Homeಮುಖಪುಟಒಬಿಸಿ ಮೀಸಲಾತಿ ಜಾರಿ ಬಳಿಕ ಜನಸಂಘವು ಕರ್ಪೂರಿ ಠಾಕೂರ್ ಸರ್ಕಾರವನ್ನು ಉರುಳಿಸಿತು: ಮೋದಿಯ...

ಒಬಿಸಿ ಮೀಸಲಾತಿ ಜಾರಿ ಬಳಿಕ ಜನಸಂಘವು ಕರ್ಪೂರಿ ಠಾಕೂರ್ ಸರ್ಕಾರವನ್ನು ಉರುಳಿಸಿತು: ಮೋದಿಯ ಕರ್ಪೂರಿ ಗ್ರಾಮ ಭೇಟಿಗೆ ಕಾಂಗ್ರೆಸ್ ಟೀಕೆ

- Advertisement -
- Advertisement -

ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹಳೆ ವಿಷಯಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಕ್ರವಾರ (ಅ.24) ಪೋಸ್ಟ್ ಹಾಕಿರುವ ರಾಷ್ಟ್ರೀಯ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “1979ರ ಏಪ್ರಿಲ್‌ನಲ್ಲಿ ಜನಸಂಘವು ಕರ್ಪೂರಿ ಠಾಕೂರ್ ಅವರ ಬಿಹಾರ ಸರ್ಕಾರವನ್ನು ಉರುಳಿಸಿರುವುದು ಸತ್ಯ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, “ಆಗ ಕರ್ಪೂರಿ ಠಾಕೂರ್ ಅವರನ್ನು ಆರ್‌ಎಸ್‌ಎಸ್‌ ಮತ್ತು ಜನಸಂಘದ ನಾಯಕರು ಅತ್ಯಂತ ಕೆಟ್ಟದಾಗಿ ನಿಂದಿಸಿದ್ದರು ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಕೇಳಿದ್ದಾರೆ.

“ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಒದಗಿಸುವ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮತ್ತು ರಾಜ್ಯದಲ್ಲಿನ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಏಪ್ರಿಲ್ 28, 2024ರಂದು ಪ್ರಧಾನ ಮಂತ್ರಿಯವರು ಜಾತಿ ಗಣತಿಗಾಗಿ ಒತ್ತಾಯಿಸಿದವರನ್ನು ‘ನಗರ ನಕ್ಸಲರು’ ಎಂದಿರುವುದು ಸತ್ಯವಲ್ಲವೇ?, ಸಂಸತ್ತಿನಲ್ಲಿ (ಜುಲೈ 20, 2021) ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ (ಸೆಪ್ಟೆಂಬರ್ 21, 2021) ಅವರ ಸರ್ಕಾರವು ಜಾತಿ ಗಣತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿತಲ್ಲವೇ? ಎಂದಿದ್ದಾರೆ.

“ಭಾರತದ ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮೋದಿ ಮತ್ತು ಬಿಹಾರದ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ. ಕಾಂಗ್ರೆಸ್ ಸರ್ಕಾರ ಸೆಪ್ಟೆಂಬರ್ 1994ರಲ್ಲೇ  ತಮಿಳುನಾಡಿನಲ್ಲಿ ಇದೇ ರೀತಿಯ ಕಾನೂನಿಗೆ ರಕ್ಷಣೆ ಒದಗಿಸಿದೆ” ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಬಿಹಾರದ ಸಮಸ್ತಿಪುರ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಶುಕ್ರವಾರ ಎರಡು ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳವಾದ ಕರ್ಪುರಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಬಿಹಾರದ ಪ್ರಸಿದ್ದ ರಾಜಕೀಯ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಕಳೆದ ವರ್ಷ ಎನ್‌ಡಿಎ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿತ್ತು.

ಬಿಹಾರ ಚುನಾವಣೆ: ಆರ್‌ಜೆಡಿ ಬೆಂಬಲಿಸಿ ತಮ್ಮ ನಾಮಪತ್ರ ಹಿಂಪಡೆದ ನಾಲ್ವರು ಮಹಾಘಟಬಂಧನ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...