Homeಕರ್ನಾಟಕಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

- Advertisement -
- Advertisement -

ಎಲೆಮರೆ-4 : ಅರುಣ್ ಜೋಳದ ಕೂಡ್ಲಿಗಿ

ಮೈಸೂರಿನಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಜತೆ ಅಂದು ಪಿರಿಯಾಪಟ್ಟಣ ತಾಲೂಕಿನ ಮಾಲಂಗಿ ಗ್ರಾಮಪಂಚಾಯ್ತಿ ನೋಡಲೆಂದು ಹೋದೆನು. ಅದೊಂದು ಮಾದರಿ ಗ್ರಾಮ ಪಂಚಾಯ್ತಿಯಾಗಿತ್ತು. ಆ ದಿನ ಭೇಟಿಯಾದವರಲ್ಲಿ ಅಬ್ಬಳತಿ ಬಿ. ಕಾಲನಿಯ ಜಾನಕಮ್ಮ ಗಮನ ಸೆಳೆದರು. ಅವರ ಜತೆ ಸ್ವಲ್ಪಹೊತ್ತು ಮಾತನಾಡುತ್ತಾ ಹೋದಂತೆ, ಜಾನಕಮ್ಮ ತಮ್ಮ ಜೇನು ಕುರುಬರ ಹಾಡಿಯ ಸಮಸ್ಯೆಗಳನ್ನು ತನ್ನ ಕೈಚೀಲದಲ್ಲಿ ತುಂಬಿಕೊಂಡೆ ತಿರುಗಾಡುವವರಂತೆ ಕಂಡರು. ತನ್ನ ಜನರಿಗಾಗಿ ಹೋರಾಟ ಮಾಡುವುದು, ತನ್ನವರಿಗಾಗಿ ಹಕ್ಕೊತ್ತಾಯದ ಧ್ವನಿ ಎತ್ತುವುದು ಅನಿವಾರ್ಯ ಎನ್ನುವುದನ್ನು ಅರಿತಿದ್ದರು. ಅದಕ್ಕಾಗಿ ಜಾನಕಮ್ಮ `ನಾನು ನನ್ನವರ ಒಳಿತಿಗಾಗಿ ದುಡಿಯಬೇಕು’ ಎನ್ನುವ ದೃಢನಿಶ್ಚಯ ಮಾಡಿದವರಂತೆ ಕಂಡರು.

 

ಅರವತ್ತೆರಡು ವರ್ಷದ ಜಾನಕಮ್ಮ ಕಳೆದ 30 ವರ್ಷಗಳಿಂದ ಹಾಡಿಜನರ ಅಭಿವೃದ್ಧಿಗಾಗಿ ಸೆಣಸಾಟ ನಡೆಸಿದ್ದಾರೆ. ಜಾನಕಮ್ಮ 18 ವರ್ಷಗಳ ಹಿಂದೆಯೇ ಗಂಡ ಲಿಂಗಪ್ಪನನ್ನು ಕಳೆದುಕೊಂಡು ಒಂಟಿಯಾದರು. ನಾಲ್ಕು ಜನ ಹೆಣ್ಮಕ್ಕಳು, ಒಬ್ಬ ಮಗನಿದ್ದಾನೆ. ಸದ್ಯಕ್ಕೆ ಜಾನಕಮ್ಮ ಇಡೀ ಹಾಡಿಯೆ ನನ್ನ ಕುಟುಂಬ ಎನ್ನುವಂತೆ ತಾವೊಬ್ಬರೆ ಜೀವನ ನಡೆಸಿದ್ದಾರೆ. ಮೂರು ಎಕರೆ ಸಣ್ಣ ಹಿಡುವಳಿಯಷ್ಟು ಜಮೀನಿನಲ್ಲಿಯೇ ಉಳುಮೆ ಮಾಡುತ್ತಾರೆ.

ಇದೀಗ ಮಾಲಂಗಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿರುವ ಜಾನಕಮ್ಮ ಸತತವಾಗಿ 3ನೇ ಬಾರಿ ಯಾವುದೇ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಸಾಮಾನ್ಯ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದು ಜಾನಕಮ್ಮನ ನಿಸ್ವಾರ್ಥದ ಬದುಕಿನ ಬಗೆಗೆ ಹಾಡಿಯ ಜನರಿಟ್ಟ ಅಭಿಮಾನದ ಸಂಕೇತವಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗಿರಿಜನರಿಗೆ, ಅಂಗವಿಕಲರಿಗೆ, ಅಶಕ್ತ ಮಹಿಳೆಯರಿಗೆ, ವಿದ್ಯಾರ್ಥಿಗಳಿಗಿರುವ ಸೌಲಭ್ಯಗಳನ್ನು ಗುರುತಿಸಿ, ಸೂಕ್ತ ಫಲಾನುಭವಿಗಳಿಗೆ ತಲುಪುವ ತನಕ ಕಾಳಜಿ ವಹಿಸುತ್ತಾರೆ. ಗ್ರಾಮ ಪಂಚಾಯ್ತಿಯ ಯಾವುದೇ ಸಾಮಾನ್ಯ ಸಭೆಗೂ ಜಾನಕಮ್ಮ ಹಾಜರಿರುತ್ತಾರೆ. ಗ್ರಾಮ ಸಭೆಯಂತು ಕಡ್ಡಾಯವಾಗಿ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳತ್ತಾರೆ. ಯಾವುದೇ ಸಮಸ್ಯೆಗಳಿದ್ದರೂ ಎಲ್ಲಾ ಸದಸ್ಯರಿಗೂ, ಪಂಚಾಯ್ತಿ ಅಧಿಕಾರಿ ವರ್ಗಕ್ಕೂ ಅರ್ಥವಾಗುವಂತೆ ವಿವರಿಸುತ್ತಾರೆ.

ಗ್ರಾ.ಪಂ.ಸದಸ್ಯೆಯಷ್ಟೆ ಅಲ್ಲದೆ ಮಹಿಳಾ ಸಮಖ್ಯದ ತಾಲೂಕು ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದೀಗ ಜೇನುಕುರುಬರ ಮಹಿಳಾ ಸಂಘದ ಅಧ್ಯಕ್ಷೆಯೂ ಆಗಿದ್ದಾರೆ. ಮುಖ್ಯವಾಗಿ ಅಬ್ಬಳತಿ ಗಿರಿಜನ ಹಾಡಿಯ ಭಾಗದಲ್ಲಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ 22 ಎಕರೆ ಜಮೀನನ್ನು ಹೋರಾಟದ ಮೂಲಕ ತೆರವುಗೊಳಿಸುವಲ್ಲಿ ಜಾನಕಮ್ಮನ ಪ್ರಮುಖ ಪಾತ್ರವಿದೆ. ಈಗ ಈ ಸ್ಥಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆ ನಿರ್ಮಾಣವಾಗಿದೆ. ಶಾಲಾ ಮಕ್ಕಳಿಂದ ಗಿಜಿಗುಡುತ್ತಾ ಈ ಸ್ಥಳ ಈಗ ವಿದ್ಯಾಕೇಂದ್ರವಾಗಿದೆ. ಈ ಭೂಮಿಯಲ್ಲಿ ಸ್ಮಶಾನಕ್ಕೂ ಜಾಗ ಕಾಯ್ದಿರಿಸಲಾಗಿದೆ. ಇದರಲ್ಲಿಯೇ 2 ಎಕರೆಯಲ್ಲಿ ವಸತಿರಹಿತ ಗಿರಿಜನರಿಗೆ ನಿವೇಶನ ಹಂಚುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ.

ಗಿರಿಜನ ಹಾಸ್ಟಲ್ ನಿರ್ಮಾಣ, ಚೈಲ್ಡ್ ಹೆಲ್ತ್‍ಕೇರ್ ಸೆಂಟರ್‍ಗೆ ಸಹಾಯ, ಗಿರಿಜನರ ಜಮೀನು ನೀಡಿಕೆ ವಿಚಾರದ ಹೋರಾಟ, ರಸ್ತೆ ಅಭಿವೃದ್ಧಿಗೆ ಶಾಸಕರ ಅನುದಾನದ ತರುವಲ್ಲಿ ಶ್ರಮಿಸಿದ್ದಾರೆ. 23ಕ್ಕೂ ಹೆಚ್ಚು ಬಾಲ್ಯವಿವಾಹವನ್ನು ತಡೆಗಟ್ಟಿದ್ದಾರೆ. ನರೇಗಾ ಜಾಬ್ ಕಾರ್ಡ್ ನೀಡಿಕೆ, 66 ಕುಟುಂಬಗಳಿಗೆ ಸೋಲಾರ್ ದೀಪ ಮಂಜೂರು ಮಾಡಿಸುವಲ್ಲಿ ಮುಂಚೂಣಿಯಲ್ಲಿ ನಿಂತು ಜಾನಕಮ್ಮ ಹೋರಾಟ ಮಾಡಿದ್ದಾರೆ.
ಕಳೆದ ಜುಲೈನಲ್ಲಿ ಅರಣ್ಯ ಮತ್ತು ವನ್ಯಜೀವಿ ಕಾಯ್ದೆಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳಿಂದ ಹೊರಬಂದು, ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಬದುಕು ಸವೆಸುತ್ತಿರುವ ಬುಡಕಟ್ಟು ಸಮುದಾಯಕ್ಕೆ ಅಗತ್ಯ ನಿವೇಶನ ಮತ್ತು ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಆದಿವಾಸಿಗಳು ಮಡಿಕೇರಿಯ ಗಿರಿಜನ ಅಭಿವೃದ್ಧಿ ಇಲಾಖೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಇದರಲ್ಲಿ ಜಾನಕಮ್ಮ ತಮ್ಮ ಸಂಘದ ಜೇನುಕುರುಬರ ಮಹಿಳೆಯರೆ ಮಂಚೂಣಿಯಲ್ಲಿರುವಂತೆ ಅವರಲ್ಲಿ ಅರಿವು ಮೂಡಿಸಿದ್ದಾರೆ.

`ಗಿರಿಜನರಿಗೆ ಇನ್ನು ಹತ್ತಾರು ಸಮಸ್ಯೆಗಳಿವೆ. ಕೆಲವರಿಗೆ ಒಂದು ಕುಂಟೆ ಜಮೀನು ಇಲ್ಲದೆ ಕೂಲಿಯನ್ನು ನಂಬಿದ್ದಾರೆ. ಅಂತವರಿಗೆ ಜಮೀನು ಕೊಡಿಸಬೇಕು. ಮನೆಯೂ ಇಲ್ಲದೆ ಗುಡಿಸಲುಗಳಲ್ಲಿ ಜೀವನ ನಡೆಸುವವರಿದ್ದಾರೆ. ಅಂತವರಿಗೆ ಸರಕಾರದಿಂದ ಮನೆ ಕೊಡಿಸಬೇಕು.. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸಮುದಾಯದ ಬೆಂಬಲದೊಂದಿಗೆ ಹೋರಾಟ ರೂಪಿಸುತ್ತಿದ್ದೇವೆ. ಹಿರಿಯ ರಾಜಕಾರಣಿಗಳು, ಅಧಿಕಾರಿಗಳಿಗೆ ಗಿರಿಜನ ಸಮಸ್ಯೆಗಳನ್ನು ಮನವರಿಕೆ ಮಾಡಿಸಿ ಅವರಿಗೆ ಸವಲತ್ತು ಒದಗಿಸಬೇಕಿದೆ’ ಎಂದು ಜಾನಕಮ್ಮ ಹೇಳುತ್ತಾರೆ.

2007ರ ಜ.26ರಂದು ಪಂಚಾಯತ್ ರಾಜ್ಯ ವ್ಯವಸ್ಥೆಯ ಕುರಿತು ದೆಹಲಿಯಲ್ಲಿ ರಾಷ್ಟ್ರಪತಿ ನಾರಾಯಣ್ ಮತ್ತು ಅಂದಿನ ಪ್ರಧಾನಿ ವಾಜಪೇಯಿ ಅವರೊಂದಿಗೆ ರಾಜ್ಯದ ಗಿರಿಜನ ಮಹಿಳೆಯರ ಪರವಾಗಿ ಚರ್ಚಿಸಿದ್ದರು. 2015 ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಸಿ.ಸುಬ್ರಹ್ಮಣ್ಯ ಫೆಲೋಶಿಪ್ ಮತ್ತು ಕಮ್ಯುನಿಟಿ ಲೀಡರ್‍ಶಿಪ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಕರ್ನಾಟಕದಿಂದ ಏಕೈಕ ಮಹಿಳಾ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. 2019 ರಲ್ಲಿ ಕರ್ನಾಟಕ ಸರಕಾರ ಇವರನ್ನು ಗುರುತಿಸಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿತು. ಬೆಂಗಳೂರಿನ ಸ್ಫೂರ್ತಿಧಾಮ ವಾರ್ಷಿಕವಾಗಿ ಎಲೆಮರೆಯ ನಿಜ ಸಾಧಕರನ್ನು ಆಯ್ಕೆ ಮಾಡಿ ನೀಡುವ 2019 ರ ಸಾಲಿನ ಭೋದಿವರ್ಧನ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

`ನಮ್ಮ ಪಂಚಾಯಿತಿಯಲ್ಲಿ ಎಲ್ಲಾ ಸಭೆಗಳಿಗೆ ಭಾಗವಹಿಸುವ ಜಾನಕಮ್ಮ ಹಾಡಿಗಳಲ್ಲಿ ಶೌಚಾಲಯ ನಿರ್ಮಾಣ ಶೇ.90 ಪ್ರಗತಿ ಕಾಣಲು ಕಾರಣರಾಗಿದ್ದಾರೆ. ಶೌಚಾಲಯ ನಿರ್ಮಿಸಲು ಪ್ರತಿ ಕುಟುಂಬದ ಮನ ಒಲಿಸಿದ್ದಾರೆ. ಕಡ್ಡಾಯವಾಗಿ ಗ್ರಾಮಸಭೆ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳುತ್ತಾರೆ. ಇವರ ಉತ್ಸಾಹ ಎಲ್ಲಾ ಸದಸ್ಯರಲ್ಲಿಯೂ ಇದ್ದರೆ ಹೆಚ್ಚಿನ ಅಭಿವೃದ್ಧಿಯಾಗುತ್ತದೆ’ ಎಂದು ಹಿಂದೆ ಮಾಲಂಗಿ ಗ್ರಾಮ ಪಂಚಾಯ್ತಿಯ ಪಿಡಿಒ ಆಗಿದ್ದ ಡಾ.ಶೋಭಾರಾಣಿ ಹೇಳುತ್ತಾರೆ.

ಹೀಗೆ ಬುಡಕಟ್ಟು ಜನರಲ್ಲಿ ಹಕ್ಕೊತ್ತಾಯಗಳ ಅರಿವು ಮೂಡಿಸುತ್ತಾ ದಿನನಿತ್ಯದ ಸಾಮಾನ್ಯ ಸಮಸ್ಯೆಗಳನ್ನೂ ಆಲಿಸುತ್ತಾ ಅವಿರತವಾಗಿ ದುಡಿವ ಜಾನಕಮ್ಮ ಬುಡಕಟ್ಟು ನಾಯಕತ್ವಕ್ಕೆ ಒಂದು ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...