Homeಕರ್ನಾಟಕ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.

“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...