Homeಕರ್ನಾಟಕಬಜೆಟ್ ಅಧಿವೇಶನದಲ್ಲಿ 'ರೋಹಿತ್ ಕಾಯ್ದೆ' ಜಾರಿಗೆ ಆಗ್ರಹ

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೊಳಿಸಬೇಕು ಎಂದು ‘ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ’ ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು.

ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ತಂಡದ ಪ್ರಮುಖರು, “ಕಾಂಗ್ರೆಸ್‌ ಪಕ್ಷವು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ‘ರೋಹಿತ್‌ ವೇಮುಲ ಕಾಯ್ದೆ’ಯನ್ನು ಜಾರಿಗೊಳಿಸುವ ಭರವಸೆ ನೀಡಿತ್ತು. ಏಪ್ರಿಲ್ 2025ರಲ್ಲಿ ರಾಹುಲ್ ಗಾಂಧಿಯವರ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೆ ತರುವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿದ್ದರು. ಈ ಭರವಸೆಯು ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ತಾರತಮ್ಯವನ್ನು ಎದುರಿಸುತ್ತಿರುವ ಲಕ್ಷಾಂತರ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು, ಬೋಧಕರು ಮತ್ತು ಸಿಬ್ಬಂದಿಗಳಲ್ಲಿ ಸಮಾನ ಬದುಕಿನ ಹೊಸ ಭರವಸೆಯನ್ನು ಮೂಡಿಸಿತ್ತು ಎಂದರು.

ಮುಂದುವರಿದು, ಜನಾಂದೋಲನ ತಂಡವು ರಾಜ್ಯದಾದ್ಯಂತ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಕರು ಮತ್ತು ಕಾನೂನು ತಜ್ಞರೊಂದಿಗೆ ಎರಡು ವರ್ಷ ಕಾಲ ಸಮಾಲೋಚನೆ ನಡೆಸಿದ ನಂತರ, ಏಪ್ರಿಲ್ 2025ರಲ್ಲಿ ಮಾದರಿ ವಿಧೇಯಕದ ಕರಡನ್ನು ಸಿದ್ಧಪಡಿಸಿತು. ಡಿಸೆಂಬರ್ 2025ರಲ್ಲಿ ಅದನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಲ್ಲಿಸಿತು. ಅದೇ ತಿಂಗಳಲ್ಲೇ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರೊಂದಿಗೆ ಸಮಾಲೋಚನೆ ನಡೆಸಿತ್ತು. ಸರ್ಕಾರ ಸಣ್ಣಪುಟ್ಟ ತಿದ್ದುಪಡಿಗಳೊಂದಿಗೆ ಮಾದರಿ ವಿಧೇಯಕವನ್ನು ಒಪ್ಪಿಕೊಂಡಿರುವುದಾಗಿ ಆಂದೋಲನದ ಸದಸ್ಯರಿಗೆ ತಿಳಿಸಿತ್ತು. ಅದನ್ನು ನಾವು ಸ್ವಾಗತಿಸಿದ್ದೆವು ಎಂದು ವಿವರಿಸಿದರು.

ರಾಜ್ಯ ಸರ್ಕಾರ ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ರಾಹುಲ್ ಗಾಂಧಿಯವರು 2026ರ ಜನವರಿ 17ರಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಆದರೆ, ಇದುವರೆಗೆ ವಿಧೇಯಕದ ಕರಡನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡುಗಡೆ ಮಾಡಿಲ್ಲ, ಅಥವಾ ಕಾಯ್ದೆಯನ್ನು ಜಾರಿಮಾಡಲು ಸ್ಪಷ್ಟ ವೇಳಾಪಟ್ಟಿಯನ್ನೂ ಘೋಷಿಸಿಲ್ಲ. ಈ ವಿಳಂಬವು ರಾಜ್ಯದಾದ್ಯಂತ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ ಎಂದು ಹೇಳಿದರು.

ಉನ್ನತ ಶಿಕ್ಷಣದಲ್ಲಿನ ರಚನಾತ್ಮಕ ಜಾತಿ ಆಧಾರಿತ ತಾರತಮ್ಯವನ್ನು ಹೋಗಲಾಡಿಸಲು 2026ರ ಯುಜಿಸಿ ಸಮಾನತೆ ನಿಯಮಗಳು ಸೇರಿದಂತೆ ಅಸ್ತಿತ್ವದಲ್ಲಿರುವ ನಿಯಂತ್ರಣ ಕ್ರಮಗಳು ಸಾಕಾಗುವುದಿಲ್ಲ ಎಂದು ಆಂದೋಲನವು ಪುನರುಚ್ಚರಿಸುತ್ತದೆ. ಪ್ರತ್ಯೇಕ ‘ರೋಹಿತ್ ವೇಮುಲ ಕಾಯ್ದೆ’ ತುರ್ತಾಗಿ ಜಾರಿಯಾಗಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಿ, ಕೊಟ್ಟ ಮಾತಿನಂತೆ ಕಾಯ್ದೆಯನ್ನು ಜಾರಿಗೊಳಿಸುವಂತೆ ಸೂಚಿಸಬೇಕು, ಬಜೆಟ್ ಅಧಿವೇಶನದಲ್ಲಿ ಅದನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಆಂದೋಲನದ ಪ್ರಮುಖರಾದ ಬಸವರಾಜ್ ಕೌತಾಳ್, ಮಾವಳ್ಳಿ ಶಂಕರ್, ಹುಲಿಕುಂಟೆ ಮೂರ್ತಿ, ರಾಹುಲ್, ಲೇಖಾ ಮತ್ತು ಆಶ್ನಾ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...