Homeಚಳವಳಿಮಸ್ಕಿಯಿಂದ ರಾಜ್ಯದೆಲ್ಲೆಡೆ ಹೋರಾಟದ ಹಾಡುಗಳನ್ನು ಪಸರಿಸಿದ ಜನಕವಿ ದಾನಪ್ಪ ನಿಲೋಗಲ್

ಮಸ್ಕಿಯಿಂದ ರಾಜ್ಯದೆಲ್ಲೆಡೆ ಹೋರಾಟದ ಹಾಡುಗಳನ್ನು ಪಸರಿಸಿದ ಜನಕವಿ ದಾನಪ್ಪ ನಿಲೋಗಲ್

ಚಳವಳಿಯ ಸಂಗಾತಿಯಾಗಿ, ಆಯಾ ಕಾಲದ ಬಿಕ್ಕಟ್ಟುಗಳನ್ನು, ಜನರನ್ನು ಎಚ್ಚರಿಸಬೇಕಾದ ವಿದ್ಯಮಾನಗಳನ್ನು ಸರಳವಾಗಿ ಜನರ ಲಯದಲ್ಲಿ ಹಾಡು ಕಟ್ಟಿ ಹಾಡುತ್ತಾರೆ. ನಂತರ ಈ ಹಾಡಿಗೆ ಕಾಲು ಬಂದೋ, ರೆಕ್ಕೆ ಬಂದೋ ಬೇರೆ ಬೇರೆ ಕಡೆಗಳಿಗೆ ಚಲಿಸುತ್ತವೆ. ಹೀಗೆ ಚಲಿಸುತ್ತಾ ಚಳವಳಿಗಳ ಸಂಗಾತಿಗಳಾಗುತ್ತವೆ.

- Advertisement -
- Advertisement -

ಎಲೆಮರೆ-26

  • ಅರುಣ್‌ ಜೋಳದ ಕೂಡ್ಲಿಗಿ

ಕರ್ನಾಟಕದ ಜನಪರ ಚಳವಳಿ, ಕಾರ್ಯಾಗಾರ, ಸಭೆಗಳ ಹೋರಾಟದ ಹಾಡುಗಳಲ್ಲಿ ಒಂದಾದರೂ ಮಸ್ಕಿಯ ದಾನಪ್ಪ ನಿಲೋಗಲ್ ರಚನೆ ಇದ್ದೇ ಇರುತ್ತೆ. ಹೀಗೆ ಹಾಡುವಾಗ ಕೆಲವೊಮ್ಮೆ ಈ ಹಾಡನ್ನು ದಾನಪ್ಪ ಕಟ್ಟಿದ್ದು ಎನ್ನುವುದೂ ಮರೆಯಾಗುತ್ತದೆ. ಅಂದರೆ ದಾನಪ್ಪನ ಹಾಡುಗಳು ಜನಪದ ಗೀತೆಗಳಂತೆ ನಾಡಿನಾದ್ಯಂತ ಹೆಸರಿನ ಹಂಗಿಲ್ಲದೆ ಚಲಿಸುತ್ತಿವೆ. ಹೀಗೆ ಜನರನ್ನು ತಲುಪುವುದೇ ಮುಖ್ಯ ನನ್ನ ಹೆಸರನ್ನು ಹೇಳುವ ಅಗತ್ಯವಿಲ್ಲ ಎಂದು ಸ್ವತಃ ದಾನಪ್ಪ ತನ್ನ ಹಾಡನ್ನು ಸಾರ್ವಜನಿಕ ವಲಯಕ್ಕೆ ಒಪ್ಪಿಸಿದ್ದಾರೆ. ಹೀಗೆ ಎಂಬತ್ತರ ದಶಕದಿಂದಲೂ ದಲಿತ ಚಳವಳಿಯ ಸಂಗಾತಿಯಾಗಿ, ಆಯಾ ಕಾಲದ ಬಿಕ್ಕಟ್ಟುಗಳನ್ನು, ಜನರನ್ನು ಎಚ್ಚರಿಸಬೇಕಾದ ವಿದ್ಯಮಾನಗಳನ್ನು ಸರಳವಾಗಿ ಜನರ ಲಯದಲ್ಲಿ ಹಾಡು ಕಟ್ಟಿ ಹಾಡುತ್ತಾರೆ. ನಂತರ ಈ ಹಾಡಿಗೆ ಕಾಲು ಬಂದೋ, ರೆಕ್ಕೆ ಬಂದೋ ಬೇರೆ ಬೇರೆ ಕಡೆಗಳಿಗೆ ಚಲಿಸುತ್ತವೆ. ಹೀಗೆ ಚಲಿಸುತ್ತಾ ಚಳವಳಿಗಳ ಸಂಗಾತಿಗಳಾಗುತ್ತವೆ.

ದಾನಪ್ಪ ಮಸ್ಕಿಯಲ್ಲೇ ಇದ್ದರೂ ಆತನ ಹಾಡುಗಳು ದಣಿವರಿಯದೆ ಚಳವಳಿಯಲ್ಲಿ ನಿರತವಾಗಿರುತ್ತವೆ. ‘ದಾನಪ್ಪನ ಜತೆ ಹಾಡಿದವರು, ಹಾಡುಕಟ್ಟಿದವರು ಅದನ್ನೇ ಏಣಿ ಮಾಡಿಕೊಂಡು ಕಳೆದು ಹೋದರೂ, ದಾನಪ್ಪ ಮಾತ್ರ ಈಗಲೂ ಹಾಡನ್ನೇ ಬದುಕುತ್ತಿದ್ದಾರೆ. ಇದೇ ನನ್ನಂಥವರಿಗೆ ಸೋಜಿಗ’ ಎನ್ನುವ ಕೊಟಗಾನಹಳ್ಳಿ ರಾಮಯ್ಯನವರ ಮಾತುಗಳು ದಾನಪ್ಪನವರ ಬದ್ಧತೆಗೆ ಸಾಕ್ಷಿಯಾಗಿವೆ.

’ಹೈದರಾಬಾದ್ ಕರ್ನಾಟಕ ಅಂದ್ರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದದ್ದು ಅಂತಾರೆ ಅದು ಸತ್ಯ, ಅದರ ಜೊತೆಗೆ ಹಿಂದುಳಿಯೋಕೆ ಕಾರಣ ಏನು ಅಂತ ನೋಡುವಾಗ ಇಲ್ಲಿ ಫ್ಯೂಡಲ್ ಸಂಸ್ಕೃತಿ ಜೀವಂತವಾಗಿರುವ ನೆಲ. ಅಂತೆಯೇ ಸ್ವಾತಂತ್ರ್ಯ ಸಿಕ್ಕು ಒಂದು ವರ್ಷದ ನಂತರ ಸ್ವಾತಂತ್ರ್ಯ ಸಿಕ್ಕ ಪ್ರದೇಶ. ಹೈದರಾಬಾದ್ ನಿಜಾಮನ ಆಡಳಿತವಿದ್ದ ಕಾರಣ ಫ್ಯೂಡಲ್ ವ್ಯವಸ್ಥೆಯೂ ಜೀವಂತವಾಗಿದ್ದು, ಪ್ರತಿಯೊಂದು ಹಳ್ಳಿಯಲ್ಲಿಯೂ ದಲಿತ ಮತ್ತು ಅಸ್ಪೃಶ್ಯರ ಜೀವನ ಗಂಭೀರವಾದ ಕಡು ಬಡತನದಲ್ಲಿತ್ತು. ಇವರಿಗೆ ಭೂಮಿ ಇಲ್ಲ, ಓದು ಇಲ್ಲ. ಹೀಗಿರುವಾಗ ಗೌಡ್ರು, ಜಮೀನ್ದಾರರ ದಬ್ಬಾಳಿಕೆಯ ಆಡಳಿತ. ಈ ಸ್ಥಿತಿಯಲ್ಲಿ ನನಗೆ ಓದಲು ಅವಕಾಶ ಸಿಕ್ಕದ್ದೇ ದೊಡ್ ವಿಷ್ಯ. ನಮ್ದು ನಿಲೋಗಲ್ ಆದ್ರೂ ಸಹ ಹತ್ತನ್ನೆರಡು ಕಿ.ಮೀ ದೂರದ ಹಟ್ಟಿ ಗೋಲ್ಡ್ ಮೈನ್ಸ್‌ನಲ್ಲಿ ನಮ್ಮಪ್ಪ ಕಾರ್ಮಿಕ ಆಗಿದ್ದ ಕಾರಣ ನನಗೆ ಓದೋಕೆ ಅವಕಾಶ ಸಿಕ್ತು. ಗೆದ್ದಲಗಟ್ಟಿ, ನಿಲೋಗಲ್‌ಗಳು ಧಣಿಗಳ ದರ್ಬಾರ್ ಇರೋ ಊರುಗಳು. ಅಕಸ್ಮಾತ್ ಕೂಲಿ ಆಗಿ ಕಳೆದು ಹೋಗೋನು ಓದಿ ಉಳಕಂಡೆ’ ಎಂದು ಬಾಲ್ಯದ ಅನುಭವಗಳನ್ನು ಹೇಳುತ್ತಾರೆ ದಾನಪ್ಪ.

’ನಮ್ಮ ಮನೆ ಎದುರು ಈರಣ್ಣನ ಕಟ್ಟೆ ಇತ್ತು. ಅಲ್ಲಿ ಭಜನಿ ಮಾಡತಿದ್ದರು. ನಾನು ಮಕ್ಕಂಡೇ ಈ ಭಜನಿ ಹಾಡುಗಳನ್ನು ಕೇಳಿಸಿಕೊಂಡು ಗುನುಗ್ತಾ ಇದ್ದೆ. ಹಿಮ್ಮೇಳವಾಗಿ ಭಜನಿಯಲ್ಲಿ ಕೂತು ಹಾಡತಿದ್ದೆ. ಕ್ರಿಶ್ಚಿಯನ್ ಮಾಸ್ ಗೀತೆಗಳ ಜತೆ ಹಾಡ್ತಿದ್ದೆ. ನಮ್ಮಪ್ಪ ಭಜನೆ ಪದಾನ ಚೊಲೋ ಹಾಡತಿದ್ದ. `ಗೂಳಿ ಬಂತು ಗೂಳಿ ಬಂತಣ್ಣಾ, ಗುರುಮಠಕೆ ತಕ್ಕ ಗೂಳಿ ಬಂತು ಗೂಳಿ ಬಂತಣ್ಣಾ..’ ತರಹದ ಜನಪದ ಭಜನೆಗಳು ನನ್ನೊಳಗೆ ಹಾಡಿನ ಲಯವನ್ನು ಕೂರಿಸ್ತಾ ಇದ್ವು. ’ನೀರ ನಿಲ್ಲದ ಬಾವಿ ತುಂಬುವುದೋ/ತುಂಬಿ ತುಳಕುವುದೋ/ಇರುವಿ ನೀರಡಿಸಿ ಬಂದು ಕುಡಿಯುವುದೋ/ಜಲ ಬತ್ತುವುದೋ/ ರೆಕ್ಕೆ ಇಲ್ಲದ ಪಕ್ಷಿ ಸುತ್ತುವುದೋ..’ ಈ ತರಹದ ತತ್ವಪದಗಳು ನನಗೆ ಹೆಚ್ಚು ಪ್ರಭಾವ ಬರ‍್ತಾ ಇದ್ವು. ಇಂತಹ ಹಿನ್ನೆಲೆಯ ಕಾರಣ ಇದೇ ಹಾಡಿಕೆ ಲಯಗಾರಿಕೆ ಚಳವಳಿಗೆ ದುಮುಕಿದ ಮೇಲೆ ಮತ್ತೆ ನನ್ನೊಳಗೆ ಹೊಸ ರೂಪ ಪಡೆದವು. ದಲಿತ ಕಲಾ ಮಂಡಳಿಯ ಹಾಡಿಕೆ, ಪದ ರಚನೆಗಳೂ ಆ ಕಾಲಕ್ಕೆ ನಮ್ಮನ್ನು ತುಂಬಾ ಪ್ರಭಾವ ಬೀರಿದ್ವು. ಪಿಚ್ಚಳ್ಳಿ ಶ್ರೀನಿವಾಸರ ಹಾಡುಗಳು ಆಗ ದೊಡ್ಡಮಟ್ಟದಲ್ಲಿ ಚಳವಳಿಯಲ್ಲಿ ಹಾಡಿಕೆಗೆ ಬಂದಿದ್ದವು. ಹೀಗಿರುವಾಗ ಹಿರೇನಗನೂರು ಹೋಟೆಲ್ ಪ್ರವೇಶ ಹೋರಾಟದ ಸಂದರ್ಭದಲ್ಲಿ ’ಅವತ್ತು ಸೋಮವಾರ, ಅಪ್ಪ ಬಸವನ ವಾರ’ ಅನ್ನೋ ಮೊದಲ ಹಾಡನ್ನ ಬರದೆ. ಎಂಬತ್ತರ ದಶಕದಲ್ಲಿ ಕ್ರಾಂತಿಕಾರಿ ಕವಿ ಗದ್ದರ್ ಅವರ ಕಾರ್ಯಕ್ರಮ ನೋಡಲು ಸಿಕ್ಕಿತು. ಜನಪರ ಸಾಹಿತ್ಯದ ಒಳ ತಿರುಳು ನನ್ನನ್ನು ಮತ್ತಷ್ಟು ಗಟ್ಟಿಗೊಳಿಸಿತು. ’ವಂಚಿತರೇ ಈ ದೇಶದ ವಾರಸುದಾರರು’ ಎನ್ನುವ ಸ್ಪಷ್ಟ ಕಲ್ಪನೆ ಬಂದಿತು. ಜನ ಕಲಾ ಮಂಡಳಿಯ ನಂಟಿನಿಂದ ಚೌಡಕಿ ಕತೆ, ನೀಲಗಿರಿ, ಹೆಸರಾದ ತವರೂರು, ಕೊಡಗು ಹೀಗೆ ಆಯಾ ಕಾಲದ ವಿಷ್ಯಗಳನ್ನು ಹಾಡುಗಳನ್ನಾಗಿ ಬರೆಯೋದು ಹಾಡೋದು ಶುರುವಾತು.

ನನ್ನ ಪ್ರತಿಯೊಂದು ಹಾಡಿನ ಮೊದಲ ತಾಲೀಮು ನನ್ನ ಮನೆ. ನನ್ನ ಹೆಂಡ್ತಿ ಮೇರಿ (ಮರಿಯಮ್ಮ) ಮಕ್ಕಳಾದ ಸ್ನೇಹಲತಾ, ಪ್ರಶಾಂತ್, ಪ್ರಮೋದ್ ಇವರನ್ನು ಅದೆಷ್ಟೋ ರಾತ್ರಿಗಳು ನಿದ್ದೆಗೆಡಿಸಿ ಕೋರಸ್ಸಿಗೆ ಎಬ್ಸಿದ್ದು, ರಾಗ ಲಯ ತಿದ್ದಿ ತೀಡಿ ಹಾಡು ಹೊರಬರೋ ಹೊತ್ತಿಗೆ ಬೆಳಕರಿದದ್ದೂ ಇದೆ’ ಎಂದು ಹಾಡಿಕೆಯ ಜಾಡನ್ನು ದಾನಪ್ಪ ನೆನೆಯುತ್ತಾರೆ.

ಅಂಬೇಡ್ಕರ್ ಹೇಳುವ `ಓದು-ಹೋರಾಟ’ ಒಟ್ಟೊಟ್ಟಿಗೆ ಆಗಬೇಕೆಂಬ ಮಾತನ್ನು ದಾನಪ್ಪ ಅಕ್ಷರಶಃ ಪಾಲಿಸಿದ್ದರು. ಬಿ.ಕೆ ಅವರ ಮಾರ್ಗದರ್ಶನ, ದಲಿತ ಕಲಾ ಮಂಡಳಿಯ ಪಿಚ್ಚಳ್ಳಿ ಶ್ರೀನಿವಾಸ, ಮುನಿಸ್ವಾಮಿ ಮೊದಲಾದವರ ಹೋರಾಟದ ಹಾಡುಗಳ ಸ್ಪೂರ್ತಿ, ಇದೆಲ್ಲದರ ಪರಿಣಾಮ ಧಾರವಾಡ ಜಿಲ್ಲೆಯ ದ.ಸಂ.ಸದ ಚಟುವಟಿಕೆಗಳು ಹಳ್ಳಿಗಳತ್ತ ನಡೆದದ್ದು, ಬ್ಯಾಡಗಿ ತಾಲೂಕಿನ ದುಮ್ಮಿಹಾಳ ಘಾಳ ಪೂಜೆ ಭೂ ಹೋರಾಟ, ಧರಣಿ ಹೋರಾಟ, ಅರೆಸ್ಟು, ಧಿಕ್ಕಾರಗಳು ಇವೆಲ್ಲ ದಾನಪ್ಪನ ನಿತ್ಯದ ಒಡನಾಡಿಗಳಾದವು. ’ಬಿ.ಕೆಯವರ ನಿರಂತರ ಒಡನಾಟ, ರಾಮದೇವ ರಾಕೆ, ಹೆಚ್.ಗೋವಿಂದಯ್ಯ, ಶಿವಲಿಂಗಪ್ಪ (ಶಿವಮೊಗ್ಗ), ಸಿ.ಎಂ.ಮುನಿಯಪ್ಪ (ಕೋಲಾರ) ಎಂ.ವೆಂಕಟಸ್ವಾಮಿ, ದೇವನೂರ ಮಹಾದೇವ, ಕವಿ ಸಿದ್ಧಲಿಂಗಯ್ಯ, ಮೊದಲಾದವರ ಭೇಟಿ ಚರ್ಚೆ ಮಾತುಕತೆ ನನ್ನನ್ನು ಮತ್ತಷ್ಟು ಗಟ್ಟಿಯಾಗಿಸಿದವು’ ಎಂದು ದಾನಪ್ಪ ನೆನೆಯುತ್ತಾರೆ.

ಹೀಗೆ ದಾನಪ್ಪ ನಿಲೋಗಲ್ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೀಗೊಂದು ಹೋರಾಟದ ಹಾಡಿನ ಪರಂಪರೆಯನ್ನು ಹುಟ್ಟುಹಾಕಿದ್ದಾರೆ. ಇದೀಗ ದಾನಪ್ಪನ ಮಗ ಪ್ರಶಾಂತನೂ ಈ ಪರಂಪರೆ ಮುಂದುವರಿಸಿದ್ದಾನೆ. ಗಂಗಾವತಿಯ ರಮೇಶ್ ಗಬ್ಬೂರು ಈ ಪರಂಪರೆಯನ್ನು ತಮ್ಮ ವಿದ್ಯಾರ್ಥಿಗಳ ಮೂಲಕ ಈ ಹಾಡಿಕೆಯ ಪರಂಪರೆಯನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ರೆಡ್ಡಿ ಸಹೋದರರ ವಿರುದ್ಧ ಪಟ್ಟುಬಿಡದೇ ಹೋರಾಡಿ ಗೆದ್ದ ದಿಟ್ಟ ಯುವತಿಯ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...