Homeಕರ್ನಾಟಕಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

- Advertisement -
- Advertisement -

ಎಲೆಮರೆ-4 : ಅರುಣ್ ಜೋಳದ ಕೂಡ್ಲಿಗಿ

ಮೈಸೂರಿನಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಜತೆ ಅಂದು ಪಿರಿಯಾಪಟ್ಟಣ ತಾಲೂಕಿನ ಮಾಲಂಗಿ ಗ್ರಾಮಪಂಚಾಯ್ತಿ ನೋಡಲೆಂದು ಹೋದೆನು. ಅದೊಂದು ಮಾದರಿ ಗ್ರಾಮ ಪಂಚಾಯ್ತಿಯಾಗಿತ್ತು. ಆ ದಿನ ಭೇಟಿಯಾದವರಲ್ಲಿ ಅಬ್ಬಳತಿ ಬಿ. ಕಾಲನಿಯ ಜಾನಕಮ್ಮ ಗಮನ ಸೆಳೆದರು. ಅವರ ಜತೆ ಸ್ವಲ್ಪಹೊತ್ತು ಮಾತನಾಡುತ್ತಾ ಹೋದಂತೆ, ಜಾನಕಮ್ಮ ತಮ್ಮ ಜೇನು ಕುರುಬರ ಹಾಡಿಯ ಸಮಸ್ಯೆಗಳನ್ನು ತನ್ನ ಕೈಚೀಲದಲ್ಲಿ ತುಂಬಿಕೊಂಡೆ ತಿರುಗಾಡುವವರಂತೆ ಕಂಡರು. ತನ್ನ ಜನರಿಗಾಗಿ ಹೋರಾಟ ಮಾಡುವುದು, ತನ್ನವರಿಗಾಗಿ ಹಕ್ಕೊತ್ತಾಯದ ಧ್ವನಿ ಎತ್ತುವುದು ಅನಿವಾರ್ಯ ಎನ್ನುವುದನ್ನು ಅರಿತಿದ್ದರು. ಅದಕ್ಕಾಗಿ ಜಾನಕಮ್ಮ `ನಾನು ನನ್ನವರ ಒಳಿತಿಗಾಗಿ ದುಡಿಯಬೇಕು’ ಎನ್ನುವ ದೃಢನಿಶ್ಚಯ ಮಾಡಿದವರಂತೆ ಕಂಡರು.

 

ಅರವತ್ತೆರಡು ವರ್ಷದ ಜಾನಕಮ್ಮ ಕಳೆದ 30 ವರ್ಷಗಳಿಂದ ಹಾಡಿಜನರ ಅಭಿವೃದ್ಧಿಗಾಗಿ ಸೆಣಸಾಟ ನಡೆಸಿದ್ದಾರೆ. ಜಾನಕಮ್ಮ 18 ವರ್ಷಗಳ ಹಿಂದೆಯೇ ಗಂಡ ಲಿಂಗಪ್ಪನನ್ನು ಕಳೆದುಕೊಂಡು ಒಂಟಿಯಾದರು. ನಾಲ್ಕು ಜನ ಹೆಣ್ಮಕ್ಕಳು, ಒಬ್ಬ ಮಗನಿದ್ದಾನೆ. ಸದ್ಯಕ್ಕೆ ಜಾನಕಮ್ಮ ಇಡೀ ಹಾಡಿಯೆ ನನ್ನ ಕುಟುಂಬ ಎನ್ನುವಂತೆ ತಾವೊಬ್ಬರೆ ಜೀವನ ನಡೆಸಿದ್ದಾರೆ. ಮೂರು ಎಕರೆ ಸಣ್ಣ ಹಿಡುವಳಿಯಷ್ಟು ಜಮೀನಿನಲ್ಲಿಯೇ ಉಳುಮೆ ಮಾಡುತ್ತಾರೆ.

ಇದೀಗ ಮಾಲಂಗಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿರುವ ಜಾನಕಮ್ಮ ಸತತವಾಗಿ 3ನೇ ಬಾರಿ ಯಾವುದೇ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಸಾಮಾನ್ಯ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದು ಜಾನಕಮ್ಮನ ನಿಸ್ವಾರ್ಥದ ಬದುಕಿನ ಬಗೆಗೆ ಹಾಡಿಯ ಜನರಿಟ್ಟ ಅಭಿಮಾನದ ಸಂಕೇತವಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗಿರಿಜನರಿಗೆ, ಅಂಗವಿಕಲರಿಗೆ, ಅಶಕ್ತ ಮಹಿಳೆಯರಿಗೆ, ವಿದ್ಯಾರ್ಥಿಗಳಿಗಿರುವ ಸೌಲಭ್ಯಗಳನ್ನು ಗುರುತಿಸಿ, ಸೂಕ್ತ ಫಲಾನುಭವಿಗಳಿಗೆ ತಲುಪುವ ತನಕ ಕಾಳಜಿ ವಹಿಸುತ್ತಾರೆ. ಗ್ರಾಮ ಪಂಚಾಯ್ತಿಯ ಯಾವುದೇ ಸಾಮಾನ್ಯ ಸಭೆಗೂ ಜಾನಕಮ್ಮ ಹಾಜರಿರುತ್ತಾರೆ. ಗ್ರಾಮ ಸಭೆಯಂತು ಕಡ್ಡಾಯವಾಗಿ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳತ್ತಾರೆ. ಯಾವುದೇ ಸಮಸ್ಯೆಗಳಿದ್ದರೂ ಎಲ್ಲಾ ಸದಸ್ಯರಿಗೂ, ಪಂಚಾಯ್ತಿ ಅಧಿಕಾರಿ ವರ್ಗಕ್ಕೂ ಅರ್ಥವಾಗುವಂತೆ ವಿವರಿಸುತ್ತಾರೆ.

ಗ್ರಾ.ಪಂ.ಸದಸ್ಯೆಯಷ್ಟೆ ಅಲ್ಲದೆ ಮಹಿಳಾ ಸಮಖ್ಯದ ತಾಲೂಕು ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದೀಗ ಜೇನುಕುರುಬರ ಮಹಿಳಾ ಸಂಘದ ಅಧ್ಯಕ್ಷೆಯೂ ಆಗಿದ್ದಾರೆ. ಮುಖ್ಯವಾಗಿ ಅಬ್ಬಳತಿ ಗಿರಿಜನ ಹಾಡಿಯ ಭಾಗದಲ್ಲಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ 22 ಎಕರೆ ಜಮೀನನ್ನು ಹೋರಾಟದ ಮೂಲಕ ತೆರವುಗೊಳಿಸುವಲ್ಲಿ ಜಾನಕಮ್ಮನ ಪ್ರಮುಖ ಪಾತ್ರವಿದೆ. ಈಗ ಈ ಸ್ಥಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆ ನಿರ್ಮಾಣವಾಗಿದೆ. ಶಾಲಾ ಮಕ್ಕಳಿಂದ ಗಿಜಿಗುಡುತ್ತಾ ಈ ಸ್ಥಳ ಈಗ ವಿದ್ಯಾಕೇಂದ್ರವಾಗಿದೆ. ಈ ಭೂಮಿಯಲ್ಲಿ ಸ್ಮಶಾನಕ್ಕೂ ಜಾಗ ಕಾಯ್ದಿರಿಸಲಾಗಿದೆ. ಇದರಲ್ಲಿಯೇ 2 ಎಕರೆಯಲ್ಲಿ ವಸತಿರಹಿತ ಗಿರಿಜನರಿಗೆ ನಿವೇಶನ ಹಂಚುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ.

ಗಿರಿಜನ ಹಾಸ್ಟಲ್ ನಿರ್ಮಾಣ, ಚೈಲ್ಡ್ ಹೆಲ್ತ್‍ಕೇರ್ ಸೆಂಟರ್‍ಗೆ ಸಹಾಯ, ಗಿರಿಜನರ ಜಮೀನು ನೀಡಿಕೆ ವಿಚಾರದ ಹೋರಾಟ, ರಸ್ತೆ ಅಭಿವೃದ್ಧಿಗೆ ಶಾಸಕರ ಅನುದಾನದ ತರುವಲ್ಲಿ ಶ್ರಮಿಸಿದ್ದಾರೆ. 23ಕ್ಕೂ ಹೆಚ್ಚು ಬಾಲ್ಯವಿವಾಹವನ್ನು ತಡೆಗಟ್ಟಿದ್ದಾರೆ. ನರೇಗಾ ಜಾಬ್ ಕಾರ್ಡ್ ನೀಡಿಕೆ, 66 ಕುಟುಂಬಗಳಿಗೆ ಸೋಲಾರ್ ದೀಪ ಮಂಜೂರು ಮಾಡಿಸುವಲ್ಲಿ ಮುಂಚೂಣಿಯಲ್ಲಿ ನಿಂತು ಜಾನಕಮ್ಮ ಹೋರಾಟ ಮಾಡಿದ್ದಾರೆ.
ಕಳೆದ ಜುಲೈನಲ್ಲಿ ಅರಣ್ಯ ಮತ್ತು ವನ್ಯಜೀವಿ ಕಾಯ್ದೆಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳಿಂದ ಹೊರಬಂದು, ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಬದುಕು ಸವೆಸುತ್ತಿರುವ ಬುಡಕಟ್ಟು ಸಮುದಾಯಕ್ಕೆ ಅಗತ್ಯ ನಿವೇಶನ ಮತ್ತು ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಆದಿವಾಸಿಗಳು ಮಡಿಕೇರಿಯ ಗಿರಿಜನ ಅಭಿವೃದ್ಧಿ ಇಲಾಖೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಇದರಲ್ಲಿ ಜಾನಕಮ್ಮ ತಮ್ಮ ಸಂಘದ ಜೇನುಕುರುಬರ ಮಹಿಳೆಯರೆ ಮಂಚೂಣಿಯಲ್ಲಿರುವಂತೆ ಅವರಲ್ಲಿ ಅರಿವು ಮೂಡಿಸಿದ್ದಾರೆ.

`ಗಿರಿಜನರಿಗೆ ಇನ್ನು ಹತ್ತಾರು ಸಮಸ್ಯೆಗಳಿವೆ. ಕೆಲವರಿಗೆ ಒಂದು ಕುಂಟೆ ಜಮೀನು ಇಲ್ಲದೆ ಕೂಲಿಯನ್ನು ನಂಬಿದ್ದಾರೆ. ಅಂತವರಿಗೆ ಜಮೀನು ಕೊಡಿಸಬೇಕು. ಮನೆಯೂ ಇಲ್ಲದೆ ಗುಡಿಸಲುಗಳಲ್ಲಿ ಜೀವನ ನಡೆಸುವವರಿದ್ದಾರೆ. ಅಂತವರಿಗೆ ಸರಕಾರದಿಂದ ಮನೆ ಕೊಡಿಸಬೇಕು.. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸಮುದಾಯದ ಬೆಂಬಲದೊಂದಿಗೆ ಹೋರಾಟ ರೂಪಿಸುತ್ತಿದ್ದೇವೆ. ಹಿರಿಯ ರಾಜಕಾರಣಿಗಳು, ಅಧಿಕಾರಿಗಳಿಗೆ ಗಿರಿಜನ ಸಮಸ್ಯೆಗಳನ್ನು ಮನವರಿಕೆ ಮಾಡಿಸಿ ಅವರಿಗೆ ಸವಲತ್ತು ಒದಗಿಸಬೇಕಿದೆ’ ಎಂದು ಜಾನಕಮ್ಮ ಹೇಳುತ್ತಾರೆ.

2007ರ ಜ.26ರಂದು ಪಂಚಾಯತ್ ರಾಜ್ಯ ವ್ಯವಸ್ಥೆಯ ಕುರಿತು ದೆಹಲಿಯಲ್ಲಿ ರಾಷ್ಟ್ರಪತಿ ನಾರಾಯಣ್ ಮತ್ತು ಅಂದಿನ ಪ್ರಧಾನಿ ವಾಜಪೇಯಿ ಅವರೊಂದಿಗೆ ರಾಜ್ಯದ ಗಿರಿಜನ ಮಹಿಳೆಯರ ಪರವಾಗಿ ಚರ್ಚಿಸಿದ್ದರು. 2015 ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಸಿ.ಸುಬ್ರಹ್ಮಣ್ಯ ಫೆಲೋಶಿಪ್ ಮತ್ತು ಕಮ್ಯುನಿಟಿ ಲೀಡರ್‍ಶಿಪ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಕರ್ನಾಟಕದಿಂದ ಏಕೈಕ ಮಹಿಳಾ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. 2019 ರಲ್ಲಿ ಕರ್ನಾಟಕ ಸರಕಾರ ಇವರನ್ನು ಗುರುತಿಸಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿತು. ಬೆಂಗಳೂರಿನ ಸ್ಫೂರ್ತಿಧಾಮ ವಾರ್ಷಿಕವಾಗಿ ಎಲೆಮರೆಯ ನಿಜ ಸಾಧಕರನ್ನು ಆಯ್ಕೆ ಮಾಡಿ ನೀಡುವ 2019 ರ ಸಾಲಿನ ಭೋದಿವರ್ಧನ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

`ನಮ್ಮ ಪಂಚಾಯಿತಿಯಲ್ಲಿ ಎಲ್ಲಾ ಸಭೆಗಳಿಗೆ ಭಾಗವಹಿಸುವ ಜಾನಕಮ್ಮ ಹಾಡಿಗಳಲ್ಲಿ ಶೌಚಾಲಯ ನಿರ್ಮಾಣ ಶೇ.90 ಪ್ರಗತಿ ಕಾಣಲು ಕಾರಣರಾಗಿದ್ದಾರೆ. ಶೌಚಾಲಯ ನಿರ್ಮಿಸಲು ಪ್ರತಿ ಕುಟುಂಬದ ಮನ ಒಲಿಸಿದ್ದಾರೆ. ಕಡ್ಡಾಯವಾಗಿ ಗ್ರಾಮಸಭೆ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳುತ್ತಾರೆ. ಇವರ ಉತ್ಸಾಹ ಎಲ್ಲಾ ಸದಸ್ಯರಲ್ಲಿಯೂ ಇದ್ದರೆ ಹೆಚ್ಚಿನ ಅಭಿವೃದ್ಧಿಯಾಗುತ್ತದೆ’ ಎಂದು ಹಿಂದೆ ಮಾಲಂಗಿ ಗ್ರಾಮ ಪಂಚಾಯ್ತಿಯ ಪಿಡಿಒ ಆಗಿದ್ದ ಡಾ.ಶೋಭಾರಾಣಿ ಹೇಳುತ್ತಾರೆ.

ಹೀಗೆ ಬುಡಕಟ್ಟು ಜನರಲ್ಲಿ ಹಕ್ಕೊತ್ತಾಯಗಳ ಅರಿವು ಮೂಡಿಸುತ್ತಾ ದಿನನಿತ್ಯದ ಸಾಮಾನ್ಯ ಸಮಸ್ಯೆಗಳನ್ನೂ ಆಲಿಸುತ್ತಾ ಅವಿರತವಾಗಿ ದುಡಿವ ಜಾನಕಮ್ಮ ಬುಡಕಟ್ಟು ನಾಯಕತ್ವಕ್ಕೆ ಒಂದು ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...