Homeಮುಖಪುಟ'ಜನ ಗಣ ಮನ' ಮತ್ತು 'ವಂದೇ ಮಾತರಂ' ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

- Advertisement -
- Advertisement -

ರಾಷ್ಟ್ರಗೀತೆ ‘ಜನ ಗಣ ಮನ’ದೊಂದಿಗೆ ‘ವಂದೇ ಮಾತರಂ’ಗೆ ಕೂಡಾ ಸಮಾನ ಸ್ಥಾನಮಾನ ನೀಡಬೇಕು ಎಂಬ ಅರ್ಜಿಗೆ ಪ್ರತಿಕ್ರಿಯಿಸಿರುವ ಒಕ್ಕೂಟ ಸರ್ಕಾರವು, ‘‘ಎರಡೂ ಸಮಾನ ಹಂತದಲ್ಲಿ ಇದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಎರಡಕ್ಕೂ ಸಮಾನ ಗೌರವ ನೀಡಬೇಕು” ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

“..ಭಾರತದ ಜನರ ಭಾವನೆಗಳು ಮತ್ತು ಮನಸ್ಸಿನಲ್ಲಿ ಜನಗಣಮಣ ವಿಶಿಷ್ಟ ಮತ್ತು ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ” ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವಾಲಯವು ಹೈಕೋರ್ಟ್‌ಗೆ ನೀಡಿದ ತನ್ನ ಉತ್ತರದಲ್ಲಿ, ಜನವರಿ 24, 1950 ರಂದು ಭಾರತದ ಸಂವಿಧಾನ ಸಭೆಯ ಅಧ್ಯಕ್ಷರು ‘ಜನ ಗಣ ಮನ’ ವನ್ನು ಭಾರತದ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡರು. ರಾಷ್ಟ್ರಗೀತೆಯನ್ನು ನುಡಿಸುವ ಅಥವಾ ಹಾಡಬೇಕಾದ ವಿಧಾನ ಮತ್ತು ಸಂದರ್ಭಗಳಿಗೆ ಸಂಬಂಧಿಸಿದಂತೆ ‘ಭಾರತದ ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶಗಳನ್ನು’ ಹೊರಡಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ‘ಹಲೋ’ ಪಾಶ್ಚಿಮಾತ್ಯ; ಮೊಬೈಲ್ ಸಂಭಾಷಣೆ ವೇಳೆ ‘ವಂದೇ ಮಾತರಂ’ ಬಳಸಿ!: ಮಹಾರಾಷ್ಟ್ರ ಸರ್ಕಾರ

1971 ರಲ್ಲಿ, ರಾಷ್ಟ್ರಗೀತೆ ಹಾಡುವುದನ್ನು ತಡೆಯುವ ಅಥವಾ ಅಂತಹ ಗಾಯನದಲ್ಲಿ ತೊಡಗಿರುವ ಯಾವುದೇ ಸಭೆಗೆ ಅಡ್ಡಿಪಡಿಸುವ ಕ್ರಮವನ್ನು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ ಕಾಯಿದೆ, 1971 ರ ಮೂಲಕ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಯಿತು.

ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯನ್ನು ಒಂದೇ ರೀತಿ ನಡೆಸಿಕೊಳ್ಳಬೇಕು ಮತ್ತು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗೆ ಮಾರ್ಗಸೂಚಿಗಳನ್ನು ರೂಪಿಸಲು ಹಾಗೂ ಅದಕ್ಕೆ ಭಾರತದ ರಾಷ್ಟ್ರಗೀತೆಗೆ ಸಮಾನವಾದ ಗೌರವ ಮತ್ತು ಸ್ಥಾನಮಾನವನ್ನು ನೀಡುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಗೆ ಒಕ್ಕೂಟ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ವಿಷಯದಲ್ಲಿ ರಾಷ್ಟ್ರಗೀತೆಯ ರೀತಿಯಂತೆ ಸರ್ಕಾರ ದಂಡದ ನಿಬಂಧನೆಗಳನ್ನು ಮಾಡಿಲ್ಲ ಮತ್ತು ಅದನ್ನು ಯಾವ ಸಂದರ್ಭಗಳಲ್ಲಿ ಹಾಡಬಹುದು ಅಥವಾ ನುಡಿಸಬಹುದು ಎಂಬ ಬಗ್ಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ ಎಂದು ಒಕ್ಕೂಟ ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಜನವರಿ 17, 2017 ರಂದು ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪಿನಲ್ಲಿ, “ಭಾರತದ ಸಂವಿಧಾನದ 51 ಎ (ಎ) ವಿಧಿಯು ‘ರಾಷ್ಟ್ರೀಯ ಗೀತೆ’ಯನ್ನು ಉಲ್ಲೇಖಿಸುವುದಿಲ್ಲ. ಇದು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಮಾತ್ರ ಉಲ್ಲೇಖಿಸುತ್ತದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...