Homeಚಳವಳಿಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

- Advertisement -
- Advertisement -

ಕೊರೊನಾ ಪರಿಹಾರವಾಗಿ ಸಮಗ್ರ ಪ್ಯಾಕೇಜ್‌‌ ನೀಡಬೇಕು ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಜೂನ್‌ 22 ರ ಮಂಗಳವಾರ (ನಾಳೆ) ದಂದು ವಸತಿ ಸಚಿವ ವಿ.ಸೋಮಣ್ಣ ಅವರ ನಿವಾಸದ ಎದುರು ಖಾಲಿ ಚೀಲಗಳನ್ನು ಸುಟ್ಟು ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಯು ಬೆಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದ ಇತರ ಕಡೆಗಳಲ್ಲೂ ಜಿಲ್ಲೆಗಳ ಉಸ್ತುವಾರಿ ಮಂತ್ರಿ ಹಾಗೂ ಶಾಸಕರುಗಳ ಕಛೇರಿಯ ಮುಂದೆಯು ನಡೆಯಲಿದೆ. ಅದರಂತೆ ಬೆಂಗಳೂರಿನ ಹೋರಾಟವು ಸಚಿವ ಸೋಮಣ್ಣ ಅವರ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸ ಮುಂದೆ ನಡೆಯಲಿದೆ ಎಂದು ‘ಜನಾಗ್ರಹ ಆಂದೋಲನ’ದ ಸಂಚಾಲಕಿಯಾದ ಬಿ.ಟಿ ಲಲಿತ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

“ಕೊರೊನಾ ಎರಡನೇ ಅಲೆ ಅಪ್ಪಳಿಸಿದಾಗಿನಿಂದ ಅದನ್ನು ಎದುರಿಸಲು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುವ ಜನಸಾಮಾನ್ಯರ ದನಿಯಾಗಿ ಜನಾಗ್ರಹ ಆಂದೋಲನವು ರೂಪತಳೆದಿದೆ. ರಾಜ್ಯದ ನೂರಾರು ಗಣ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ಮುಖ್ಯಮಂತ್ರಿಗೆ ಮೂರು ಬಾರಿ ಪತ್ರ ಬರೆದಿದ್ದಾರೆ ಮತ್ತು ಎರಡು ಸುತ್ತಿನ ರಾಜ್ಯವ್ಯಾಪಿ ಪ್ರತಿಭಟನೆಗಳೂ ನಡೆದಿವೆ. ಜನಾಗ್ರಹ, ಜನಪರ ಸಂಘಟನೆಗಳು ಹಾಗೂ ಮಾಧ್ಯಮಗಳು ಮಾಡಿದ ಒತ್ತಡಗಳಿಂದಾಗಿ ಎರಡು ಪ್ಯಾಕೇಜುಗಳನ್ನು ಸರ್ಕಾರ ಘೋಷಿಸಿದೆ, ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಇವು ಏನಕ್ಕೂ ಸಾಲದ ಅರೆಮನಸ್ಸಿನ ಅರೆಬರೆ ಕ್ರಮಗಳಾಗಿವೆ” ಎಂದು ಜನಾಗ್ರಹ ಆಂದೋಲನವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕುಟುಂಬಗಳು ಕುಸಿದು ಕೂತಿದ್ದು, ಬಂಧುಗಳನ್ನು ಕಳೆದುಕೊಂಡ ಕುಟುಂಬಗಳು ಕಣ್ಣೀರಿನಲ್ಲಿ ಮುಳುಗಿವೆ. ಆರ್ಥಿಕತೆ ನೆಲಕಚ್ಚಿದ್ದು ಇನ್ನೂ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುತ್ತಿದೆ. ಇದರಿಂದಾಗಿ ದುಡಿಮೆ ಪ್ರಾರಂಭವಾಗುವ, ಪರಿಸ್ಥಿತಿ ಸುಧಾರಿಸುವ ಆಶಾಭಾವನೆಯು ದೂರವಿದೆ. ಅಲ್ಲದೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗುತ್ತಿದೆ. ಇದೊಂದು ಅಸಮಾನ್ಯ ಪರಿಸ್ಥಿತಿ ಆಗಿದೆ” ಎಂದು ಹೇಳಿಕೆ ತಿಳಿಸಿದೆ.

“ಈ ಅಸಮಾನ್ಯ ಪರಿಸ್ಥಿತಿಯು ಅಸಮಾನ್ಯ ಕ್ರಮಗಳನ್ನು ಕೇಳುತ್ತಿದ್ದು, ಆದರೆ ಸರ್ಕಾರ ಅದನ್ನು ದಿಟ್ಟವಾಗಿ ಎದುರಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ. ಇಡೀ ರಾಜ್ಯ ಒಕ್ಕೊರಲಿನೊಂದಿಗೆ ಸರ್ಕಾರಕ್ಕೆ ಕೇಳಿಸುವಂತೆ, ಸರ್ಕಾರ ಕಾರ್ಯಪ್ರವೃತ್ತವಾಗುವಂತೆ ಮಾಡಬೇಕಿದೆ. ಇದರಲ್ಲಿ ಜನ ಪ್ರತಿನಿಧಿಗಳ ಪಾತ್ರ ಮುಖ್ಯವಾಗಿದೆ. ಜನಸಾಮಾನ್ಯರು ಮಾತ್ರವಲ್ಲ ಜನಪ್ರತಿನಿಧಿಗಳಾಗಿ ಅವರೂ ಸಹ ಸರ್ಕಾರವನ್ನು ಒತ್ತಾಯಿಸಬೇಕಿದೆ. ಹಾಗಾಗಿ ರಾಜ್ಯವ್ಯಾಪಿಯಾಗಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿ ಶಾಸಕರ ಕಛೇರಿಗಳ ಮುಂದೆ ಜನಾಗ್ರಹ ನಡೆಸುತ್ತಿದ್ದೇವೆ” ಎಂದು ಜನಾಗ್ರಹ ಆಂದೋಲನ ಸಂಚಾಲನಾ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...