Homeಕರ್ನಾಟಕಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

ಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

- Advertisement -
- Advertisement -

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದು ಒತ್ತಾಯಿಸಿರುವ ಅವರು, ಜನ ಬರ್ಬಾದ್ ಯಾತ್ರೆ ಹ್ಯಾಷ್‌ಟ್ಯಾಗ್‌ನಲ್ಲಿ ಸರಣಿ ಟ್ವೀಟ್‌ ಮಾಡಿದ್ದಾರೆ.

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಬಿಜೆಪಿ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿ ಯಿಂದ ಮಾಡುತ್ತಿರುವ ಈ ಯಾತ್ರೆ ಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭರ್ಬದ್ ಆಗಬಹುದು ಎನ್ನುವ ಭಯ ಸಿದ್ದರಾಮುಲ್ಲಾ ಖಾನ್ ಗೆ .

  2. ಈ ಬಿಜೆಪಿ ಯವರಿಗೆ ಯಾತ್ರೆ ಜಾತ್ರೆ ಯಲ್ಲದೆ ಬೇರೆ ಏನಾದರೂ ಗೊತ್ತಾ,ಶವದಲ್ಲೂ ರಾಜಕೀಯ ಮಾಡುವ ಟೀಂ ಅವರದ್ದು

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...