Homeಚಳವಳಿಮಸ್ಕಿಯಿಂದ ರಾಜ್ಯದೆಲ್ಲೆಡೆ ಹೋರಾಟದ ಹಾಡುಗಳನ್ನು ಪಸರಿಸಿದ ಜನಕವಿ ದಾನಪ್ಪ ನಿಲೋಗಲ್

ಮಸ್ಕಿಯಿಂದ ರಾಜ್ಯದೆಲ್ಲೆಡೆ ಹೋರಾಟದ ಹಾಡುಗಳನ್ನು ಪಸರಿಸಿದ ಜನಕವಿ ದಾನಪ್ಪ ನಿಲೋಗಲ್

ಚಳವಳಿಯ ಸಂಗಾತಿಯಾಗಿ, ಆಯಾ ಕಾಲದ ಬಿಕ್ಕಟ್ಟುಗಳನ್ನು, ಜನರನ್ನು ಎಚ್ಚರಿಸಬೇಕಾದ ವಿದ್ಯಮಾನಗಳನ್ನು ಸರಳವಾಗಿ ಜನರ ಲಯದಲ್ಲಿ ಹಾಡು ಕಟ್ಟಿ ಹಾಡುತ್ತಾರೆ. ನಂತರ ಈ ಹಾಡಿಗೆ ಕಾಲು ಬಂದೋ, ರೆಕ್ಕೆ ಬಂದೋ ಬೇರೆ ಬೇರೆ ಕಡೆಗಳಿಗೆ ಚಲಿಸುತ್ತವೆ. ಹೀಗೆ ಚಲಿಸುತ್ತಾ ಚಳವಳಿಗಳ ಸಂಗಾತಿಗಳಾಗುತ್ತವೆ.

- Advertisement -
- Advertisement -

ಎಲೆಮರೆ-26

  • ಅರುಣ್‌ ಜೋಳದ ಕೂಡ್ಲಿಗಿ

ಕರ್ನಾಟಕದ ಜನಪರ ಚಳವಳಿ, ಕಾರ್ಯಾಗಾರ, ಸಭೆಗಳ ಹೋರಾಟದ ಹಾಡುಗಳಲ್ಲಿ ಒಂದಾದರೂ ಮಸ್ಕಿಯ ದಾನಪ್ಪ ನಿಲೋಗಲ್ ರಚನೆ ಇದ್ದೇ ಇರುತ್ತೆ. ಹೀಗೆ ಹಾಡುವಾಗ ಕೆಲವೊಮ್ಮೆ ಈ ಹಾಡನ್ನು ದಾನಪ್ಪ ಕಟ್ಟಿದ್ದು ಎನ್ನುವುದೂ ಮರೆಯಾಗುತ್ತದೆ. ಅಂದರೆ ದಾನಪ್ಪನ ಹಾಡುಗಳು ಜನಪದ ಗೀತೆಗಳಂತೆ ನಾಡಿನಾದ್ಯಂತ ಹೆಸರಿನ ಹಂಗಿಲ್ಲದೆ ಚಲಿಸುತ್ತಿವೆ. ಹೀಗೆ ಜನರನ್ನು ತಲುಪುವುದೇ ಮುಖ್ಯ ನನ್ನ ಹೆಸರನ್ನು ಹೇಳುವ ಅಗತ್ಯವಿಲ್ಲ ಎಂದು ಸ್ವತಃ ದಾನಪ್ಪ ತನ್ನ ಹಾಡನ್ನು ಸಾರ್ವಜನಿಕ ವಲಯಕ್ಕೆ ಒಪ್ಪಿಸಿದ್ದಾರೆ. ಹೀಗೆ ಎಂಬತ್ತರ ದಶಕದಿಂದಲೂ ದಲಿತ ಚಳವಳಿಯ ಸಂಗಾತಿಯಾಗಿ, ಆಯಾ ಕಾಲದ ಬಿಕ್ಕಟ್ಟುಗಳನ್ನು, ಜನರನ್ನು ಎಚ್ಚರಿಸಬೇಕಾದ ವಿದ್ಯಮಾನಗಳನ್ನು ಸರಳವಾಗಿ ಜನರ ಲಯದಲ್ಲಿ ಹಾಡು ಕಟ್ಟಿ ಹಾಡುತ್ತಾರೆ. ನಂತರ ಈ ಹಾಡಿಗೆ ಕಾಲು ಬಂದೋ, ರೆಕ್ಕೆ ಬಂದೋ ಬೇರೆ ಬೇರೆ ಕಡೆಗಳಿಗೆ ಚಲಿಸುತ್ತವೆ. ಹೀಗೆ ಚಲಿಸುತ್ತಾ ಚಳವಳಿಗಳ ಸಂಗಾತಿಗಳಾಗುತ್ತವೆ.

ದಾನಪ್ಪ ಮಸ್ಕಿಯಲ್ಲೇ ಇದ್ದರೂ ಆತನ ಹಾಡುಗಳು ದಣಿವರಿಯದೆ ಚಳವಳಿಯಲ್ಲಿ ನಿರತವಾಗಿರುತ್ತವೆ. ‘ದಾನಪ್ಪನ ಜತೆ ಹಾಡಿದವರು, ಹಾಡುಕಟ್ಟಿದವರು ಅದನ್ನೇ ಏಣಿ ಮಾಡಿಕೊಂಡು ಕಳೆದು ಹೋದರೂ, ದಾನಪ್ಪ ಮಾತ್ರ ಈಗಲೂ ಹಾಡನ್ನೇ ಬದುಕುತ್ತಿದ್ದಾರೆ. ಇದೇ ನನ್ನಂಥವರಿಗೆ ಸೋಜಿಗ’ ಎನ್ನುವ ಕೊಟಗಾನಹಳ್ಳಿ ರಾಮಯ್ಯನವರ ಮಾತುಗಳು ದಾನಪ್ಪನವರ ಬದ್ಧತೆಗೆ ಸಾಕ್ಷಿಯಾಗಿವೆ.

’ಹೈದರಾಬಾದ್ ಕರ್ನಾಟಕ ಅಂದ್ರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದದ್ದು ಅಂತಾರೆ ಅದು ಸತ್ಯ, ಅದರ ಜೊತೆಗೆ ಹಿಂದುಳಿಯೋಕೆ ಕಾರಣ ಏನು ಅಂತ ನೋಡುವಾಗ ಇಲ್ಲಿ ಫ್ಯೂಡಲ್ ಸಂಸ್ಕೃತಿ ಜೀವಂತವಾಗಿರುವ ನೆಲ. ಅಂತೆಯೇ ಸ್ವಾತಂತ್ರ್ಯ ಸಿಕ್ಕು ಒಂದು ವರ್ಷದ ನಂತರ ಸ್ವಾತಂತ್ರ್ಯ ಸಿಕ್ಕ ಪ್ರದೇಶ. ಹೈದರಾಬಾದ್ ನಿಜಾಮನ ಆಡಳಿತವಿದ್ದ ಕಾರಣ ಫ್ಯೂಡಲ್ ವ್ಯವಸ್ಥೆಯೂ ಜೀವಂತವಾಗಿದ್ದು, ಪ್ರತಿಯೊಂದು ಹಳ್ಳಿಯಲ್ಲಿಯೂ ದಲಿತ ಮತ್ತು ಅಸ್ಪೃಶ್ಯರ ಜೀವನ ಗಂಭೀರವಾದ ಕಡು ಬಡತನದಲ್ಲಿತ್ತು. ಇವರಿಗೆ ಭೂಮಿ ಇಲ್ಲ, ಓದು ಇಲ್ಲ. ಹೀಗಿರುವಾಗ ಗೌಡ್ರು, ಜಮೀನ್ದಾರರ ದಬ್ಬಾಳಿಕೆಯ ಆಡಳಿತ. ಈ ಸ್ಥಿತಿಯಲ್ಲಿ ನನಗೆ ಓದಲು ಅವಕಾಶ ಸಿಕ್ಕದ್ದೇ ದೊಡ್ ವಿಷ್ಯ. ನಮ್ದು ನಿಲೋಗಲ್ ಆದ್ರೂ ಸಹ ಹತ್ತನ್ನೆರಡು ಕಿ.ಮೀ ದೂರದ ಹಟ್ಟಿ ಗೋಲ್ಡ್ ಮೈನ್ಸ್‌ನಲ್ಲಿ ನಮ್ಮಪ್ಪ ಕಾರ್ಮಿಕ ಆಗಿದ್ದ ಕಾರಣ ನನಗೆ ಓದೋಕೆ ಅವಕಾಶ ಸಿಕ್ತು. ಗೆದ್ದಲಗಟ್ಟಿ, ನಿಲೋಗಲ್‌ಗಳು ಧಣಿಗಳ ದರ್ಬಾರ್ ಇರೋ ಊರುಗಳು. ಅಕಸ್ಮಾತ್ ಕೂಲಿ ಆಗಿ ಕಳೆದು ಹೋಗೋನು ಓದಿ ಉಳಕಂಡೆ’ ಎಂದು ಬಾಲ್ಯದ ಅನುಭವಗಳನ್ನು ಹೇಳುತ್ತಾರೆ ದಾನಪ್ಪ.

’ನಮ್ಮ ಮನೆ ಎದುರು ಈರಣ್ಣನ ಕಟ್ಟೆ ಇತ್ತು. ಅಲ್ಲಿ ಭಜನಿ ಮಾಡತಿದ್ದರು. ನಾನು ಮಕ್ಕಂಡೇ ಈ ಭಜನಿ ಹಾಡುಗಳನ್ನು ಕೇಳಿಸಿಕೊಂಡು ಗುನುಗ್ತಾ ಇದ್ದೆ. ಹಿಮ್ಮೇಳವಾಗಿ ಭಜನಿಯಲ್ಲಿ ಕೂತು ಹಾಡತಿದ್ದೆ. ಕ್ರಿಶ್ಚಿಯನ್ ಮಾಸ್ ಗೀತೆಗಳ ಜತೆ ಹಾಡ್ತಿದ್ದೆ. ನಮ್ಮಪ್ಪ ಭಜನೆ ಪದಾನ ಚೊಲೋ ಹಾಡತಿದ್ದ. `ಗೂಳಿ ಬಂತು ಗೂಳಿ ಬಂತಣ್ಣಾ, ಗುರುಮಠಕೆ ತಕ್ಕ ಗೂಳಿ ಬಂತು ಗೂಳಿ ಬಂತಣ್ಣಾ..’ ತರಹದ ಜನಪದ ಭಜನೆಗಳು ನನ್ನೊಳಗೆ ಹಾಡಿನ ಲಯವನ್ನು ಕೂರಿಸ್ತಾ ಇದ್ವು. ’ನೀರ ನಿಲ್ಲದ ಬಾವಿ ತುಂಬುವುದೋ/ತುಂಬಿ ತುಳಕುವುದೋ/ಇರುವಿ ನೀರಡಿಸಿ ಬಂದು ಕುಡಿಯುವುದೋ/ಜಲ ಬತ್ತುವುದೋ/ ರೆಕ್ಕೆ ಇಲ್ಲದ ಪಕ್ಷಿ ಸುತ್ತುವುದೋ..’ ಈ ತರಹದ ತತ್ವಪದಗಳು ನನಗೆ ಹೆಚ್ಚು ಪ್ರಭಾವ ಬರ‍್ತಾ ಇದ್ವು. ಇಂತಹ ಹಿನ್ನೆಲೆಯ ಕಾರಣ ಇದೇ ಹಾಡಿಕೆ ಲಯಗಾರಿಕೆ ಚಳವಳಿಗೆ ದುಮುಕಿದ ಮೇಲೆ ಮತ್ತೆ ನನ್ನೊಳಗೆ ಹೊಸ ರೂಪ ಪಡೆದವು. ದಲಿತ ಕಲಾ ಮಂಡಳಿಯ ಹಾಡಿಕೆ, ಪದ ರಚನೆಗಳೂ ಆ ಕಾಲಕ್ಕೆ ನಮ್ಮನ್ನು ತುಂಬಾ ಪ್ರಭಾವ ಬೀರಿದ್ವು. ಪಿಚ್ಚಳ್ಳಿ ಶ್ರೀನಿವಾಸರ ಹಾಡುಗಳು ಆಗ ದೊಡ್ಡಮಟ್ಟದಲ್ಲಿ ಚಳವಳಿಯಲ್ಲಿ ಹಾಡಿಕೆಗೆ ಬಂದಿದ್ದವು. ಹೀಗಿರುವಾಗ ಹಿರೇನಗನೂರು ಹೋಟೆಲ್ ಪ್ರವೇಶ ಹೋರಾಟದ ಸಂದರ್ಭದಲ್ಲಿ ’ಅವತ್ತು ಸೋಮವಾರ, ಅಪ್ಪ ಬಸವನ ವಾರ’ ಅನ್ನೋ ಮೊದಲ ಹಾಡನ್ನ ಬರದೆ. ಎಂಬತ್ತರ ದಶಕದಲ್ಲಿ ಕ್ರಾಂತಿಕಾರಿ ಕವಿ ಗದ್ದರ್ ಅವರ ಕಾರ್ಯಕ್ರಮ ನೋಡಲು ಸಿಕ್ಕಿತು. ಜನಪರ ಸಾಹಿತ್ಯದ ಒಳ ತಿರುಳು ನನ್ನನ್ನು ಮತ್ತಷ್ಟು ಗಟ್ಟಿಗೊಳಿಸಿತು. ’ವಂಚಿತರೇ ಈ ದೇಶದ ವಾರಸುದಾರರು’ ಎನ್ನುವ ಸ್ಪಷ್ಟ ಕಲ್ಪನೆ ಬಂದಿತು. ಜನ ಕಲಾ ಮಂಡಳಿಯ ನಂಟಿನಿಂದ ಚೌಡಕಿ ಕತೆ, ನೀಲಗಿರಿ, ಹೆಸರಾದ ತವರೂರು, ಕೊಡಗು ಹೀಗೆ ಆಯಾ ಕಾಲದ ವಿಷ್ಯಗಳನ್ನು ಹಾಡುಗಳನ್ನಾಗಿ ಬರೆಯೋದು ಹಾಡೋದು ಶುರುವಾತು.

ನನ್ನ ಪ್ರತಿಯೊಂದು ಹಾಡಿನ ಮೊದಲ ತಾಲೀಮು ನನ್ನ ಮನೆ. ನನ್ನ ಹೆಂಡ್ತಿ ಮೇರಿ (ಮರಿಯಮ್ಮ) ಮಕ್ಕಳಾದ ಸ್ನೇಹಲತಾ, ಪ್ರಶಾಂತ್, ಪ್ರಮೋದ್ ಇವರನ್ನು ಅದೆಷ್ಟೋ ರಾತ್ರಿಗಳು ನಿದ್ದೆಗೆಡಿಸಿ ಕೋರಸ್ಸಿಗೆ ಎಬ್ಸಿದ್ದು, ರಾಗ ಲಯ ತಿದ್ದಿ ತೀಡಿ ಹಾಡು ಹೊರಬರೋ ಹೊತ್ತಿಗೆ ಬೆಳಕರಿದದ್ದೂ ಇದೆ’ ಎಂದು ಹಾಡಿಕೆಯ ಜಾಡನ್ನು ದಾನಪ್ಪ ನೆನೆಯುತ್ತಾರೆ.

ಅಂಬೇಡ್ಕರ್ ಹೇಳುವ `ಓದು-ಹೋರಾಟ’ ಒಟ್ಟೊಟ್ಟಿಗೆ ಆಗಬೇಕೆಂಬ ಮಾತನ್ನು ದಾನಪ್ಪ ಅಕ್ಷರಶಃ ಪಾಲಿಸಿದ್ದರು. ಬಿ.ಕೆ ಅವರ ಮಾರ್ಗದರ್ಶನ, ದಲಿತ ಕಲಾ ಮಂಡಳಿಯ ಪಿಚ್ಚಳ್ಳಿ ಶ್ರೀನಿವಾಸ, ಮುನಿಸ್ವಾಮಿ ಮೊದಲಾದವರ ಹೋರಾಟದ ಹಾಡುಗಳ ಸ್ಪೂರ್ತಿ, ಇದೆಲ್ಲದರ ಪರಿಣಾಮ ಧಾರವಾಡ ಜಿಲ್ಲೆಯ ದ.ಸಂ.ಸದ ಚಟುವಟಿಕೆಗಳು ಹಳ್ಳಿಗಳತ್ತ ನಡೆದದ್ದು, ಬ್ಯಾಡಗಿ ತಾಲೂಕಿನ ದುಮ್ಮಿಹಾಳ ಘಾಳ ಪೂಜೆ ಭೂ ಹೋರಾಟ, ಧರಣಿ ಹೋರಾಟ, ಅರೆಸ್ಟು, ಧಿಕ್ಕಾರಗಳು ಇವೆಲ್ಲ ದಾನಪ್ಪನ ನಿತ್ಯದ ಒಡನಾಡಿಗಳಾದವು. ’ಬಿ.ಕೆಯವರ ನಿರಂತರ ಒಡನಾಟ, ರಾಮದೇವ ರಾಕೆ, ಹೆಚ್.ಗೋವಿಂದಯ್ಯ, ಶಿವಲಿಂಗಪ್ಪ (ಶಿವಮೊಗ್ಗ), ಸಿ.ಎಂ.ಮುನಿಯಪ್ಪ (ಕೋಲಾರ) ಎಂ.ವೆಂಕಟಸ್ವಾಮಿ, ದೇವನೂರ ಮಹಾದೇವ, ಕವಿ ಸಿದ್ಧಲಿಂಗಯ್ಯ, ಮೊದಲಾದವರ ಭೇಟಿ ಚರ್ಚೆ ಮಾತುಕತೆ ನನ್ನನ್ನು ಮತ್ತಷ್ಟು ಗಟ್ಟಿಯಾಗಿಸಿದವು’ ಎಂದು ದಾನಪ್ಪ ನೆನೆಯುತ್ತಾರೆ.

ಹೀಗೆ ದಾನಪ್ಪ ನಿಲೋಗಲ್ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೀಗೊಂದು ಹೋರಾಟದ ಹಾಡಿನ ಪರಂಪರೆಯನ್ನು ಹುಟ್ಟುಹಾಕಿದ್ದಾರೆ. ಇದೀಗ ದಾನಪ್ಪನ ಮಗ ಪ್ರಶಾಂತನೂ ಈ ಪರಂಪರೆ ಮುಂದುವರಿಸಿದ್ದಾನೆ. ಗಂಗಾವತಿಯ ರಮೇಶ್ ಗಬ್ಬೂರು ಈ ಪರಂಪರೆಯನ್ನು ತಮ್ಮ ವಿದ್ಯಾರ್ಥಿಗಳ ಮೂಲಕ ಈ ಹಾಡಿಕೆಯ ಪರಂಪರೆಯನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ರೆಡ್ಡಿ ಸಹೋದರರ ವಿರುದ್ಧ ಪಟ್ಟುಬಿಡದೇ ಹೋರಾಡಿ ಗೆದ್ದ ದಿಟ್ಟ ಯುವತಿಯ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...