Homeಸಾಮಾಜಿಕ20 ಕೋಟಿ ಆ್ಯಂಬಿಯೆಂಟ್ ಎಂಜಲಿಗೆ ಜೊಲ್ಲು ಸುರಿಸಿದ ಬಿಲಿಯನೇರ್ ಜನಾರೆಡ್ಡಿ!!

20 ಕೋಟಿ ಆ್ಯಂಬಿಯೆಂಟ್ ಎಂಜಲಿಗೆ ಜೊಲ್ಲು ಸುರಿಸಿದ ಬಿಲಿಯನೇರ್ ಜನಾರೆಡ್ಡಿ!!

- Advertisement -
- Advertisement -

ಆ್ಯಂಬಿಡೆಂಟ್ ಪ್ರಕರಣದಲ್ಲಿ ಸಿಸಿಬಿಗೆ ಶರಣಾಗುವ ಮೊದಲು ಸತ್ಯ ಹರಿಶ್ಚಂದ್ರನಂತೆ ವ್ಯಾಟ್ಸಾಪ್ ಸಂದೇಶ ಹರಿಬಿಟ್ಟ ಗಾಲಿ ಜನಾರ್ಧನ ರೆಡ್ಡಿ, ‘ನನ್ನದು ಕೊಡುವ ಕೈಯೇ ಹೊರತು ಬೇಡುವ ಕೈಯಲ್ಲ.. ನಾನು ತಲೆ ಮರೆಸಿಕೊಂಡಿದ್ದೆÃನೆಂಬ ಮಾಧ್ಯಮಗಳ ವರದಿ ನೋಡಿ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ’ ಎಂದು ಸರ್ಟಿಫಿಕೇಟ್ ಕೊಟ್ಟುಕೊಳ್ಳುತ್ತ, ಮಾಧ್ಯಮಗಳನ್ನೆÃ ಗೇಲಿ ಮಾಡಿದರು. ಆದರೆ ಅಂದು ನಗುತ್ತಲೇ ಬಿಕ್ಕಿಬಿಕ್ಕಿ ಅತ್ತಿದ್ದು ಈತನಿಂದ ಅವ್ಯಾಹತವಾಗಿ ಲೂಟಿಗೊಳಗಾಗಿ, ಅವಶೇಷಗಳಂತಾಗಿರುವ ಬಳ್ಳಾರಿ, ಆಂಧ್ರದ ಕಬ್ಬಿಣದ ಅದಿರು ಪ್ರದೇಶಗಳು.
ಸದ್ಯ ಜೈಲು ಪಾಲಾಗಿರುವ ರೆಡ್ಡಿ ಬರೀ ನೈಸರ್ಗಿಕ ಸಂಪತ್ತಿನ ದರೋಡೆಕೋರನಷ್ಟೆÃ ಅಲ್ಲ, ಡೀಲು ಕುದುರಿಸಿ ಕೊಟ್ಟು ಅಷ್ಟಿಷ್ಟು ಗೆಬರಿಕೊಳ್ಳಬಲ್ಲ ದಲ್ಲಾಳಿಯೂ ಹೌದು ಎಂಬ ಸತ್ಯವನ್ನು ಈ ಪ್ರಕರಣವು ತೆರೆದಿಟ್ಟಿದೆ.
ಏನಿದು ಆ್ಯಂಬಿಡೆಂಟ್ ಅಧ್ವಾನ?
ಆ್ಯಂಬಿಡೆಂಟ್ ಎಂಬ ಪಾಶ್ ಹೆಸರಿನ ಬೆಂಗಳೂರು ಕಂಪನಿ ಸಾವಿರಾರು ಕೋಟಿ ಲೂಟಿ ಮಾಡಿದ್ದೆÃ ಶ್ರಮ, ಬೆವರು ಇಲ್ಲದೇ ದಿಢೀರ್ ಶ್ರಿÃಮಂತರಾಗುವ ಅತಿಯಾಸೆಯ ಮೇಲ್‌ಮಧ್ಯಮ, ಮಧ್ಯಮವರ್ಗಗಳ ಮನಸ್ಥಿತಿಯನ್ನು ಬಳಸಿಕೊಂಡು. ‘ನಮ್ಮಲ್ಲಿ ಹಣ ಹೂಡಿ, ಮರ‍್ನಾಲ್ಕು ತಿಂಗಳಲ್ಲಿ ಅದನ್ನು ಡಬಲ್ ಮಾಡ್ತಿÃವಿ’ ಎಂಬ ಟ್ಯಾಗ್‌ಲೈನ್ ಅನ್ನು ಅತಿಯಾಶೆಯ ಅಮಾಯಕರ ತಲೆಗೆ ತುಂಬುವಲ್ಲಿ ಆ್ಯಂಬಿಡೆಂಟ್ ಮಾಲೀಕ ಫರೀದ್ ಮತ್ತು ಆತನ ಮಗ, ಕಂಪನಿಯ ನಿರ್ದೇಶಕ ಯಶಸ್ವಿಯಾದರು. ಹೇಗೆ ಎಂದು ಕೇಳಿದವರಿಗೆ ‘ಸರ್ವರಿಗೂ ಸಂಪತ್ತಿನ ಹಂಚಿಕೆ’ ಎಂಬ ಸಾಮಾಜಿಕ ನ್ಯಾಯದ ಬೋಧನೆ ಮಾಡಿದ ‘ನವ ಸಮಾಜವಾದಿ’ ಫರೀದ್, ‘ನೀವು ಕೊಟ್ಟ ಹಣವನ್ನು ಡೈಮಂಡ್ ಬ್ಯುಸಿನೆಸ್ ಮತ್ತು ರಿಯಲ್ ಎಸ್ಟೆÃಟ್‌ನಲ್ಲಿ ಹೂಡಿ, ಭಾರಿ ಲಾಭಗಳಿಸಿ ನಿಮಗೆ ಕೊಡ್ತಿÃವಿ’ ಎಂದು ರೀಲುಬಿಟ್ಟ.
ಈ ‘ಬಂಗಾರದ ಮನುಷ್ಯ’ನ ಮಾತು ನಂಬಿದ ಸಿಲಿಕಾನ್ ಸಿಟಿಯ ಸಾವಿರಾರು ಕುಟುಂಬಗಳು ದೊಡ್ಡ ಆ್ಯಂಬಿಷೆನ್ ಇಟ್ಟುಕೊಂಡು ಆ್ಯಂಬಿಡೆಂಟ್‌ನಲ್ಲಿ ಪ್ರಾಮಾಣಿಕವಾಗಿ ದುಡ್ಡನ್ನು ಸುರಿಯತೊಡಗಿದವು.
ಆದರೆ ತಿಂಗಳುಗಳು ಕಳೆದ ಮೇಲೆ ಫರೀದ್‌ನ ಬಳಿ ಹೋಗಿ ತಮ್ಮ ಕನಸಿನ ಮೊತ್ತ ಕೇಳಿದ ಗ್ರಾಹಕರಿಗೆ ಫರೀದ್ ಏನೇನೋ ಸಬೂಬು ಹೇಳಿ ಕಾಯಲು ಹೇಳತೊಡಗಿದ. ಬರುಬರುತ್ತ ಸತ್ಯದ ವಾಸನೆ ಹಿಡಿದ ಗ್ರಾಹಕರಿಗೆ ದುಸ್ವಪ್ನಗಳು ಕಾಡತೊಡಗಿದವು. ತಾವೆಲ್ಲ ಯಾಮಾರಿದೆವು ಎಂದು ಅರಿತ ‘ಸಮಾನಮನಸ್ಕ’ ಗ್ರಾಹಕರಿಗೆ ಪುಣ್ಯಕ್ಕೆ ಆಗಲಾದರೂ ಕಾನೂನು, ಪೊಲೀಸ್ ವ್ಯವಸ್ಥೆಗಳು ನೆನಪಾದವು. ಥಟ್ಟಂತ ಜಾತಿ-ಧರ್ಮಗಳ ಭೇದಭಾವ ಮರೆತು ಒಟ್ಟಾದ ಈ ಗ್ರಾಹಕರು ಸೀದಾ ಬೆಂಗಳೂರಿನ ಡಿಜೆ ಹಳ್ಳಿಯ ಪೊಲೀಸರ ಬಳಿ ಹೋಗಿ ಬದುಕಿಸಲು ಮನವಿ ಮಾಡಿ, ದೂರು ದಾಖಲಿಸಿದರು.
ಸಿಸಿಬಿ ಎಂಟ್ರಿ
ಪ್ರಕರಣ ಸಿಸಿಬಿ ಕೈಗೆ ಬಂತು. ಫರೀದ್ ಮತ್ತಾತನ ಅಕೌಂಟುಗಳನ್ನು ಪರಿಶೀಲನೆ ಮಾಡತೊಡಗಿದ ಸಿಸಿಬಿಗೆ ಭಯಂಕರ ವಂಚನೆಯ ಜಾಲವೊಂದು ತೆರೆದುಕೊಳ್ಳತೊಡಗಿತು. 15 ಸಾವಿರ ಜನರ 900 ಕೋಟಿ ಈ ವಂಚಕರ ಅಕೌಂಟ್‌ನಲ್ಲಿ ಕಂಡುಬಂತು! ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಬಿಕಾ ಆಭರಣ ಮಳಿಗೆಯ ಮಾಲೀಕ ರಮೇಶ್ ಎಂಬಾತನ ಖಾತೆಗೆ ಸುಮ್ಮಸುಮ್ಮನೇ 20 ಕೋಟಿ ವರ್ಗಾಯಿಸಿದ್ದ ಫರೀದ್. ಇದರ ಜಾಡು ಹಿಡಿದು ಹೋದರೆ, ಜನಾರ್ಧನರೆಡ್ಡಿ, ಆತನ ಭಂಟ ಅಲಿಖಾನ್, ಫರೀದನ ಗೆಳೆಯ ಬೃಜೇಶ ರೆಡ್ಡಿಯ ಹೆಸರುಗಳು ಪತ್ತೆಯಾದವು.. ‘ಇಡಿ ಅಧಿಕಾರಿಗಳು ಗೊತ್ತು. ತನಿಖೆಯಲ್ಲಿ ನಿನಗೆ ಸಹಾಯ ನೀಡುವುದಾಗಿ ಹೇಳಿ ಜನಾರ್ಧನ ರೆಡ್ಡಿ 20 ಕೋಟಿ ಕೇಳಿದ್ದರು’ ಎಂದ ಫರೀದ್ ..
ಬೃಜೇಶÀ ರೆಡ್ಡಿಯೇ ಕೊಂಡಿ!
ಗ್ರಾಹಕರ ದೂರು ದಾಖಲಾಗುವ ಮೊದಲೇ ಇ.ಡಿ ಫರೀದನ ಹಿಂದೆ ಬಿದ್ದಿತ್ತು. ಆಗ ಬೃಜೇಶ ರೆಡ್ಡಿ ಫರೀದ್‌ಗೆ ನೆರವು ನೀಡುವುದಾಗಿ ಹೇಳಿ ಜನಾರೆಡ್ಡಿ, ಅಲಿಖಾನರನ್ನು ಪರಿಚಯಿಸಿದ್ದ. ಆಗಲೇ ರೆಡ್ಡಿ 20 ಕೋಟಿ ಡೀಲ್‌ನ ಮಾತಾಡಿದ್ದು. ಈ ಡೀಲ್ ಮಾರ್ಚ್ನಲ್ಲಿ ತಾಜ್‌ವೆಸ್ಟ್ ಎಂಡ್ ಹೊಟೇಲಿನಲ್ಲಿ ನಡೆದಿತ್ತು. ಮೊದಲು ನಗದು ಕೇಳಿದ್ದ ಜನಾರೆಡ್ಡಿ, ನಂತರ ಆಭರಣಂಗಡಿಯ ಮಾಲೀಕರನ್ನು ಕರೆತಂದ. ಅಲಿಖಾನ್ ಸೂಚನೆಯಂತೆ ಫರೀದ್ ಬೆಂಗಳೂರಿನ ಅಂಬಿಕಾ ಜ್ಯುವೆಲರಿಯ ರಮೇಶ್‌ಕೊಠಾರಿಯ ಖಾತೆಗೆ ಹಾಕಿದ್ದ. ಈ ಹಣ ಇಟ್ಟುಕೊಂಡ ಕೊಠಾರಿ ಅದಕ್ಕೆ ಪ್ರತಿಯಾಗಿ 57 ಕೆಜಿ ಚಿನ್ನದ ಗಟ್ಟಿಗಳನ್ನು ಬಳ್ಳಾರಿ ಆಭರಣ ವ್ಯಾಪಾರಿ ರಮೇಶನಿಗೆ ನೀಡಿದ್ದ. ಈ ಗಟ್ಟಿಗಳನ್ನು ಅಲಿಖಾನ್ ಜನಾಗೆ ತಲುಪಿಸಿದ್ದ!
ಗಣಿಗಳ್ಳರು, ಇಂಟರ್ ನ್ಯಾಷನಲ್ ಆರ್ಥಿಕ ವಂಚಕ, ಆಭರಣ ವ್ಯಾಪಾರಿಗಳು…. ದಿಗ್ಭçಮೆ ಹುಟ್ಟಿಸುವ ವಂಚನೆಯ ಜಾಲ! ಬಾಲಿವುಡ್, ಸ್ಯಾಂಡಲ್‌ವುಡ್‌ನಲ್ಲಿ ಅಪರಾಧ ಲೋಕದ ಚಿತ್ರಕತೆಗಳನ್ನು ಬರೆಯುವವರು ಅಲಿಖಾನ್, ರೆಡ್ಡಿ, ಫರೀದ್‌ಗಳನ್ನು ಭೇಟಿಯಾದರೆ ಕಥಾಗುಚ್ಛಗಳೇ ಸಿಗಬಹುದು.
ಅಂದಂತೆ ಈ ಅಲಿಖಾನ್ ಜನಾರೆಡ್ಡಿಯ ಗಣಿಯ ಲೂಟಿಯ ಸ್ಕೆಚ್‌ಗಳನ್ನು ಅಪಾರ ’ಶ್ರಮ’ದಿಂದ ಹೆಣೆದ ಮಾಸ್ಟರ್ ಮೈಂಡ್. ಇಂಜಿನಿಯರಿಂಗ್ ಓದುವಾಗ ಇವನ ಟ್ಯಾಲೆಂಟ್ ನೋಡಿ ಪ್ರಾಧ್ಯಾಪಕರೇ ಅಚ್ಚರಿ ಪಡುತ್ತಿದ್ದರು. ಬಿಇ ನಂತರ ಈ ಹುಡುಗ ಐಟಿ ಅಥವಾ ಫೈನಾನ್ಸಿಯಲ್ ಸ್ಟಾರ್ಟ್ಅಪ್ ತೆರೆಯಬಲ್ಲ ಪ್ರತಿಭೆ ಹೊಂದಿದ್ದಾನೆ ಎಂದು ಗುಣಗಾನ ಮಾಡುತ್ತಿದ್ರಂತೆ. ಆದರೆ ಬಿಇ ಜುಜುಬಿ ಅಂದ ಅಲಿಖಾನ್ ಹೇಗೋ ರೆಡ್ಡಿಯ ಸಂಪರ್ಕಕ್ಕೆ ಬಂದ. ತನ್ನ ಜಾಣ್ಮೆತನವನ್ನು ವಂಚನೆಗೆ ಬಳಸಿ ರೆಡ್ಡಿಗಳಿಗೆ ಆಪ್ತನಾದ. ಬಳ್ಳಾರಿಯ ಸಾಮಾನ್ಯ ಅಕ್ಕಸಾಲಿಗರು, ಟೇಲರ್‌ಗಳ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು, ಅವುಗಳಲ್ಲಿ ಗಣಿಲೂಟಿ ದುಡ್ಡನ್ನು ಜಮಾ ಮಾಡಿದ್ದ, ಈ ಖಾತೆಗಳ ಜಾಡು ಹಿಡಿದು ಹೋದ ಅರಣ್ಯಾಧಿಕಾರಿಗಳು, ಲೋಕಾಯುಕ್ತ ಸಂತೋಷ ಹೆಗಡೆಯವರು ಬೆಚ್ಚಿ ಬಿದ್ದಿದ್ದರು. ಪಾಪ, ಈ ಅಮಾಯಕ ಬಡ ಅಕ್ಕಸಾಲಿಗರು, ಟೇಲರ್‌ಗಳಿಗೆ ಅಲಿಖಾನ್ ಗೊತ್ತೂ ಇರಲಿಲ್ಲ, ತಮ್ಮ ಹೆಸರಲ್ಲಿ ಖಾತೆಗಳಿರುವುದೂ ಗೊತ್ತಿರಲಿಲ್ಲ! ಬ್ಯಾಂಕ್ ಅಧಿಕಾರಿಗಳ ನೆರವಿನಿಂದ ಫೋರ್ಜರಿ ಮಾಡಿ ಖಾತೆಗಳನ್ನು ಸೃಷ್ಟಿಮಾಡಿ, ಸಾವಿರಾರು ಕೋಟಿಗಳ ವ್ಯವಹಾರ ನಡೆಸಿದ ‘ಪ್ರತಿಭಾವಂತ’ ಈ ಅಲಿಖಾನ್. ಬೇಲಿಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸ್ಟಾಕ್ ಮಾಡಿದ್ದ ಅಕ್ರಮ ಅದಿರನ್ನೆÃ ಚೀನಾಕ್ಕೆ ರಫ್ತು ಮಾಡಿದ ಭೂಪ ಈ ಅಲಿಖಾನ್!
ಫರೀದ್ ನಂಬಿ ವಂಚನೆಗೊಳಗಾದ 15 ಸಾವಿರ ಗ್ರಾಹಕರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಗೃಹ ಸಚಿವ ಪರಮೇಶ್ವರ್ ಅವರದ್ದು. ಅವರು ಪೊಲೀಸ್ ಅಧಿಕಾರಿಗಳ ಕರ್ತವ್ಯದಲ್ಲಿ ಹಸ್ತಕ್ಷೆÃಪ ಮಾಡದಿದ್ದರೆ ಸಾಕಷ್ಟೆÃ.
‘ಆ್ಯಂಬಿಡೆಂಟ್ ಪ್ರಕರಣದಲ್ಲಿ ನಮ್ಮದೇನೂ ಪಾತ್ರವಿಲ್ಲ. ಸುಮ್ಮಸುಮ್ಮನೇ ಕೆಲವು ಕಿಡಿಗೇಡಿಗಳು ನಮ್ಮ ಪಬ್ಲಿಕ್ ಚಾನೆಲ್, ಮುಖ್ಯಸ್ಥ ಎಚ್‌ಆರ್ ರಂಗನಾಥ, ಸಿಬ್ಬಂದಿ ಅಜ್ಮತ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಫೇಕ್‌ನ್ಯೂಸ್ ಹರಡುತ್ತಿದ್ದಾರೆ. ಇಂತಹವರನ್ನು ಪತ್ತೆಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳುತ್ತೆÃವೆ’ ಎಂದು ಪಬ್ಲಿಕ್ ಟಿವಿ ಸ್ಪಷ್ಟನೆ ನೀಡಿದ ಕೂಡಲೇ ಸೋಷಿಯಲ್‌ಮೀಡಿಯಾ ಬಳಸದ ‘ಅಸಂಖ್ಯ’ ರಂಗಣ್ಣಾಭಿಮಾನಿಗಳು ಗಲಿಬಿಲಿಗೆ ಬಿದ್ದಿದ್ದಾರೆ.
‘ರಂಗಣ್ಣರ ಮೇಲೆ ಕಿಡಿಗೇಡಿಗಳು ಮಾಡಿರುವ ಸುಳ್ಳು ಆರೋಪವೇನು’ ಎಂದು ಈ ವೀಕ್ಷಕ ಅಭಿಮಾನಿಗಳು ಗೊಂದಲಕ್ಕೆ ಬಿದ್ದಿದ್ದಾರೆ. ಇದೆಲ್ಲ ಗೊತ್ತೆÃ ಇರದ ಜನಸಾಮಾನ್ಯರಿಗೆ ‘ಏನೋ ಲಫಡಾ ನಡೆದಿದೆಯಾ’ ಎಂಬ ಸಂಶಯ ಬರುವಂತೆ ಮಾಡಿ, ಸುಮ್ಮನೆ ಇರುವೆ ಬಿಟ್ಟುಕೊಂಡಿತಲ್ಲ ನಮ್ಮ ಚಾನೆಲ್ ಎಂದು ಹಲವು ಜಿಲ್ಲಾ ವರದಿಗಾರರು ಪಬ್ಲಿಕ್ಕಾಗಿಯೇ ನಗಾಡುತ್ತಿದ್ದರಂತೆ.
ಗೊಂದಲದಲ್ಲಿರುವ ಪಬ್ಲಿಕ್‌ನ ವೀಕ್ಷಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ತಿಳಿಸುವುದು ನಮ್ಮ ವೃತ್ತಿಧರ್ಮ ಎಂದು ಬಗೆದು ಅದನ್ನು ಇಲ್ಲಿ ನಿರೂಪಿಸುವ ಯತ್ನ ಮಾಡಿದ್ದೆÃವೆ. (ಇಲ್ಲಿ ಪ್ರಿಂಟ್ ಮೀಡಿಯಾ ಓದುಗರಿಗೆ ಬೋರ್ ಆಗದಿರಲೆಂದು ನಿರೂಪಣೆಯಲ್ಲಿ ರೋಚಕತೆ ಇದ್ದರೆ ಅದನ್ನು ಟಿವಿ ಮೀಡಿಯಾ ಪ್ರಭಾವವೆಂದು ಬಗೆದು ಕ್ಷಮಿಸಬೇಕು)
“ಟೈಮ್ಸ್ ಆಫ್ ಇಂಡಿಯಾ, ಬೆಂಗಳೂರ್ ಮಿರರ್‌ನಲ್ಲಿ ಕ್ರೆöÊಮ್ ಬೀಟ್‌ಗಳಲ್ಲಿ ಕೆಲಸ ಮಾಡುತ್ತಾ ಅಪರಾಧ ಲೋಕದ ಒಳಸುಳಿವುಗಳನ್ನು ಪತ್ತೆ ಹಚ್ಚುತ್ತಾ, ತಾನೇ ಕ್ರಿಮಿನಲ್ ಆಗಿಬಿಟ್ಟರೆಂಬ ವದಂತಿ (ಇದು ಈ ‘ಫೇಕ್‌ನ್ಯೂಸ್’ ಹೊರಬಂದ ಮೇಲೆ ಹುಟ್ಟಿಕೊಂಡ ಕಥೆಯೂ ಇರಬಹುದು!) ಅಜ್ಮತ್ ಎಂಬ ಪತ್ರಕರ್ತನ ಕುರಿತು ಇದೆ. ಈತನ ಬಗ್ಗೆ ಬೆಂಗಳೂರಿನ ರೌಡಿಗಳು, ದಂಧೆಕೋರರ ಬಳಿ ರಂಗುರಂಗಿನ ಕತೆಗಳಿವೆಯಂತೆ. ಕೆಲವು ಪೊಲೀಸ್ ಅಧಿಕಾರಿಗಳಿಗೂ ಈತನ ‘ಪವಾಡ’ಗಳು ಗೊತ್ತಂತೆ. ಆದರೆ ಇಂತಹ ಹಿನ್ನೆಲೆಯ ಅಜ್ಮತ್ ಹಿರಿಯ ಪತ್ರಕರ್ತ ರಂಗನಾಥರ ಪಬ್ಲಿಕ್ ಟಿವಿಯಲ್ಲಿದ್ದಾರೆ ಈಗ! ಪಾಪ, ರಂಗನಾಥರಿಗೆ ಈತನ ಹಿನ್ನೆಲೆ ತಿಳಿಯಲು ಟೈಮ್ ಇರಲಿಲ್ಲವೆಂದೇ ಭಾವಿಸೋಣ.
ಅಜ್ಮತ್ ಸಂದರ್ಶ ಮಾಡುವಾಗ, ‘ ಈ ಕಾಲದಲ್ಲಿ ಚಾನೆಲ್ ನಡೆಸಲು ಎಷ್ಟು ದುಡ್ಡಾದರೂ ಸಾಲದು. ನಿನ್ನ ಟ್ಯಾಲೆಂಟನ್ನೆಲ್ಲ ಬಳಸಿ ತಿಂಗಳಿಗೆ 40 ಲಕ್ಷ ಆದಾಯ ತರಬೇಕು’ ಎಂದು ಅಜ್ಮತ್ ಮುಂದೆ ಚಾಲೆಂಜ್ ಇಡಲಾಗಿತ್ತಂತೆ. ‘ಓಕೆ’ ಎಂದು ರಿಪೋರ್ಟಿಂಗ್ ಶುರು ಹಚ್ಚಿದ ಅಜ್ಮತ್‌ಗೆ ಆ್ಯಂಬಿಡೆಂಟ್‌ನ ಫರೀದ್ ಅಕ್ಷಯಾಪಾತ್ರೆಯಂತೆ ಕಂಡದ್ದು ಸಹಜವೇ ಆಗಿತ್ತು.
‘ಆ್ಯಂಬಿಡೆಂಟ್‌ನಿಂದ ಭಾರಿ ವಂಚನೆ’ ಎಂದು ಬ್ರೆÃಕಿಂಗ್ ನ್ಯೂಸ್ ಹೊಡೆದ ಅಜ್ಮತ್ ಅದನ್ನು ಫರೀದನಿಗೆ ವ್ಯಾಟ್ಸಪ್ ಮಾಡಿದ. ಕಂಗಾಲಾದ ಫರೀದ್ ಸುದ್ದಿ ನಿಲ್ಲಿಸುವಂತೆ ಅಂಗಲಾಚುತ್ತಾನೆ. ಆಗ ಅಜ್ಮತ್ 5 ಕೋಟಿಗೆ ಬೇಡಿಕೆ ಇಡುತ್ತಾನೆ. ಸಾವಿರ ಕೋಟಿಯ ಒಡೆಯ ಫರೀದ್‌ಗೆ 5 ಕೋಟಿ ಜುಜುಬಿ. ಮೊದಲು ಅಜ್ಮತ್ ಅಕೌಂಟಿಗೆ 3 ಕೋಟಿ ಆರ್‌ಟಿಜಿಎಸ್ ಮಾಡಿ ಸ್ವಲ್ಪ ನಿರಾಳನಾಗಿತ್ತಾನೆ. ಆಹಣವನ್ನು ಅಜ್ಮತ್ ಪಬ್ಲಿಕ್ ಕ್ಯಾಪ್ಟನ್‌ಗೆ ನೀಡುವುದೆಲ್ಲ ಪ್ರೆöÊವೇಟ್ ಆಗಿ ನಡೆಯುತ್ತದೆ.
ಇಂತಹ ಎಂಜಲು ನೆಕ್ಕುವುದರಲ್ಲಿ ‘ಸಮಯಪ್ರಜ್ಞೆ’ ಹೊಂದಿರುವ ಸಮಯ್ ಚಾನೆಲ್‌ನ ವಿಜಯ್ ತಾತಯ್ಯ ತಂದೂ ಒಂದು ಕೈಚಾಚಿ ಆಖಾಡಕ್ಕೆ ಇಳಿಯುತ್ತಾನೆ.. ತನ್ನ ನಿತ್ಯ ಕಾಯಕದಂತೆ….ಇದಕ್ಕೆ ವೀಣಾ ಎಂಬ ಡೀಲ್-ಡಾಲ್ ಸಾಥ್ ನೀಡುತ್ತಾಳೆ. 40 ಕೋಟಿ ದೇಣಿಗೆ ನೀಡುವಂತೆ ಫರೀದ್‌ಗೆ ಪಾಪಿಗಳು ಬೇಡಿಕೆ ಇಡುತ್ತಾರೆ. 37 ಕೋಟಿ ವೈಟ್‌ಮನಿ, 3 ಕೋಟಿ ಬ್ಲಾö್ಯಕ್‌ಮನಿ (ಡಿಮಾನಿಟೇಷನ್‌ನಿಂದ ಕಪ್ಪು ಹಣಕ್ಕೆ ಕಡಿವಾಣ ಬಿತ್ತು, 3 ಲಕ್ಷ ಅಕ್ರಮ ಮತ್ತು ಫ್ಲೊÃಟಿಂಗ್ ಕಂಪನಿಗಳು ಮುಚ್ಚಿದವು ಎಂದು ಗಂಟಲು ಹರಿಯುವಂತೆ ಕಿರುಚುತ್ತಲೇ ಇರುವ ರಿ-‘ಪಬ್ಲಿಕ್’ ಗೋಸ್ವಾಮಿ ಮತ್ತಾತನ ‘ಆದರ್ಶ’ ನಾಯಕ ಇದನ್ನು ಗಮನಿಸಲಿ ಎಂದು ಕೋರಿಕೆ) ಸಂದಾಯ ಮಾಡುತ್ತಾನೆ ಫರೀದ್.
ಫರೀದ್ ಸಾರ್ವಜನಿಕರ ಹಣ ಲೂಟಿ ಹೊಡೆದ, ‘ಪಬ್ಲಿಕ್’ ಫರೀದ್‌ನಿಂದಾದ ಒಂದಿಷ್ಟು (ಸಖತ್ತಾಗೇ) ಕಿತ್ತುಕೊಂಡಿತು! ಜೈ ಪತ್ರಿಕೋದ್ಯಮ, ಜೈ ಜಾಗತಿಕರಣ, ಆರ್ಥಿಕ ಶಿಸ್ತು ತಂದು ಕಪ್ಪುಹಣಕ್ಕೆ ಕಡಿವಾಣ ಹಾಕಿದ ಚೌಕಿದಾರನಿಗೂ ಜೈಅನ್ನಲೇಬೇಕ್ಲವೇ?” ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಡೀಲ್ ಪ್ರಕರಣ.

– ಮಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...