Homeಕರ್ನಾಟಕ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.

“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...