Homeಚಳವಳಿಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

- Advertisement -
- Advertisement -

ಕೊರೊನಾ ಪರಿಹಾರವಾಗಿ ಸಮಗ್ರ ಪ್ಯಾಕೇಜ್‌‌ ನೀಡಬೇಕು ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಜೂನ್‌ 22 ರ ಮಂಗಳವಾರ (ನಾಳೆ) ದಂದು ವಸತಿ ಸಚಿವ ವಿ.ಸೋಮಣ್ಣ ಅವರ ನಿವಾಸದ ಎದುರು ಖಾಲಿ ಚೀಲಗಳನ್ನು ಸುಟ್ಟು ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಯು ಬೆಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದ ಇತರ ಕಡೆಗಳಲ್ಲೂ ಜಿಲ್ಲೆಗಳ ಉಸ್ತುವಾರಿ ಮಂತ್ರಿ ಹಾಗೂ ಶಾಸಕರುಗಳ ಕಛೇರಿಯ ಮುಂದೆಯು ನಡೆಯಲಿದೆ. ಅದರಂತೆ ಬೆಂಗಳೂರಿನ ಹೋರಾಟವು ಸಚಿವ ಸೋಮಣ್ಣ ಅವರ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸ ಮುಂದೆ ನಡೆಯಲಿದೆ ಎಂದು ‘ಜನಾಗ್ರಹ ಆಂದೋಲನ’ದ ಸಂಚಾಲಕಿಯಾದ ಬಿ.ಟಿ ಲಲಿತ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

“ಕೊರೊನಾ ಎರಡನೇ ಅಲೆ ಅಪ್ಪಳಿಸಿದಾಗಿನಿಂದ ಅದನ್ನು ಎದುರಿಸಲು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುವ ಜನಸಾಮಾನ್ಯರ ದನಿಯಾಗಿ ಜನಾಗ್ರಹ ಆಂದೋಲನವು ರೂಪತಳೆದಿದೆ. ರಾಜ್ಯದ ನೂರಾರು ಗಣ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ಮುಖ್ಯಮಂತ್ರಿಗೆ ಮೂರು ಬಾರಿ ಪತ್ರ ಬರೆದಿದ್ದಾರೆ ಮತ್ತು ಎರಡು ಸುತ್ತಿನ ರಾಜ್ಯವ್ಯಾಪಿ ಪ್ರತಿಭಟನೆಗಳೂ ನಡೆದಿವೆ. ಜನಾಗ್ರಹ, ಜನಪರ ಸಂಘಟನೆಗಳು ಹಾಗೂ ಮಾಧ್ಯಮಗಳು ಮಾಡಿದ ಒತ್ತಡಗಳಿಂದಾಗಿ ಎರಡು ಪ್ಯಾಕೇಜುಗಳನ್ನು ಸರ್ಕಾರ ಘೋಷಿಸಿದೆ, ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಇವು ಏನಕ್ಕೂ ಸಾಲದ ಅರೆಮನಸ್ಸಿನ ಅರೆಬರೆ ಕ್ರಮಗಳಾಗಿವೆ” ಎಂದು ಜನಾಗ್ರಹ ಆಂದೋಲನವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕುಟುಂಬಗಳು ಕುಸಿದು ಕೂತಿದ್ದು, ಬಂಧುಗಳನ್ನು ಕಳೆದುಕೊಂಡ ಕುಟುಂಬಗಳು ಕಣ್ಣೀರಿನಲ್ಲಿ ಮುಳುಗಿವೆ. ಆರ್ಥಿಕತೆ ನೆಲಕಚ್ಚಿದ್ದು ಇನ್ನೂ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುತ್ತಿದೆ. ಇದರಿಂದಾಗಿ ದುಡಿಮೆ ಪ್ರಾರಂಭವಾಗುವ, ಪರಿಸ್ಥಿತಿ ಸುಧಾರಿಸುವ ಆಶಾಭಾವನೆಯು ದೂರವಿದೆ. ಅಲ್ಲದೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗುತ್ತಿದೆ. ಇದೊಂದು ಅಸಮಾನ್ಯ ಪರಿಸ್ಥಿತಿ ಆಗಿದೆ” ಎಂದು ಹೇಳಿಕೆ ತಿಳಿಸಿದೆ.

“ಈ ಅಸಮಾನ್ಯ ಪರಿಸ್ಥಿತಿಯು ಅಸಮಾನ್ಯ ಕ್ರಮಗಳನ್ನು ಕೇಳುತ್ತಿದ್ದು, ಆದರೆ ಸರ್ಕಾರ ಅದನ್ನು ದಿಟ್ಟವಾಗಿ ಎದುರಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ. ಇಡೀ ರಾಜ್ಯ ಒಕ್ಕೊರಲಿನೊಂದಿಗೆ ಸರ್ಕಾರಕ್ಕೆ ಕೇಳಿಸುವಂತೆ, ಸರ್ಕಾರ ಕಾರ್ಯಪ್ರವೃತ್ತವಾಗುವಂತೆ ಮಾಡಬೇಕಿದೆ. ಇದರಲ್ಲಿ ಜನ ಪ್ರತಿನಿಧಿಗಳ ಪಾತ್ರ ಮುಖ್ಯವಾಗಿದೆ. ಜನಸಾಮಾನ್ಯರು ಮಾತ್ರವಲ್ಲ ಜನಪ್ರತಿನಿಧಿಗಳಾಗಿ ಅವರೂ ಸಹ ಸರ್ಕಾರವನ್ನು ಒತ್ತಾಯಿಸಬೇಕಿದೆ. ಹಾಗಾಗಿ ರಾಜ್ಯವ್ಯಾಪಿಯಾಗಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿ ಶಾಸಕರ ಕಛೇರಿಗಳ ಮುಂದೆ ಜನಾಗ್ರಹ ನಡೆಸುತ್ತಿದ್ದೇವೆ” ಎಂದು ಜನಾಗ್ರಹ ಆಂದೋಲನ ಸಂಚಾಲನಾ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...