Homeಮುಖಪುಟಹೊಸ ಪಕ್ಷ ಸ್ಥಾಪಿಸಿದ ಜನಾರ್ದನ ರೆಡ್ಡಿ: ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಣೆ

ಹೊಸ ಪಕ್ಷ ಸ್ಥಾಪಿಸಿದ ಜನಾರ್ದನ ರೆಡ್ಡಿ: ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಣೆ

- Advertisement -
- Advertisement -

ನಾನು ಕರ್ನಾಟಕ ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷದವರೆ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದಿದ್ದ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಇಂದು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷದ ಘೋಷಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿರುವ ತಮ್ಮ ನಿವಾಸ ಪಾರಿಜಾತದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ನಾನು ಯಾವುದೇ ಹೊಸ ಕೆಲಸ ಆರಂಭಿಸಿದರೂ ಸೋತಿಲ್ಲ. ಗೋಲಿ ಆಟದಲ್ಲೇ ನಾನು ಸೋಲು ಒಪ್ಪಿಕೊಂಡಿಲ್ಲ. ಈಗ ಇಲ್ಲೂ ಸೋಲು ಎನ್ನುವುದು ಇಲ್ಲ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಶ್ರೀರಾಮುಲು ಅವರನ್ನು ಮಗನಿಗಿಂತ ಹೆಚ್ಚಾಗಿ ನೋಡಿಕೊಂಡು ಬಂದಿದ್ದೇವೆ. ರಾಮುಲು ಬಿಜೆಪಿಯಲ್ಲಿ ಉನ್ನತ ಸ್ಥಾನದಲ್ಲಿ ಇದ್ದಾರೆ. ಪಕ್ಷ ಬಿಟ್ಟು ಬನ್ನಿ ಎಂದು ನನ್ನ ಸ್ನೇಹವನ್ನು ದುರುಪಯೋಗ ಮಾಡಿಕೊಳ್ಳಲ್ಲ” ಎಂದಿದ್ದಾರೆ.

“ಅವರು ನಮ್ಮ ಜತೆಗೆ ಬರಬೇಕು ಎಂದು ಹೇಳಲ್ಲ. ಆತ ನನ್ನ ಉತ್ತಮ ಸ್ನೇಹಿತ. ಚಿಕ್ಕಂದಿನಿಂದಲೂ ನಾವು ಜೊತೆಯಾಗಿ ಬೆಳೆದಿದ್ದೇವೆ. ಈಗಲೂ ಹಾಗೆಯೇ ಇದ್ದೇವೆ. ರಾಜಕೀಯ ಬೇರೆ, ಸ್ನೇಹವೇ ಬೇರೆ. ರಾಮುಲು ಹಿಂದುಳಿದ ಜನಾಂಗದ ಒಳ್ಳೆಯ ಲೀಡರ್. ಎಷ್ಟೇ ಕಷ್ಟಗಳಿದ್ದರೂ ಅವರು ರಾಜಕೀಯವಾಗಿ ಸಾಧನೆ ಮಾಡಿದ್ದಾರೆ” ಎಂದು ಜನಾರ್ದನ ರೆಡ್ಡಿ ಹೇಳಿದರು.

“ರಾಜ್ಯ ಸರ್ಕಾರ ಹಿಂದೆಯೂ ನನ್ನನ್ನು ಟಾರ್ಗೆಟ್ ಮಾಡಿತ್ತು. ಈಗಲೂ ನನ್ನನು ಗುರಿಯಾಗಿಸಿಕೊಂಡಿದೆ. ಆದರೆ ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಏನು ಯೋಚನೆ ಮಾಡ್ತೀನಿ ಅದನ್ನೇ ಹೇಳ್ತೀನಿ, ಏನು ಹೇಳ್ತೀನಿ ಅದನ್ನೇ ಮಾಡ್ತೀನಿ. ರಾಜ್ಯದ 30 ಜಿಲ್ಲೆಗಳ ಅಭಿವೃದ್ಧಿ ನನ್ನ ಗುರಿ” ಎಂದಿದ್ದಾರೆ.

ಗಣಿ ಲೂಟಿ ಪ್ರಕರಣಗಳಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿಯವರು ನವೆಂಬರ್ 06ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಅವರು ಬಳ್ಳಾರಿ ಬಿಟ್ಟು ಗಂಗಾವತಿ ಜಿಲ್ಲೆಯಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ.

ಗಂಗಾವತಿ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಯಿಂದಲೂ ಬಿಜೆಪಿಯ ಶಾಸಕ ಪರಣ್ಣ ಮುನಾವಳ್ಳಿ ಮತ್ತು ಹಿಂದೆ ಜೆಡಿಎಸ್‌ನಲ್ಲಿದ್ದು ಸದ್ಯ ಕಾಂಗ್ರೆಸ್‌ನಲ್ಲಿರುವ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ನಡುವೆ ನೇರ ಹಣಾಹಣಿ ನಡೆದಿದೆ. ಈ ಬಾರಿ ಜನಾರ್ದನ ರೆಡ್ಡಿಯವರು ಸ್ಪರ್ಧಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ಇದನ್ನೂ ಓದಿ; ಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...