Homeಕರ್ನಾಟಕ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.

“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...