Homeಕರ್ನಾಟಕಜನಾರ್ಧನ ರೆಡ್ಡಿಯ ಹೊಸ ಪಕ್ಷದಿಂದ ಪತ್ನಿ ಅರುಣಾ ಲಕ್ಷ್ಮಿಗೆ ಬಳ್ಳಾರಿ ಟಿಕೆಟ್ ಘೋಷಣೆ

ಜನಾರ್ಧನ ರೆಡ್ಡಿಯ ಹೊಸ ಪಕ್ಷದಿಂದ ಪತ್ನಿ ಅರುಣಾ ಲಕ್ಷ್ಮಿಗೆ ಬಳ್ಳಾರಿ ಟಿಕೆಟ್ ಘೋಷಣೆ

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಇದೀಗ ಆ ಪಕ್ಷದಿಂದ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಘೋಷಿಸಿದ್ದಾರೆ.

ಈ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರೆಡ್ಡಿ ಸಹೋದರ ಜಿ.ಸೋಮಶೇಖರ ರೆಡ್ಡಿ ಅವರು ಪ್ರಸ್ತುತ ಬಿಜೆಪಿಯಿಂದ ಪ್ರತಿನಿಧಿಸುತ್ತಿದ್ದಾರೆ.

ಈ ಬಗ್ಗೆ ತಮ್ಮ ಪಕ್ಷದ ಯಾತ್ರೆ (ಪ್ರವಾಸ ಕಾರ್ಯಕ್ರಮ) ಸಂದರ್ಭದಲ್ಲಿ ಮಾತನಾಡಿದ ಜಿ ಜನಾರ್ದನ ರೆಡ್ಡಿ, ”ನಾನು ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂಬುದು ನಿಮಗೆ ತಿಳಿದಿದೆ. ನಾನು ಇಂದು ನನ್ನ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸುತ್ತಿದ್ದೇನೆ” ಎಂದು ಹೇಳಿದರು.

ಗಣಿ ಲೂಟಿ ಪ್ರಕರಣಗಳಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿಗೆ ನವೆಂಬರ್ 06ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಬಳ್ಳಾರಿ ಬಿಟ್ಟು ಗಂಗಾವತಿ ಜಿಲ್ಲೆಯಿಂದ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಬಳ್ಳಾರಿಯಿಂದ ಸ್ಪರ್ಧಿಸಲು ತಮ್ಮ ಪತ್ನಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ.

ರೆಡ್ಡಿ ಸಹೋದರರಾದ ಜಿ.ಕರುಣಾಕರ ರೆಡ್ಡಿ ಮತ್ತು ಜಿ ಸೋಮಶೇಖರ್ ರೆಡ್ಡಿ ಅವರು ಹರಪನಹಳ್ಳಿ ಮತ್ತು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು, ಅವರ ಆಪ್ತ ಶ್ರೀರಾಮುಲು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಬಿಜೆಪಿ ಶಾಸಕರು ಮತ್ತು ಸಚಿವರೂ ಆಗಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿ ಟ್ವೀಟ್ ಮಾಡಿದ ಸಚಿವ ಬಿ.ಶ್ರೀರಾಮುಲು!

ಅವರು ಬಿಜೆಪಿಯ ಜೊತೆ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ ಹಾಗಾಗಿ ಅವರಿಗೂ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ರೆಡ್ಡಿ, ಬಿಜೆಪಿಗೆ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ.

ಒಂದು ವೇಳೆ ಬಿಜೆಪಿ ಪಕ್ಷ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಿದರೆ ಅದು ರೆಡ್ಡಿ ಕುಟುಂಬದ ಸದಸ್ಯರ ನಡುವಿನ ಚುನಾವಣಾ ಹೋರಾಟವಾಗಲಿದೆ.

ತಮ್ಮ ಸಹೋದರ ಸೋಮಶೇಖರ ರೆಡ್ಡಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದರೂ ನಿಮ್ಮ ಪತ್ನಿ ಬಳ್ಳಾರಿ ನಗರದಿಂದ ಸ್ಪರ್ಧಿಸುತ್ತಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ”ನಾನು ಬೇರೆ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದರು.

”ನನ್ನ ಘೋಷಣೆಯಲ್ಲಿ ಗೊಂದಲವಿದೆಯೇ? ಎಲ್ಲೆಲ್ಲಿ ನನಗೆ ಗೆಲ್ಲುವ ಸಾಧ್ಯತೆ ಇದೆಯೋ ಅಲ್ಲೆಲ್ಲಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇನೆ, ಯಾರನ್ನೋ ಸೋಲಿಸಲು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಅಗತ್ಯವಿಲ್ಲ, ಮೂರು ತಿಂಗಳಲ್ಲಿ ಕ್ಷೇತ್ರಗಳಲ್ಲಿ ಸಂಚರಿಸುತ್ತೇನೆ. ನನ್ನ ಮಿತಿಯೊಳಗೆ ನಾನು ನನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...