Homeರಾಜಕೀಯ“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

- Advertisement -
- Advertisement -

ಕೊಡುಗೈ ದಾನಿಯಾದ ಆದುನಿಕ ಕರ್ಣ ನಮ್ಮ ಬಳ್ಳಾರಿ ಗಾಲಿಯನ್ನು ಹಿಡಿದು ಜೈಲಿಗೆ ಹಾಕಿದ ಕ್ಷಣ ನೆನಸಿಕೊಂಡರೆ ಮನಸ್ಸಿಗೆ ವೈರಾಗ್ಯ ಆವರಿಸಿಕೊಂಡು ಮನಸ್ಸು ಆರ್ದ್ರಗೊಳುತ್ತದಲ್ಲಾ. ಇದಕ್ಕೆ ಕಾರಣವನ್ನು ರೆಡ್ಡಿಯನ್ನೆÃ ಕೇಳಿ ತಿಳಿದುಕೊಂಡರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್‌ಟೋನ್: ‘ಏನಿದೀ ಗ್ರಹಚಾರವೋ ಏನಿದೀ ವನವಾಸವೊ ಏನ ಮಾಡಿದನೆಂದು ಈ ಪರಿ ಎನಗೆ ತಂದೆಯೋ ಪಶುಪತೀ…. ಏನಿದೀ…..’ “ಹಲೋ ಯಾರು”
“ಸಾರ್ ನಾನು ಪತ್ರಕರ್ತ ಯಾಹು ಅಂತ”
“ಯಾಹು ಅಂತ್ಲ ಏನ್ಹೆÃಳಿ”
“ತಾವ್ಯಾರು ಸಾರ್”
“ನಾನು ಜೈಲ್ ಸೂಪರ್‌ಡೆಂಟ್ ಏನಾಗಬೇಕು ಕೇಳಿ”
“ಜನಾರ್ದನ ರೆಡ್ಡಿಯವರು ಪತ್ರಕರ್ತರಿಗೆ ಪರಮ ಮಿತ್ರರು ಸಾರ್. ನಮಗೆಲ್ಲ ತುಂಬ ಸಹಾಯ ಮಾಡಿದಾರೆ. ಅವುರ ಜೊತೆ ಒಂದೆರಡು ಮಾತಾಡಬೇಕು. ಅವುಕಾಶ ಮಾಡಿಕೊಡಿ ಸಾರ್”
“ಆಯ್ತು ಮಾತಾಡಿ”
“ಹಲೋ”
“ನಾನು ಸಾರ್ ಯಾಹು”
“ಯಾಹು ಅವರೆ ನೀವು ಫೋನ್ ಮಾಡಿದ್ದಕ್ಕೆ ತುಂಬ ಸಂತೋಷ ಆಯ್ತು. ನನ್ನ ಕೈಯಿಂದ ಲಕ್ಷಲಕ್ಷ ಹಣ ಪಡುಕೊಂಡ ಯಾವ ಪತ್ರಕರ್ತರು ಇದುವರೆಗೂ ನನಗೆ ಫೋನ್ ಮಾಡಿಲ್ಲ. ನೀವು ಮಾಡಿದ್ದಕ್ಕೆ ನನಗೆ ಸಂತೋಷ ಆಗಿದೆ, ನಮ್ಮ ಪಾರಿಜಾತದಲ್ಲಿ ಕುಳಿತಿರಿ ಬಂದುಬಿಡ್ತಿÃನಿ”
“ಏನು ಸಾರ್ ಪಾರಿಜಾತ ಅನ್ನೊÃ ಬಂಗ್ಲೆÃಲಿ ಬಡವನಾದ ನನ್ನಂಥ ಪತ್ರಕರ್ತ ಇರೋದು. ನೀವು ಪರಪ್ಪನ ಅಗ್ರಹಾರದ ಜೈಲಿನ ಕೋಣೆಲಿರೋದು ನನಿಗ್ಯಾಕೊ ದುಖಃ ಆಗ್ತಾಯಿದೆ ಸಾರ್”
“ನೋಡಿ ಕಷ್ಟಗಳು ಮನುಷ್ಯನಿಗಷ್ಟೆÃ ಬರೋದು ಗುಡ್ಡಗಳಿಗಲ್ಲ ಸಹಿಸಿಕೊಳ್ಳಬೇಕು”
“ಗುಡ್ಡಗಳಿಗೂ ಕಷ್ಟ ಬರುತ್ತೆ ಸಾರ್. ಭೂದೇವಿಯ ಸ್ತನಗಳಂಗೆ ಕಾಣುತಿದ್ದ ಸುಂದರವಾದ ಬಳ್ಳಾರಿ ಜೋಡಿ ಗುಡ್ಡಗಳು ನಿರ್ನಾಮ ಆಗಿ ನಮ್ಮ ವೈರಿ ರಾಷ್ಟç ಚೀಣಾದಲ್ಲಿವೆಯಂತೆ. ಆದ್ದರಿಂದ ಕಷ್ಟ ಮನುಷ್ಯರಿಗಷ್ಟೆÃ ಅಲ್ಲ ನಿಸರ್ಗಕ್ಕೂ ಬಂದಿದೆ ಸಾರ್. ನಿಸರ್ಗಪ್ರಿಯನಾದ ತಮಗೆ ಕಷ್ಟ ಬಂದಿದ್ದನ್ನು ನಾನು ಸಹಿಸಿಗಳಕ್ಕಾಗ್ತಯಿಲ್ಲ”
“ನೋಡಿ, ನಾಲ್ಕು ವರ್ಷ ಜೈಲಲ್ಲಿ ಇದ್ದ ನನಗೆ ನಾಲ್ಕು ದಿನ ಇರೋದು ಕಷ್ಟ ಅಲ್ಲ. ನನ್ನ ಹಳೆ ಕೊಠಡಿಯನ್ನ ನಮ್ಮ ಜೈಲರ್ ಮಿತ್ರರು ನನ್ನ ಸ್ವಂತ ಕೊಠಡಿ ತರ ಮಾಡಿದಾರೆ ಗೊತ್ತ”
“ಅದನ್ನ ಪರ್‌ಚೇಸ್ ಮಾಡಿದ್ರೆ ಹೇಗೆ ಸಾರ್”
“ಯಾಕೆ ಹಾಗೇಳ್ತಿರಿ”
“ವಿನಾಕಾರಣ ಒಬ್ಬ ಅಮಾಯಕನ್ನ ಇ.ಡಿ ಡೀಲ್‌ನಲ್ಲಿ ಸಿಕ್ಕಿಸಿ ಜೈಲಿಗಾಕಿದ ನೆನಪಿಗೆ ಮತ್ತು ಸರಕಾರ ಅದೇಳಿದಂಗೆ ಕೇಳೊ ಈ ಪೊಲೀಸರಿಗೆ ಧಿಕ್ಕಾರದ ರೂಪವಾಗಿ ಅದೊಂದು ಸ್ಮಾರಕವಾಗಲಿ, ಅಂತ ಹೇಳಿದೆ ಸಾರ್”
“ನಿಮ್ಮ ಅಲೋಚನೆ ಸರಿ, ಅದ್ರೆ ಜೈಲಿರೋವರಿಗೆ ಅದನ್ನ ಗಾಲಿ ಜನಾರ್ದನ ರೆಡ್ಡಿ ಕೊಠಡಿ ಅಂತ ನಾಮಕರಣ ಮಾಡಿಬಿಡ್ತಾರೆ. ಆದ್ದರಿಂದ ಅದನ್ನ ಕೊಳ್ಳೊÃದು ಬೇಕಾ? ನಾನು ಬೇಗ ಬರ್ತೀನಿ. ನಮ್ಮ ಮನೇಲಿ ಕುಳಿತಿರಿ”
“ಕಷ್ಟ ಆಗುತ್ತೆ ಸಾರ್. ಸಾವಿರಾರು ಕೋಟಿ ಒಡೆಯ ಕೊಡುಗೈ ದಾನಿ ವಿನಾಕಾರಣ ಜೈಲಿನಲ್ಲಿರುವಾಗ ಅಂತವನ ಮನೇಲಿದ್ರೆ ದುಃಖ ತಡಿಯಕ್ಕಾಗಲ್ಲ. ಯಾಕಂದ್ರೆ ಸಾವಿರಾರು ಕೋಟಿಯನ್ನ ಕೈಯಲ್ಲೂ ಮುಟ್ಟದೆ ವ್ಯವಹಾರ ಮಾಡಿದಂತಹ ನೀವು ಇಪ್ಪತ್ತು ಕೋಟಿಗೆ ಕೈಚಾಚಿದ್ರಿ ಅನ್ನದನ್ನ ಇಡೀ ಕರ್ನಾಟಕ ನಂಬುತಾಯಿಲ್ಲ ಸಾರ್. ಅದೊಂದೇ ಸಮಾಧಾನದ ವಿಷಯ ಸಾರ್”
“ದೇವರೂ ಕೂಡ ನಂಬುತಾಯಿಲ್ಲ. ಯಾಕೆ ಅಂದ್ರೆ ಭಗವಂತನೇ ನನಗೆ ಅಷ್ಟೊಂದು ಐಶ್ವರ್ಯ ಕೊಟ್ಟಿದ್ದಾನೆ. ನಾನು ಆತನಿಗೇ ಒಂದು ಕಿರೀಟವನ್ನ ಕೊಟ್ಟೆ ಗೊತ್ತ”
“ಕಿರೀಟ ಈಸಗೊಂಡ ತಿಮ್ಮಪ್ಪ ನಿಮ್ಮನ್ನ ಕಾಪಾಡಬೇಕಿತ್ತು ಸಾರ್”
“ಕಾಪಾಡ್ತನೆ ಸ್ವಲ್ಪ ತಡ ಆಗಬಹುದು. ಒಬ್ಬ ಪೋಲಿಸ್ ಮಗನನ್ನ ಕುಬೇರನನ್ನಾಗಿ ಮಾಡಿದ ಭಗವಂತ ನನ್ನನ್ನ ಯಾವತ್ತೂ ಕೈ ಬಿಟ್ಟಿಲ್ಲ. ನನ್ನನ್ನ ಅಪರಾಧಿ ಅಂತ ಪರಿಗಣಿಸೋದಕ್ಕೆ ಹೋರಾಡ್ತಯಿರೊ ನನ್ನ ವೈರಿಗಳಿಗೆ ಸರಿಯಾದ ಉತ್ತರ ಕೊಡೋದಕ್ಕೆ ನನ್ನ ಮಗಳ ಮದುವೆಯನ್ನು ಸಾವಿರಾರು ಕೋಟಿ ಖರ್ಚು ಮಾಡಿ ಮಾಡಿದೆ. ಅದೂ ನೋಟು ಬ್ಯಾನಾಗಿದ್ದ ಸಂದರ್ಭ. ಆಗೆಲ್ಲ ಭಗವಂತ ನಮಗೆ ಸಹಾಯ ಮಾಡಿದಾನೆ”
“ನೀವು ಬಿ.ಜೆ.ಪಿ.ಗೂ ಭಾರಿ ಸಹಾಯ ಮಾಡಿದ್ರಲ್ಲ ಸಾರ್”
“ಮೊದಲ ಸಮ್ಮಿಶ್ರ ಸರಕಾರ ರಚನೆಯಾದದ್ದೆÃ ನನ್ನಿಂದ. ನಾನು ಕುಮಾರಸ್ವಾಮಿಗೆ ನೂರೈವತ್ತು ಕೋಟಿ ರೂಪಾಯಿ ಕೊಟ್ಟಾಗ ಆತ ಎಲ್ಲ ಶಾಸಕರನ್ನು ರೆಸಾರ್ಟಿಗೆ ತಕ್ಕೊಂಡು ಹೋಗಿ ನೇರ ವಿಧಾನಸೌಧದ ಮುಂದಕ್ಕೆ ತಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ತಗೊಂಡ್ರು”
“ಹೌದ ಸಾರ್”
“ಇದು ನೂರಕ್ಕೆ ಇನ್ನೂರು ಪರಸೆಂಟು ನಿಜ. ಆದ್ರೆ ಅದನ್ನ ಅಲ್ಲಗಳದ್ರು. ಅದಕ್ಕೆ ಅವರಿಗೆ ಬೈಪಾಸ್ ಸರ್ಜರಿ ಆಯ್ತು”
“ಇಸಗೊಂಡ ದುಡ್ಡನ್ನ ಇಲ್ಲ ಅಂದ್ರೆ ಬೈಪಾಸಾಗುತ್ತ ಸಾರ್”
“ಅದು ಭಗವಂತನಿಗೆ ಬಿಟ್ಟ ವಿಚಾರ. ಬೈಪಾಸಾಗಬಹುದು ಅಥವಾ ಮಕ್ಕಳೆ ತೀರೋಗಬಹುದು. ಏನಾದ್ರು ಆಗಬಹುದು”
“ನಿಮ್ಮ ತರ್ಕ ನಿಜ ಸಾರ್ ನೀವೀಗಾಗ್ಲೆ ಹೇಳಿರೊ ತರ ವಿನಾಕಾರಣ ನಿಮ್ಮನ್ನ ಜೈಲಿಗಾಕಿದ ಸಿದ್ದರಾಮಯ್ಯನವರ ಮಗ ತೀರೋದ. ನಿಮ್ಮತ್ರ ಹಣ ತಗೊಂಡು ಇಲ್ಲವೇ ಇಲ್ಲ ಅಂದ ಕುಮಾರಣ್ಣನವರಿಗೆ ಬೈಪಾಸಾಯ್ತು. ಇದೇ ಈಗ ಅ್ಯಂಬಿಡೆಂಟ್ ಕಂಪನಿ ಮಾಲಿಕ ಸಯ್ಯದ್ ಅಹಮದ್ ಹತ್ರ ಇಪ್ಪತ್ತು ಕೋಟಿ ತಗೊಂಡು ಆತನಿಗೂ ನನಗೂ ಯಾವ ವ್ಯವಹಾರವೂ ನಡೆದಿಲ್ಲ, ನನ್ನ ಜೊತೆ ಇರೋ ಆತನ ಫೋಟೊ ಯಾವಾಗಲೊ ಆತನೇ ಬಂದು ನನಗೆ ಗೊತ್ತಿಲ್ಲದಂಗೆ ತಗಿಸಿಕೊಂಡಿದ್ದು ಅಂತ ನೀವು ಏನೇ ಸಬೂಬು ಹೇಳಿದ್ರೂ ಕೂಡ ಜೈಲುಪಾಲಾದ್ರಿ. ಇದನ್ನೆಲ್ಲಾ ನೋಡಿದ್ರೆ ನಿಮ್ಮ ಭಗವಂತನ ಕ್ರಮಗಳು ಒಂಥರಾ ಸರಿಯಾಗಿವೆ ಸಾರ್”
“ನೀವು ಹೇಳಿದ ಮಾತುಗಳು ಅರ್ಥ ಆಗ್ತಾಯಿಲ್ಲ”
“ಹೊರಗಡೆ ಬಂದ್ ಮೇಲೆ ನಿಮ್ಮ ವಕೀಲರ ಪೀಜು ಕೊಡಿ ಸಾರ್”
“ನಮ್ಮದು ಕೊಡುಗೈ ಕುಟುಂಬ”
“ಥೂ..ಥೂ…ಥೂತ್ತೆÃರಿ!!”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...