Homeಮುಖಪುಟ'ನುಡಿಯು ಸಿರಿಯಲ್ಲ ಬದುಕು' ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ 'ಜನನುಡಿ-2026'

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

- Advertisement -
- Advertisement -

“ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ,” ಎಂದು ‘ಅಭಿಮತ ಮಂಗಳೂರು’ ಆಶಯ ವ್ಯಕ್ತಪಡಿಸಿದೆ.

ಪ್ರಭುತ್ವದ ನಿರಂಕುಶ ಧೋರಣೆ, ಸಾಂಸ್ಕೃತಿಕ ಕಾರ್ಪೊರೇಟೀಕರಣ ಹಾಗೂ ಸಮಾಜವನ್ನು ವಿಭಜಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ಸಾಂಸ್ಕೃತಿಕ-ಸಾಹಿತ್ಯಿಕ ಪ್ರತಿರೋಧದ ಸಂಕೇತವಾಗಿ ರೂಪುಗೊಂಡಿದ್ದ ‘ಜನನುಡಿ’ ಮತ್ತೆ ಸದ್ದು ಮಾಡಲು ಸಜ್ಜಾಗಿದೆ. ‘ಅಭಿಮತ ಮಂಗಳೂರು’ ಆಶ್ರಯದಲ್ಲಿ 2026ರ ನವೆಂಬರ್ 28 ಮತ್ತು 29 ರಂದು ಕರಾವಳಿ ನಗರಿ ಮಂಗಳೂರಿನಲ್ಲಿ ‘ಜನನುಡಿ – 2026’ ಅನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 50ಕ್ಕೂ ಹೆಚ್ಚು ಹಿರಿಯ-ಕಿರಿಯ ಬರಹಗಾರರು, ರಂಗಕರ್ಮಿಗಳು, ಚಿಂತಕರು ಮತ್ತು ಜನಪರ ಆಕ್ಟಿವಿಸ್ಟ್‌ಗಳು ಭಾಗವಹಿಸಿದ್ದ ‘ಅಭಿಮತ’ದ ಪ್ರಾಥಮಿಕ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಸಕ್ತ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎದುರಿಸುತ್ತಿರುವ ತೀವ್ರ ಸವಾಲುಗಳನ್ನು ಕೇಂದ್ರವಾಗಿಟ್ಟುಕೊಂಡು ಈ ಬಾರಿಯ ‘ಜನನುಡಿ’ ಗೋಷ್ಠಿಗಳನ್ನು ವಿನ್ಯಾಸಗೊಳಿಸಲು ತೀರ್ಮಾನಿಸಲಾಗಿದೆ.

‘ಜನನುಡಿ’ಯ ಹುಟ್ಟು

ಕರಾವಳಿಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಹೆಸರಿನಲ್ಲಿ ನಡೆಯುತ್ತಿದ್ದ ಅದ್ದೂರಿ, ಕಾರ್ಪೊರೇಟ್ ಪ್ರಾಯೋಜಿತ ಹಾಗೂ ವಿಚಾರಶೂನ್ಯ ಉತ್ಸವಗಳಿಗೆ ಪರ್ಯಾಯವಾಗಿ 2013ರಲ್ಲಿ ‘ಅಭಿಮತ’ ಬಳಗದ ಮೂಲಕ ‘ನುಡಿಯು ಸಿರಿಯಲ್ಲ ಬದುಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಜನ್ಮತಾಳಿದ್ದು ‘ಜನನುಡಿ’

ಸಾಹಿತ್ಯಿಕ ಆಡಂಬರ, ಬ್ರಾಂಡ್ ಕಟ್ಟುವ ತಂತ್ರ ಹಾಗೂ ಅಧಿಕಾರಸ್ಥರ ಓಲೈಕೆಯ ವಿರುದ್ಧ ‘ಜನರ ಧ್ವನಿ’ಯಾಗಿ ಆರಂಭವಾದ ಈ ಸಮಾವೇಶ, ಪ್ರಭುತ್ವದ ತಪ್ಪು ನೀತಿಗಳು, ಮೌಢ್ಯ (ಉದಾಹರಣೆಗೆ ಮಡೆಸ್ನಾನ), ಕೋಮುವಾದ ಮತ್ತು ಜಾಗತೀಕರಣದ ಪರಿಣಾಮಗಳ ಕುರಿತು ಮುಕ್ತವಾಗಿ ಚರ್ಚಿಸುವ ವೇದಿಕೆಯಾಗಿತ್ತು.

ಡಾ. ಯು.ಆರ್. ಅನಂತಮೂರ್ತಿ, ಜಿ. ರಾಜಶೇಖರ್, ಪ್ರೊ. ರಾಜೇಂದ್ರ ಚೆನ್ನಿ, ಕೆ.ವಿ. ನಾರಾಯಣ, ಡಾ. ಎಚ್.ಎಸ್. ಅನುಪಮಾ, ಸಾರಾ ಅಬೂಬಕರ್, ಪ್ರಕಾಶ್ ರೈ ಮುಂತಾದ ಪ್ರಗತಿಪರ ವೈಚಾರಿಕ ದೈತ್ಯರು ‘ಜನನುಡಿ’ಯ ಗೋಷ್ಠಿಗಳಲ್ಲಿ ಧ್ವನಿಯಾಗಿದ್ದರು. ಯಾವುದೇ ಸರ್ಕಾರಿ ಅನುದಾನ ಅಥವಾ ಕಾರ್ಪೊರೇಟ್ ಹಂಗಿಲ್ಲದೆ, ಪ್ರಗತಿಪರ ಮನಸ್ಸುಗಳ ಸ್ವಯಂಪ್ರೇರಿತ ವಂತಿಗೆಯಿಂದಲೇ ನಡೆದುಬಂದದ್ದು ‘ಜನನುಡಿ’ಯ ಹೆಗ್ಗಳಿಕೆ.

ಕಳೆದ ಕೆಲವು ವರ್ಷಗಳಿಂದ ಸಾಂಸ್ಥಿಕ ತೊಡಕುಗಳು, ಕೋವಿಡ್‌ ಸಂದರ್ಭ ಹಾಗೂ ಸಂಘಟನಾತ್ಮಕ ಹಿನ್ನಡೆಗಳಿಂದಾಗಿ ‘ಜನನುಡಿ’ ನಿರಂತರವಾಗಿ ನಡೆಯಲು ಸಾಧ್ಯವಾಗಿರಲಿಲ್ಲ. ಸಾಂಸ್ಕೃತಿಕ ಚಳವಳಿಗಳಲ್ಲಿ ಉಂಟಾದ ಈ ಶೂನ್ಯತೆಯು ಜನಪರ ಚಳವಳಿಗಳ ಮೇಲೆ ಪರಿಣಾಮ ಬೀರಿತ್ತು. ಆದರೆ, ಇಂದಿನ ಆತಂಕಕಾರಿ ರಾಜಕೀಯ ಮತ್ತು ಸಾಮಾಜಿಕ ಸನ್ನಿವೇಶದಲ್ಲಿ ‘ಜನನುಡಿ’ಯಂತಹ ಮುಕ್ತ, ವೈಚಾರಿಕ ಹಾಗೂ ಜನಪರ ವೇದಿಕೆಯು ಕಾಲದ ಅತ್ಯಂತ ತುರ್ತು ಅಗತ್ಯ ಎಂಬ ಅಭಿಪ್ರಾಯ ನಾಡಿನಾದ್ಯಂತ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ‘ಜನನುಡಿ’ಗೆ ಮರುಜೀವ ನೀಡಲು ಮುಂದಾಗಿರುವ ‘ಅಭಿಮತ’, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಮಾನಮನಸ್ಕ ಸಂಘಟನೆಗಳು, ಸಾಹಿತಿಗಳು ಮತ್ತು ಚಿಂತಕರನ್ನು ಒಗೂಡಿಸಲು ಯೋಜನೆ ರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...