Homeಕರ್ನಾಟಕಜನಾರ್ಧನ ರೆಡ್ಡಿಯ ಹೊಸ ಪಕ್ಷದಿಂದ ಪತ್ನಿ ಅರುಣಾ ಲಕ್ಷ್ಮಿಗೆ ಬಳ್ಳಾರಿ ಟಿಕೆಟ್ ಘೋಷಣೆ

ಜನಾರ್ಧನ ರೆಡ್ಡಿಯ ಹೊಸ ಪಕ್ಷದಿಂದ ಪತ್ನಿ ಅರುಣಾ ಲಕ್ಷ್ಮಿಗೆ ಬಳ್ಳಾರಿ ಟಿಕೆಟ್ ಘೋಷಣೆ

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಇದೀಗ ಆ ಪಕ್ಷದಿಂದ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಘೋಷಿಸಿದ್ದಾರೆ.

ಈ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರೆಡ್ಡಿ ಸಹೋದರ ಜಿ.ಸೋಮಶೇಖರ ರೆಡ್ಡಿ ಅವರು ಪ್ರಸ್ತುತ ಬಿಜೆಪಿಯಿಂದ ಪ್ರತಿನಿಧಿಸುತ್ತಿದ್ದಾರೆ.

ಈ ಬಗ್ಗೆ ತಮ್ಮ ಪಕ್ಷದ ಯಾತ್ರೆ (ಪ್ರವಾಸ ಕಾರ್ಯಕ್ರಮ) ಸಂದರ್ಭದಲ್ಲಿ ಮಾತನಾಡಿದ ಜಿ ಜನಾರ್ದನ ರೆಡ್ಡಿ, ”ನಾನು ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂಬುದು ನಿಮಗೆ ತಿಳಿದಿದೆ. ನಾನು ಇಂದು ನನ್ನ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸುತ್ತಿದ್ದೇನೆ” ಎಂದು ಹೇಳಿದರು.

ಗಣಿ ಲೂಟಿ ಪ್ರಕರಣಗಳಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿಗೆ ನವೆಂಬರ್ 06ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಬಳ್ಳಾರಿ ಬಿಟ್ಟು ಗಂಗಾವತಿ ಜಿಲ್ಲೆಯಿಂದ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಬಳ್ಳಾರಿಯಿಂದ ಸ್ಪರ್ಧಿಸಲು ತಮ್ಮ ಪತ್ನಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ.

ರೆಡ್ಡಿ ಸಹೋದರರಾದ ಜಿ.ಕರುಣಾಕರ ರೆಡ್ಡಿ ಮತ್ತು ಜಿ ಸೋಮಶೇಖರ್ ರೆಡ್ಡಿ ಅವರು ಹರಪನಹಳ್ಳಿ ಮತ್ತು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು, ಅವರ ಆಪ್ತ ಶ್ರೀರಾಮುಲು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಬಿಜೆಪಿ ಶಾಸಕರು ಮತ್ತು ಸಚಿವರೂ ಆಗಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿ ಟ್ವೀಟ್ ಮಾಡಿದ ಸಚಿವ ಬಿ.ಶ್ರೀರಾಮುಲು!

ಅವರು ಬಿಜೆಪಿಯ ಜೊತೆ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ ಹಾಗಾಗಿ ಅವರಿಗೂ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ರೆಡ್ಡಿ, ಬಿಜೆಪಿಗೆ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ.

ಒಂದು ವೇಳೆ ಬಿಜೆಪಿ ಪಕ್ಷ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಿದರೆ ಅದು ರೆಡ್ಡಿ ಕುಟುಂಬದ ಸದಸ್ಯರ ನಡುವಿನ ಚುನಾವಣಾ ಹೋರಾಟವಾಗಲಿದೆ.

ತಮ್ಮ ಸಹೋದರ ಸೋಮಶೇಖರ ರೆಡ್ಡಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದರೂ ನಿಮ್ಮ ಪತ್ನಿ ಬಳ್ಳಾರಿ ನಗರದಿಂದ ಸ್ಪರ್ಧಿಸುತ್ತಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ”ನಾನು ಬೇರೆ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದರು.

”ನನ್ನ ಘೋಷಣೆಯಲ್ಲಿ ಗೊಂದಲವಿದೆಯೇ? ಎಲ್ಲೆಲ್ಲಿ ನನಗೆ ಗೆಲ್ಲುವ ಸಾಧ್ಯತೆ ಇದೆಯೋ ಅಲ್ಲೆಲ್ಲಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇನೆ, ಯಾರನ್ನೋ ಸೋಲಿಸಲು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಅಗತ್ಯವಿಲ್ಲ, ಮೂರು ತಿಂಗಳಲ್ಲಿ ಕ್ಷೇತ್ರಗಳಲ್ಲಿ ಸಂಚರಿಸುತ್ತೇನೆ. ನನ್ನ ಮಿತಿಯೊಳಗೆ ನಾನು ನನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...