Homeಚಳವಳಿಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

- Advertisement -
- Advertisement -

ಕೊರೊನಾ ಪರಿಹಾರವಾಗಿ ಸಮಗ್ರ ಪ್ಯಾಕೇಜ್‌‌ ನೀಡಬೇಕು ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಜೂನ್‌ 22 ರ ಮಂಗಳವಾರ (ನಾಳೆ) ದಂದು ವಸತಿ ಸಚಿವ ವಿ.ಸೋಮಣ್ಣ ಅವರ ನಿವಾಸದ ಎದುರು ಖಾಲಿ ಚೀಲಗಳನ್ನು ಸುಟ್ಟು ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಯು ಬೆಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದ ಇತರ ಕಡೆಗಳಲ್ಲೂ ಜಿಲ್ಲೆಗಳ ಉಸ್ತುವಾರಿ ಮಂತ್ರಿ ಹಾಗೂ ಶಾಸಕರುಗಳ ಕಛೇರಿಯ ಮುಂದೆಯು ನಡೆಯಲಿದೆ. ಅದರಂತೆ ಬೆಂಗಳೂರಿನ ಹೋರಾಟವು ಸಚಿವ ಸೋಮಣ್ಣ ಅವರ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸ ಮುಂದೆ ನಡೆಯಲಿದೆ ಎಂದು ‘ಜನಾಗ್ರಹ ಆಂದೋಲನ’ದ ಸಂಚಾಲಕಿಯಾದ ಬಿ.ಟಿ ಲಲಿತ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

“ಕೊರೊನಾ ಎರಡನೇ ಅಲೆ ಅಪ್ಪಳಿಸಿದಾಗಿನಿಂದ ಅದನ್ನು ಎದುರಿಸಲು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುವ ಜನಸಾಮಾನ್ಯರ ದನಿಯಾಗಿ ಜನಾಗ್ರಹ ಆಂದೋಲನವು ರೂಪತಳೆದಿದೆ. ರಾಜ್ಯದ ನೂರಾರು ಗಣ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ಮುಖ್ಯಮಂತ್ರಿಗೆ ಮೂರು ಬಾರಿ ಪತ್ರ ಬರೆದಿದ್ದಾರೆ ಮತ್ತು ಎರಡು ಸುತ್ತಿನ ರಾಜ್ಯವ್ಯಾಪಿ ಪ್ರತಿಭಟನೆಗಳೂ ನಡೆದಿವೆ. ಜನಾಗ್ರಹ, ಜನಪರ ಸಂಘಟನೆಗಳು ಹಾಗೂ ಮಾಧ್ಯಮಗಳು ಮಾಡಿದ ಒತ್ತಡಗಳಿಂದಾಗಿ ಎರಡು ಪ್ಯಾಕೇಜುಗಳನ್ನು ಸರ್ಕಾರ ಘೋಷಿಸಿದೆ, ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಇವು ಏನಕ್ಕೂ ಸಾಲದ ಅರೆಮನಸ್ಸಿನ ಅರೆಬರೆ ಕ್ರಮಗಳಾಗಿವೆ” ಎಂದು ಜನಾಗ್ರಹ ಆಂದೋಲನವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕುಟುಂಬಗಳು ಕುಸಿದು ಕೂತಿದ್ದು, ಬಂಧುಗಳನ್ನು ಕಳೆದುಕೊಂಡ ಕುಟುಂಬಗಳು ಕಣ್ಣೀರಿನಲ್ಲಿ ಮುಳುಗಿವೆ. ಆರ್ಥಿಕತೆ ನೆಲಕಚ್ಚಿದ್ದು ಇನ್ನೂ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುತ್ತಿದೆ. ಇದರಿಂದಾಗಿ ದುಡಿಮೆ ಪ್ರಾರಂಭವಾಗುವ, ಪರಿಸ್ಥಿತಿ ಸುಧಾರಿಸುವ ಆಶಾಭಾವನೆಯು ದೂರವಿದೆ. ಅಲ್ಲದೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗುತ್ತಿದೆ. ಇದೊಂದು ಅಸಮಾನ್ಯ ಪರಿಸ್ಥಿತಿ ಆಗಿದೆ” ಎಂದು ಹೇಳಿಕೆ ತಿಳಿಸಿದೆ.

“ಈ ಅಸಮಾನ್ಯ ಪರಿಸ್ಥಿತಿಯು ಅಸಮಾನ್ಯ ಕ್ರಮಗಳನ್ನು ಕೇಳುತ್ತಿದ್ದು, ಆದರೆ ಸರ್ಕಾರ ಅದನ್ನು ದಿಟ್ಟವಾಗಿ ಎದುರಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ. ಇಡೀ ರಾಜ್ಯ ಒಕ್ಕೊರಲಿನೊಂದಿಗೆ ಸರ್ಕಾರಕ್ಕೆ ಕೇಳಿಸುವಂತೆ, ಸರ್ಕಾರ ಕಾರ್ಯಪ್ರವೃತ್ತವಾಗುವಂತೆ ಮಾಡಬೇಕಿದೆ. ಇದರಲ್ಲಿ ಜನ ಪ್ರತಿನಿಧಿಗಳ ಪಾತ್ರ ಮುಖ್ಯವಾಗಿದೆ. ಜನಸಾಮಾನ್ಯರು ಮಾತ್ರವಲ್ಲ ಜನಪ್ರತಿನಿಧಿಗಳಾಗಿ ಅವರೂ ಸಹ ಸರ್ಕಾರವನ್ನು ಒತ್ತಾಯಿಸಬೇಕಿದೆ. ಹಾಗಾಗಿ ರಾಜ್ಯವ್ಯಾಪಿಯಾಗಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿ ಶಾಸಕರ ಕಛೇರಿಗಳ ಮುಂದೆ ಜನಾಗ್ರಹ ನಡೆಸುತ್ತಿದ್ದೇವೆ” ಎಂದು ಜನಾಗ್ರಹ ಆಂದೋಲನ ಸಂಚಾಲನಾ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...