Homeಕರ್ನಾಟಕ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.

“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....