Homeಮುಖಪುಟಹೊಸ ಪಕ್ಷ ಸ್ಥಾಪಿಸಿದ ಜನಾರ್ದನ ರೆಡ್ಡಿ: ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಣೆ

ಹೊಸ ಪಕ್ಷ ಸ್ಥಾಪಿಸಿದ ಜನಾರ್ದನ ರೆಡ್ಡಿ: ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಣೆ

- Advertisement -
- Advertisement -

ನಾನು ಕರ್ನಾಟಕ ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷದವರೆ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದಿದ್ದ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಇಂದು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷದ ಘೋಷಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿರುವ ತಮ್ಮ ನಿವಾಸ ಪಾರಿಜಾತದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ನಾನು ಯಾವುದೇ ಹೊಸ ಕೆಲಸ ಆರಂಭಿಸಿದರೂ ಸೋತಿಲ್ಲ. ಗೋಲಿ ಆಟದಲ್ಲೇ ನಾನು ಸೋಲು ಒಪ್ಪಿಕೊಂಡಿಲ್ಲ. ಈಗ ಇಲ್ಲೂ ಸೋಲು ಎನ್ನುವುದು ಇಲ್ಲ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಶ್ರೀರಾಮುಲು ಅವರನ್ನು ಮಗನಿಗಿಂತ ಹೆಚ್ಚಾಗಿ ನೋಡಿಕೊಂಡು ಬಂದಿದ್ದೇವೆ. ರಾಮುಲು ಬಿಜೆಪಿಯಲ್ಲಿ ಉನ್ನತ ಸ್ಥಾನದಲ್ಲಿ ಇದ್ದಾರೆ. ಪಕ್ಷ ಬಿಟ್ಟು ಬನ್ನಿ ಎಂದು ನನ್ನ ಸ್ನೇಹವನ್ನು ದುರುಪಯೋಗ ಮಾಡಿಕೊಳ್ಳಲ್ಲ” ಎಂದಿದ್ದಾರೆ.

“ಅವರು ನಮ್ಮ ಜತೆಗೆ ಬರಬೇಕು ಎಂದು ಹೇಳಲ್ಲ. ಆತ ನನ್ನ ಉತ್ತಮ ಸ್ನೇಹಿತ. ಚಿಕ್ಕಂದಿನಿಂದಲೂ ನಾವು ಜೊತೆಯಾಗಿ ಬೆಳೆದಿದ್ದೇವೆ. ಈಗಲೂ ಹಾಗೆಯೇ ಇದ್ದೇವೆ. ರಾಜಕೀಯ ಬೇರೆ, ಸ್ನೇಹವೇ ಬೇರೆ. ರಾಮುಲು ಹಿಂದುಳಿದ ಜನಾಂಗದ ಒಳ್ಳೆಯ ಲೀಡರ್. ಎಷ್ಟೇ ಕಷ್ಟಗಳಿದ್ದರೂ ಅವರು ರಾಜಕೀಯವಾಗಿ ಸಾಧನೆ ಮಾಡಿದ್ದಾರೆ” ಎಂದು ಜನಾರ್ದನ ರೆಡ್ಡಿ ಹೇಳಿದರು.

“ರಾಜ್ಯ ಸರ್ಕಾರ ಹಿಂದೆಯೂ ನನ್ನನ್ನು ಟಾರ್ಗೆಟ್ ಮಾಡಿತ್ತು. ಈಗಲೂ ನನ್ನನು ಗುರಿಯಾಗಿಸಿಕೊಂಡಿದೆ. ಆದರೆ ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಏನು ಯೋಚನೆ ಮಾಡ್ತೀನಿ ಅದನ್ನೇ ಹೇಳ್ತೀನಿ, ಏನು ಹೇಳ್ತೀನಿ ಅದನ್ನೇ ಮಾಡ್ತೀನಿ. ರಾಜ್ಯದ 30 ಜಿಲ್ಲೆಗಳ ಅಭಿವೃದ್ಧಿ ನನ್ನ ಗುರಿ” ಎಂದಿದ್ದಾರೆ.

ಗಣಿ ಲೂಟಿ ಪ್ರಕರಣಗಳಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿಯವರು ನವೆಂಬರ್ 06ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಅವರು ಬಳ್ಳಾರಿ ಬಿಟ್ಟು ಗಂಗಾವತಿ ಜಿಲ್ಲೆಯಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ.

ಗಂಗಾವತಿ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಯಿಂದಲೂ ಬಿಜೆಪಿಯ ಶಾಸಕ ಪರಣ್ಣ ಮುನಾವಳ್ಳಿ ಮತ್ತು ಹಿಂದೆ ಜೆಡಿಎಸ್‌ನಲ್ಲಿದ್ದು ಸದ್ಯ ಕಾಂಗ್ರೆಸ್‌ನಲ್ಲಿರುವ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ನಡುವೆ ನೇರ ಹಣಾಹಣಿ ನಡೆದಿದೆ. ಈ ಬಾರಿ ಜನಾರ್ದನ ರೆಡ್ಡಿಯವರು ಸ್ಪರ್ಧಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ಇದನ್ನೂ ಓದಿ; ಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...