Homeಕರ್ನಾಟಕಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

- Advertisement -
- Advertisement -

ಎಲೆಮರೆ-4 : ಅರುಣ್ ಜೋಳದ ಕೂಡ್ಲಿಗಿ

ಮೈಸೂರಿನಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಜತೆ ಅಂದು ಪಿರಿಯಾಪಟ್ಟಣ ತಾಲೂಕಿನ ಮಾಲಂಗಿ ಗ್ರಾಮಪಂಚಾಯ್ತಿ ನೋಡಲೆಂದು ಹೋದೆನು. ಅದೊಂದು ಮಾದರಿ ಗ್ರಾಮ ಪಂಚಾಯ್ತಿಯಾಗಿತ್ತು. ಆ ದಿನ ಭೇಟಿಯಾದವರಲ್ಲಿ ಅಬ್ಬಳತಿ ಬಿ. ಕಾಲನಿಯ ಜಾನಕಮ್ಮ ಗಮನ ಸೆಳೆದರು. ಅವರ ಜತೆ ಸ್ವಲ್ಪಹೊತ್ತು ಮಾತನಾಡುತ್ತಾ ಹೋದಂತೆ, ಜಾನಕಮ್ಮ ತಮ್ಮ ಜೇನು ಕುರುಬರ ಹಾಡಿಯ ಸಮಸ್ಯೆಗಳನ್ನು ತನ್ನ ಕೈಚೀಲದಲ್ಲಿ ತುಂಬಿಕೊಂಡೆ ತಿರುಗಾಡುವವರಂತೆ ಕಂಡರು. ತನ್ನ ಜನರಿಗಾಗಿ ಹೋರಾಟ ಮಾಡುವುದು, ತನ್ನವರಿಗಾಗಿ ಹಕ್ಕೊತ್ತಾಯದ ಧ್ವನಿ ಎತ್ತುವುದು ಅನಿವಾರ್ಯ ಎನ್ನುವುದನ್ನು ಅರಿತಿದ್ದರು. ಅದಕ್ಕಾಗಿ ಜಾನಕಮ್ಮ `ನಾನು ನನ್ನವರ ಒಳಿತಿಗಾಗಿ ದುಡಿಯಬೇಕು’ ಎನ್ನುವ ದೃಢನಿಶ್ಚಯ ಮಾಡಿದವರಂತೆ ಕಂಡರು.

 

ಅರವತ್ತೆರಡು ವರ್ಷದ ಜಾನಕಮ್ಮ ಕಳೆದ 30 ವರ್ಷಗಳಿಂದ ಹಾಡಿಜನರ ಅಭಿವೃದ್ಧಿಗಾಗಿ ಸೆಣಸಾಟ ನಡೆಸಿದ್ದಾರೆ. ಜಾನಕಮ್ಮ 18 ವರ್ಷಗಳ ಹಿಂದೆಯೇ ಗಂಡ ಲಿಂಗಪ್ಪನನ್ನು ಕಳೆದುಕೊಂಡು ಒಂಟಿಯಾದರು. ನಾಲ್ಕು ಜನ ಹೆಣ್ಮಕ್ಕಳು, ಒಬ್ಬ ಮಗನಿದ್ದಾನೆ. ಸದ್ಯಕ್ಕೆ ಜಾನಕಮ್ಮ ಇಡೀ ಹಾಡಿಯೆ ನನ್ನ ಕುಟುಂಬ ಎನ್ನುವಂತೆ ತಾವೊಬ್ಬರೆ ಜೀವನ ನಡೆಸಿದ್ದಾರೆ. ಮೂರು ಎಕರೆ ಸಣ್ಣ ಹಿಡುವಳಿಯಷ್ಟು ಜಮೀನಿನಲ್ಲಿಯೇ ಉಳುಮೆ ಮಾಡುತ್ತಾರೆ.

ಇದೀಗ ಮಾಲಂಗಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿರುವ ಜಾನಕಮ್ಮ ಸತತವಾಗಿ 3ನೇ ಬಾರಿ ಯಾವುದೇ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಸಾಮಾನ್ಯ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದು ಜಾನಕಮ್ಮನ ನಿಸ್ವಾರ್ಥದ ಬದುಕಿನ ಬಗೆಗೆ ಹಾಡಿಯ ಜನರಿಟ್ಟ ಅಭಿಮಾನದ ಸಂಕೇತವಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗಿರಿಜನರಿಗೆ, ಅಂಗವಿಕಲರಿಗೆ, ಅಶಕ್ತ ಮಹಿಳೆಯರಿಗೆ, ವಿದ್ಯಾರ್ಥಿಗಳಿಗಿರುವ ಸೌಲಭ್ಯಗಳನ್ನು ಗುರುತಿಸಿ, ಸೂಕ್ತ ಫಲಾನುಭವಿಗಳಿಗೆ ತಲುಪುವ ತನಕ ಕಾಳಜಿ ವಹಿಸುತ್ತಾರೆ. ಗ್ರಾಮ ಪಂಚಾಯ್ತಿಯ ಯಾವುದೇ ಸಾಮಾನ್ಯ ಸಭೆಗೂ ಜಾನಕಮ್ಮ ಹಾಜರಿರುತ್ತಾರೆ. ಗ್ರಾಮ ಸಭೆಯಂತು ಕಡ್ಡಾಯವಾಗಿ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳತ್ತಾರೆ. ಯಾವುದೇ ಸಮಸ್ಯೆಗಳಿದ್ದರೂ ಎಲ್ಲಾ ಸದಸ್ಯರಿಗೂ, ಪಂಚಾಯ್ತಿ ಅಧಿಕಾರಿ ವರ್ಗಕ್ಕೂ ಅರ್ಥವಾಗುವಂತೆ ವಿವರಿಸುತ್ತಾರೆ.

ಗ್ರಾ.ಪಂ.ಸದಸ್ಯೆಯಷ್ಟೆ ಅಲ್ಲದೆ ಮಹಿಳಾ ಸಮಖ್ಯದ ತಾಲೂಕು ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದೀಗ ಜೇನುಕುರುಬರ ಮಹಿಳಾ ಸಂಘದ ಅಧ್ಯಕ್ಷೆಯೂ ಆಗಿದ್ದಾರೆ. ಮುಖ್ಯವಾಗಿ ಅಬ್ಬಳತಿ ಗಿರಿಜನ ಹಾಡಿಯ ಭಾಗದಲ್ಲಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ 22 ಎಕರೆ ಜಮೀನನ್ನು ಹೋರಾಟದ ಮೂಲಕ ತೆರವುಗೊಳಿಸುವಲ್ಲಿ ಜಾನಕಮ್ಮನ ಪ್ರಮುಖ ಪಾತ್ರವಿದೆ. ಈಗ ಈ ಸ್ಥಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆ ನಿರ್ಮಾಣವಾಗಿದೆ. ಶಾಲಾ ಮಕ್ಕಳಿಂದ ಗಿಜಿಗುಡುತ್ತಾ ಈ ಸ್ಥಳ ಈಗ ವಿದ್ಯಾಕೇಂದ್ರವಾಗಿದೆ. ಈ ಭೂಮಿಯಲ್ಲಿ ಸ್ಮಶಾನಕ್ಕೂ ಜಾಗ ಕಾಯ್ದಿರಿಸಲಾಗಿದೆ. ಇದರಲ್ಲಿಯೇ 2 ಎಕರೆಯಲ್ಲಿ ವಸತಿರಹಿತ ಗಿರಿಜನರಿಗೆ ನಿವೇಶನ ಹಂಚುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ.

ಗಿರಿಜನ ಹಾಸ್ಟಲ್ ನಿರ್ಮಾಣ, ಚೈಲ್ಡ್ ಹೆಲ್ತ್‍ಕೇರ್ ಸೆಂಟರ್‍ಗೆ ಸಹಾಯ, ಗಿರಿಜನರ ಜಮೀನು ನೀಡಿಕೆ ವಿಚಾರದ ಹೋರಾಟ, ರಸ್ತೆ ಅಭಿವೃದ್ಧಿಗೆ ಶಾಸಕರ ಅನುದಾನದ ತರುವಲ್ಲಿ ಶ್ರಮಿಸಿದ್ದಾರೆ. 23ಕ್ಕೂ ಹೆಚ್ಚು ಬಾಲ್ಯವಿವಾಹವನ್ನು ತಡೆಗಟ್ಟಿದ್ದಾರೆ. ನರೇಗಾ ಜಾಬ್ ಕಾರ್ಡ್ ನೀಡಿಕೆ, 66 ಕುಟುಂಬಗಳಿಗೆ ಸೋಲಾರ್ ದೀಪ ಮಂಜೂರು ಮಾಡಿಸುವಲ್ಲಿ ಮುಂಚೂಣಿಯಲ್ಲಿ ನಿಂತು ಜಾನಕಮ್ಮ ಹೋರಾಟ ಮಾಡಿದ್ದಾರೆ.
ಕಳೆದ ಜುಲೈನಲ್ಲಿ ಅರಣ್ಯ ಮತ್ತು ವನ್ಯಜೀವಿ ಕಾಯ್ದೆಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳಿಂದ ಹೊರಬಂದು, ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಬದುಕು ಸವೆಸುತ್ತಿರುವ ಬುಡಕಟ್ಟು ಸಮುದಾಯಕ್ಕೆ ಅಗತ್ಯ ನಿವೇಶನ ಮತ್ತು ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಆದಿವಾಸಿಗಳು ಮಡಿಕೇರಿಯ ಗಿರಿಜನ ಅಭಿವೃದ್ಧಿ ಇಲಾಖೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಇದರಲ್ಲಿ ಜಾನಕಮ್ಮ ತಮ್ಮ ಸಂಘದ ಜೇನುಕುರುಬರ ಮಹಿಳೆಯರೆ ಮಂಚೂಣಿಯಲ್ಲಿರುವಂತೆ ಅವರಲ್ಲಿ ಅರಿವು ಮೂಡಿಸಿದ್ದಾರೆ.

`ಗಿರಿಜನರಿಗೆ ಇನ್ನು ಹತ್ತಾರು ಸಮಸ್ಯೆಗಳಿವೆ. ಕೆಲವರಿಗೆ ಒಂದು ಕುಂಟೆ ಜಮೀನು ಇಲ್ಲದೆ ಕೂಲಿಯನ್ನು ನಂಬಿದ್ದಾರೆ. ಅಂತವರಿಗೆ ಜಮೀನು ಕೊಡಿಸಬೇಕು. ಮನೆಯೂ ಇಲ್ಲದೆ ಗುಡಿಸಲುಗಳಲ್ಲಿ ಜೀವನ ನಡೆಸುವವರಿದ್ದಾರೆ. ಅಂತವರಿಗೆ ಸರಕಾರದಿಂದ ಮನೆ ಕೊಡಿಸಬೇಕು.. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸಮುದಾಯದ ಬೆಂಬಲದೊಂದಿಗೆ ಹೋರಾಟ ರೂಪಿಸುತ್ತಿದ್ದೇವೆ. ಹಿರಿಯ ರಾಜಕಾರಣಿಗಳು, ಅಧಿಕಾರಿಗಳಿಗೆ ಗಿರಿಜನ ಸಮಸ್ಯೆಗಳನ್ನು ಮನವರಿಕೆ ಮಾಡಿಸಿ ಅವರಿಗೆ ಸವಲತ್ತು ಒದಗಿಸಬೇಕಿದೆ’ ಎಂದು ಜಾನಕಮ್ಮ ಹೇಳುತ್ತಾರೆ.

2007ರ ಜ.26ರಂದು ಪಂಚಾಯತ್ ರಾಜ್ಯ ವ್ಯವಸ್ಥೆಯ ಕುರಿತು ದೆಹಲಿಯಲ್ಲಿ ರಾಷ್ಟ್ರಪತಿ ನಾರಾಯಣ್ ಮತ್ತು ಅಂದಿನ ಪ್ರಧಾನಿ ವಾಜಪೇಯಿ ಅವರೊಂದಿಗೆ ರಾಜ್ಯದ ಗಿರಿಜನ ಮಹಿಳೆಯರ ಪರವಾಗಿ ಚರ್ಚಿಸಿದ್ದರು. 2015 ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಸಿ.ಸುಬ್ರಹ್ಮಣ್ಯ ಫೆಲೋಶಿಪ್ ಮತ್ತು ಕಮ್ಯುನಿಟಿ ಲೀಡರ್‍ಶಿಪ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಕರ್ನಾಟಕದಿಂದ ಏಕೈಕ ಮಹಿಳಾ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. 2019 ರಲ್ಲಿ ಕರ್ನಾಟಕ ಸರಕಾರ ಇವರನ್ನು ಗುರುತಿಸಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿತು. ಬೆಂಗಳೂರಿನ ಸ್ಫೂರ್ತಿಧಾಮ ವಾರ್ಷಿಕವಾಗಿ ಎಲೆಮರೆಯ ನಿಜ ಸಾಧಕರನ್ನು ಆಯ್ಕೆ ಮಾಡಿ ನೀಡುವ 2019 ರ ಸಾಲಿನ ಭೋದಿವರ್ಧನ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

`ನಮ್ಮ ಪಂಚಾಯಿತಿಯಲ್ಲಿ ಎಲ್ಲಾ ಸಭೆಗಳಿಗೆ ಭಾಗವಹಿಸುವ ಜಾನಕಮ್ಮ ಹಾಡಿಗಳಲ್ಲಿ ಶೌಚಾಲಯ ನಿರ್ಮಾಣ ಶೇ.90 ಪ್ರಗತಿ ಕಾಣಲು ಕಾರಣರಾಗಿದ್ದಾರೆ. ಶೌಚಾಲಯ ನಿರ್ಮಿಸಲು ಪ್ರತಿ ಕುಟುಂಬದ ಮನ ಒಲಿಸಿದ್ದಾರೆ. ಕಡ್ಡಾಯವಾಗಿ ಗ್ರಾಮಸಭೆ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳುತ್ತಾರೆ. ಇವರ ಉತ್ಸಾಹ ಎಲ್ಲಾ ಸದಸ್ಯರಲ್ಲಿಯೂ ಇದ್ದರೆ ಹೆಚ್ಚಿನ ಅಭಿವೃದ್ಧಿಯಾಗುತ್ತದೆ’ ಎಂದು ಹಿಂದೆ ಮಾಲಂಗಿ ಗ್ರಾಮ ಪಂಚಾಯ್ತಿಯ ಪಿಡಿಒ ಆಗಿದ್ದ ಡಾ.ಶೋಭಾರಾಣಿ ಹೇಳುತ್ತಾರೆ.

ಹೀಗೆ ಬುಡಕಟ್ಟು ಜನರಲ್ಲಿ ಹಕ್ಕೊತ್ತಾಯಗಳ ಅರಿವು ಮೂಡಿಸುತ್ತಾ ದಿನನಿತ್ಯದ ಸಾಮಾನ್ಯ ಸಮಸ್ಯೆಗಳನ್ನೂ ಆಲಿಸುತ್ತಾ ಅವಿರತವಾಗಿ ದುಡಿವ ಜಾನಕಮ್ಮ ಬುಡಕಟ್ಟು ನಾಯಕತ್ವಕ್ಕೆ ಒಂದು ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...