೊದಲ ಬಾರಿಗೆ ಅವರು ನಿಜವಾದ ದೇಶವನ್ನು ನೋಡುತ್ತಿದ್ದಾರೆ. ಹಿಂಸೆಗೆ ಎಲ್ಲಿಯೂ ಅವಕಾಶಕೊಡಬೇಡಿ ಎಂದು ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...