Homeರಾಜಕೀಯ“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

- Advertisement -
- Advertisement -

ಕೊಡುಗೈ ದಾನಿಯಾದ ಆದುನಿಕ ಕರ್ಣ ನಮ್ಮ ಬಳ್ಳಾರಿ ಗಾಲಿಯನ್ನು ಹಿಡಿದು ಜೈಲಿಗೆ ಹಾಕಿದ ಕ್ಷಣ ನೆನಸಿಕೊಂಡರೆ ಮನಸ್ಸಿಗೆ ವೈರಾಗ್ಯ ಆವರಿಸಿಕೊಂಡು ಮನಸ್ಸು ಆರ್ದ್ರಗೊಳುತ್ತದಲ್ಲಾ. ಇದಕ್ಕೆ ಕಾರಣವನ್ನು ರೆಡ್ಡಿಯನ್ನೆÃ ಕೇಳಿ ತಿಳಿದುಕೊಂಡರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್‌ಟೋನ್: ‘ಏನಿದೀ ಗ್ರಹಚಾರವೋ ಏನಿದೀ ವನವಾಸವೊ ಏನ ಮಾಡಿದನೆಂದು ಈ ಪರಿ ಎನಗೆ ತಂದೆಯೋ ಪಶುಪತೀ…. ಏನಿದೀ…..’ “ಹಲೋ ಯಾರು”
“ಸಾರ್ ನಾನು ಪತ್ರಕರ್ತ ಯಾಹು ಅಂತ”
“ಯಾಹು ಅಂತ್ಲ ಏನ್ಹೆÃಳಿ”
“ತಾವ್ಯಾರು ಸಾರ್”
“ನಾನು ಜೈಲ್ ಸೂಪರ್‌ಡೆಂಟ್ ಏನಾಗಬೇಕು ಕೇಳಿ”
“ಜನಾರ್ದನ ರೆಡ್ಡಿಯವರು ಪತ್ರಕರ್ತರಿಗೆ ಪರಮ ಮಿತ್ರರು ಸಾರ್. ನಮಗೆಲ್ಲ ತುಂಬ ಸಹಾಯ ಮಾಡಿದಾರೆ. ಅವುರ ಜೊತೆ ಒಂದೆರಡು ಮಾತಾಡಬೇಕು. ಅವುಕಾಶ ಮಾಡಿಕೊಡಿ ಸಾರ್”
“ಆಯ್ತು ಮಾತಾಡಿ”
“ಹಲೋ”
“ನಾನು ಸಾರ್ ಯಾಹು”
“ಯಾಹು ಅವರೆ ನೀವು ಫೋನ್ ಮಾಡಿದ್ದಕ್ಕೆ ತುಂಬ ಸಂತೋಷ ಆಯ್ತು. ನನ್ನ ಕೈಯಿಂದ ಲಕ್ಷಲಕ್ಷ ಹಣ ಪಡುಕೊಂಡ ಯಾವ ಪತ್ರಕರ್ತರು ಇದುವರೆಗೂ ನನಗೆ ಫೋನ್ ಮಾಡಿಲ್ಲ. ನೀವು ಮಾಡಿದ್ದಕ್ಕೆ ನನಗೆ ಸಂತೋಷ ಆಗಿದೆ, ನಮ್ಮ ಪಾರಿಜಾತದಲ್ಲಿ ಕುಳಿತಿರಿ ಬಂದುಬಿಡ್ತಿÃನಿ”
“ಏನು ಸಾರ್ ಪಾರಿಜಾತ ಅನ್ನೊÃ ಬಂಗ್ಲೆÃಲಿ ಬಡವನಾದ ನನ್ನಂಥ ಪತ್ರಕರ್ತ ಇರೋದು. ನೀವು ಪರಪ್ಪನ ಅಗ್ರಹಾರದ ಜೈಲಿನ ಕೋಣೆಲಿರೋದು ನನಿಗ್ಯಾಕೊ ದುಖಃ ಆಗ್ತಾಯಿದೆ ಸಾರ್”
“ನೋಡಿ ಕಷ್ಟಗಳು ಮನುಷ್ಯನಿಗಷ್ಟೆÃ ಬರೋದು ಗುಡ್ಡಗಳಿಗಲ್ಲ ಸಹಿಸಿಕೊಳ್ಳಬೇಕು”
“ಗುಡ್ಡಗಳಿಗೂ ಕಷ್ಟ ಬರುತ್ತೆ ಸಾರ್. ಭೂದೇವಿಯ ಸ್ತನಗಳಂಗೆ ಕಾಣುತಿದ್ದ ಸುಂದರವಾದ ಬಳ್ಳಾರಿ ಜೋಡಿ ಗುಡ್ಡಗಳು ನಿರ್ನಾಮ ಆಗಿ ನಮ್ಮ ವೈರಿ ರಾಷ್ಟç ಚೀಣಾದಲ್ಲಿವೆಯಂತೆ. ಆದ್ದರಿಂದ ಕಷ್ಟ ಮನುಷ್ಯರಿಗಷ್ಟೆÃ ಅಲ್ಲ ನಿಸರ್ಗಕ್ಕೂ ಬಂದಿದೆ ಸಾರ್. ನಿಸರ್ಗಪ್ರಿಯನಾದ ತಮಗೆ ಕಷ್ಟ ಬಂದಿದ್ದನ್ನು ನಾನು ಸಹಿಸಿಗಳಕ್ಕಾಗ್ತಯಿಲ್ಲ”
“ನೋಡಿ, ನಾಲ್ಕು ವರ್ಷ ಜೈಲಲ್ಲಿ ಇದ್ದ ನನಗೆ ನಾಲ್ಕು ದಿನ ಇರೋದು ಕಷ್ಟ ಅಲ್ಲ. ನನ್ನ ಹಳೆ ಕೊಠಡಿಯನ್ನ ನಮ್ಮ ಜೈಲರ್ ಮಿತ್ರರು ನನ್ನ ಸ್ವಂತ ಕೊಠಡಿ ತರ ಮಾಡಿದಾರೆ ಗೊತ್ತ”
“ಅದನ್ನ ಪರ್‌ಚೇಸ್ ಮಾಡಿದ್ರೆ ಹೇಗೆ ಸಾರ್”
“ಯಾಕೆ ಹಾಗೇಳ್ತಿರಿ”
“ವಿನಾಕಾರಣ ಒಬ್ಬ ಅಮಾಯಕನ್ನ ಇ.ಡಿ ಡೀಲ್‌ನಲ್ಲಿ ಸಿಕ್ಕಿಸಿ ಜೈಲಿಗಾಕಿದ ನೆನಪಿಗೆ ಮತ್ತು ಸರಕಾರ ಅದೇಳಿದಂಗೆ ಕೇಳೊ ಈ ಪೊಲೀಸರಿಗೆ ಧಿಕ್ಕಾರದ ರೂಪವಾಗಿ ಅದೊಂದು ಸ್ಮಾರಕವಾಗಲಿ, ಅಂತ ಹೇಳಿದೆ ಸಾರ್”
“ನಿಮ್ಮ ಅಲೋಚನೆ ಸರಿ, ಅದ್ರೆ ಜೈಲಿರೋವರಿಗೆ ಅದನ್ನ ಗಾಲಿ ಜನಾರ್ದನ ರೆಡ್ಡಿ ಕೊಠಡಿ ಅಂತ ನಾಮಕರಣ ಮಾಡಿಬಿಡ್ತಾರೆ. ಆದ್ದರಿಂದ ಅದನ್ನ ಕೊಳ್ಳೊÃದು ಬೇಕಾ? ನಾನು ಬೇಗ ಬರ್ತೀನಿ. ನಮ್ಮ ಮನೇಲಿ ಕುಳಿತಿರಿ”
“ಕಷ್ಟ ಆಗುತ್ತೆ ಸಾರ್. ಸಾವಿರಾರು ಕೋಟಿ ಒಡೆಯ ಕೊಡುಗೈ ದಾನಿ ವಿನಾಕಾರಣ ಜೈಲಿನಲ್ಲಿರುವಾಗ ಅಂತವನ ಮನೇಲಿದ್ರೆ ದುಃಖ ತಡಿಯಕ್ಕಾಗಲ್ಲ. ಯಾಕಂದ್ರೆ ಸಾವಿರಾರು ಕೋಟಿಯನ್ನ ಕೈಯಲ್ಲೂ ಮುಟ್ಟದೆ ವ್ಯವಹಾರ ಮಾಡಿದಂತಹ ನೀವು ಇಪ್ಪತ್ತು ಕೋಟಿಗೆ ಕೈಚಾಚಿದ್ರಿ ಅನ್ನದನ್ನ ಇಡೀ ಕರ್ನಾಟಕ ನಂಬುತಾಯಿಲ್ಲ ಸಾರ್. ಅದೊಂದೇ ಸಮಾಧಾನದ ವಿಷಯ ಸಾರ್”
“ದೇವರೂ ಕೂಡ ನಂಬುತಾಯಿಲ್ಲ. ಯಾಕೆ ಅಂದ್ರೆ ಭಗವಂತನೇ ನನಗೆ ಅಷ್ಟೊಂದು ಐಶ್ವರ್ಯ ಕೊಟ್ಟಿದ್ದಾನೆ. ನಾನು ಆತನಿಗೇ ಒಂದು ಕಿರೀಟವನ್ನ ಕೊಟ್ಟೆ ಗೊತ್ತ”
“ಕಿರೀಟ ಈಸಗೊಂಡ ತಿಮ್ಮಪ್ಪ ನಿಮ್ಮನ್ನ ಕಾಪಾಡಬೇಕಿತ್ತು ಸಾರ್”
“ಕಾಪಾಡ್ತನೆ ಸ್ವಲ್ಪ ತಡ ಆಗಬಹುದು. ಒಬ್ಬ ಪೋಲಿಸ್ ಮಗನನ್ನ ಕುಬೇರನನ್ನಾಗಿ ಮಾಡಿದ ಭಗವಂತ ನನ್ನನ್ನ ಯಾವತ್ತೂ ಕೈ ಬಿಟ್ಟಿಲ್ಲ. ನನ್ನನ್ನ ಅಪರಾಧಿ ಅಂತ ಪರಿಗಣಿಸೋದಕ್ಕೆ ಹೋರಾಡ್ತಯಿರೊ ನನ್ನ ವೈರಿಗಳಿಗೆ ಸರಿಯಾದ ಉತ್ತರ ಕೊಡೋದಕ್ಕೆ ನನ್ನ ಮಗಳ ಮದುವೆಯನ್ನು ಸಾವಿರಾರು ಕೋಟಿ ಖರ್ಚು ಮಾಡಿ ಮಾಡಿದೆ. ಅದೂ ನೋಟು ಬ್ಯಾನಾಗಿದ್ದ ಸಂದರ್ಭ. ಆಗೆಲ್ಲ ಭಗವಂತ ನಮಗೆ ಸಹಾಯ ಮಾಡಿದಾನೆ”
“ನೀವು ಬಿ.ಜೆ.ಪಿ.ಗೂ ಭಾರಿ ಸಹಾಯ ಮಾಡಿದ್ರಲ್ಲ ಸಾರ್”
“ಮೊದಲ ಸಮ್ಮಿಶ್ರ ಸರಕಾರ ರಚನೆಯಾದದ್ದೆÃ ನನ್ನಿಂದ. ನಾನು ಕುಮಾರಸ್ವಾಮಿಗೆ ನೂರೈವತ್ತು ಕೋಟಿ ರೂಪಾಯಿ ಕೊಟ್ಟಾಗ ಆತ ಎಲ್ಲ ಶಾಸಕರನ್ನು ರೆಸಾರ್ಟಿಗೆ ತಕ್ಕೊಂಡು ಹೋಗಿ ನೇರ ವಿಧಾನಸೌಧದ ಮುಂದಕ್ಕೆ ತಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ತಗೊಂಡ್ರು”
“ಹೌದ ಸಾರ್”
“ಇದು ನೂರಕ್ಕೆ ಇನ್ನೂರು ಪರಸೆಂಟು ನಿಜ. ಆದ್ರೆ ಅದನ್ನ ಅಲ್ಲಗಳದ್ರು. ಅದಕ್ಕೆ ಅವರಿಗೆ ಬೈಪಾಸ್ ಸರ್ಜರಿ ಆಯ್ತು”
“ಇಸಗೊಂಡ ದುಡ್ಡನ್ನ ಇಲ್ಲ ಅಂದ್ರೆ ಬೈಪಾಸಾಗುತ್ತ ಸಾರ್”
“ಅದು ಭಗವಂತನಿಗೆ ಬಿಟ್ಟ ವಿಚಾರ. ಬೈಪಾಸಾಗಬಹುದು ಅಥವಾ ಮಕ್ಕಳೆ ತೀರೋಗಬಹುದು. ಏನಾದ್ರು ಆಗಬಹುದು”
“ನಿಮ್ಮ ತರ್ಕ ನಿಜ ಸಾರ್ ನೀವೀಗಾಗ್ಲೆ ಹೇಳಿರೊ ತರ ವಿನಾಕಾರಣ ನಿಮ್ಮನ್ನ ಜೈಲಿಗಾಕಿದ ಸಿದ್ದರಾಮಯ್ಯನವರ ಮಗ ತೀರೋದ. ನಿಮ್ಮತ್ರ ಹಣ ತಗೊಂಡು ಇಲ್ಲವೇ ಇಲ್ಲ ಅಂದ ಕುಮಾರಣ್ಣನವರಿಗೆ ಬೈಪಾಸಾಯ್ತು. ಇದೇ ಈಗ ಅ್ಯಂಬಿಡೆಂಟ್ ಕಂಪನಿ ಮಾಲಿಕ ಸಯ್ಯದ್ ಅಹಮದ್ ಹತ್ರ ಇಪ್ಪತ್ತು ಕೋಟಿ ತಗೊಂಡು ಆತನಿಗೂ ನನಗೂ ಯಾವ ವ್ಯವಹಾರವೂ ನಡೆದಿಲ್ಲ, ನನ್ನ ಜೊತೆ ಇರೋ ಆತನ ಫೋಟೊ ಯಾವಾಗಲೊ ಆತನೇ ಬಂದು ನನಗೆ ಗೊತ್ತಿಲ್ಲದಂಗೆ ತಗಿಸಿಕೊಂಡಿದ್ದು ಅಂತ ನೀವು ಏನೇ ಸಬೂಬು ಹೇಳಿದ್ರೂ ಕೂಡ ಜೈಲುಪಾಲಾದ್ರಿ. ಇದನ್ನೆಲ್ಲಾ ನೋಡಿದ್ರೆ ನಿಮ್ಮ ಭಗವಂತನ ಕ್ರಮಗಳು ಒಂಥರಾ ಸರಿಯಾಗಿವೆ ಸಾರ್”
“ನೀವು ಹೇಳಿದ ಮಾತುಗಳು ಅರ್ಥ ಆಗ್ತಾಯಿಲ್ಲ”
“ಹೊರಗಡೆ ಬಂದ್ ಮೇಲೆ ನಿಮ್ಮ ವಕೀಲರ ಪೀಜು ಕೊಡಿ ಸಾರ್”
“ನಮ್ಮದು ಕೊಡುಗೈ ಕುಟುಂಬ”
“ಥೂ..ಥೂ…ಥೂತ್ತೆÃರಿ!!”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...