Homeಕರ್ನಾಟಕಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ...

ಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ ಪರಿಷತ್

ಈಗಾಗಲೇ ಕಳೆದ ಮಾರ್ಚ್ 17 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಮ್ಮೆ ದೂರು ದಾಖಲಿಸಿದ್ದರು. ಆದರೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ.

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ಆಧರಿಸಿ FIR  ದಾಖಲಿಸಲು ವಿಫಲರಾಗಿದ್ದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಮತ್ತೆ ಖಾಸಗಿ ದೂರು (ಪಿಸಿಆರ್‌) ನೀಡಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಬ್ಬನ್ ಪಾಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಸಂತ್ರಸ್ತೆ ಪರ ವಕೀಲ ಜಗದೀಶ್ ದೂರು ನೀಡಿದ ನಂತರ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈಗ ದಿನೇಶ್ ಕಲ್ಲಹಳ್ಳಿ ದೂರನ್ನು ಆಧರಿಸಿಕೊಂಡು ಜನಾಧಿಕಾರ ಸಂಘರ್ಷ ಪರಿಷತ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಿದೆ. ಈಗಾಗಲೇ ಕಳೆದ ಮಾರ್ಚ್ 17 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಮ್ಮೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ  ಆದರ್ಶ ಐಯರ್, “ದಿನೇಶ್ ಕಲ್ಲಹಳ್ಳಿ ಅವರು ದೂರು ನೀಡಿದ ಕೂಡಲೇ ನಿರ್ಭಯಾ ಆಕ್ಟ್ ಪ್ರಕಾರ ತಕ್ಷಣ ಎಫ್‌ಐಆರ್‌ ದಾಖಲಿಸಬೇಕಿತ್ತು. ಆದರೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ಅವರು ಈ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 36  ಪ್ರಕಾರ ಆಯುಕ್ತರಿರಲಿ, ಡಿಸಿಪಿ ಇರಲಿ ಅವರಿಗೆ FIR ದಾಖಲಿಸುವ ಭಾದ್ಯತೆ ಇದೆ. ಆದರೆ ಇವರು ಈ ಸೆಕ್ಷನ್ ಅನ್ನು ಉಲ್ಲಂಘಿಸಿದ್ದಾರೆ” ಎಂದರು.

ಮುಂದುವರೆದು “ಪ್ರಕರಣದ ಕತೆ ಏನೇ ಇರಲಿ. ಆದರೆ ದೂರು ನೀಡಿದ ತಕ್ಷಣ ಎಫ್‌ಐಆರ್‌ ದಾಖಲಿಸುವುದು ಅವರ ಭಾದ್ಯತೆ. ಅದಲ್ಲಿ ವಿಫಲರಾದರೆ ಸೆಕ್ಷನ್ 166 (ಎ) ಪ್ರಕಾರ ಕ್ರಿಮಿನಲ್ ಆಕ್ಷನ್ ತೆಗೆದುಕೊಳ್ಳಬಹುದು. ಹಾಗಾಗಿ ನಾವು ಇದರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದೇವೆ” ಎಂದಿದ್ದಾರೆ.

“ದಿನೇಶ್ ಕಲ್ಲಹಳ್ಳಿ  ದೂರು ನೀಡಿ 25 ದಿನಗಳಾಗಿದ್ದೂ ಅವರು FIR ದಾಖಲಿಸಿರಲಿಲ್ಲ. ಹೀಗಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಾರ್ಚ್ 17 ರಂದು ದೂರು ದಾಖಲಿಸಿದ್ದೇವು. ಅವರು ಅದನ್ನು ತೆಗೆದುಕೊಂಡಿರಲಿಲ್ಲ. ನಂತರ ಪೋಸ್ಟ್, ಈ-ಮೇಲ್ ಮೂಲಕ ಕ‌ಳಿಸಿದ್ದೆವು.  ಕಳೆದ ತಿಂಗಳು ಈ ದೂರು ಸರಿಯಿಲ್ಲ ಎಂದು ಹೇಳಿ ತಮ್ಮ ಮೇಲಿನ ಪ್ರಕರಣವನ್ನು ಅವರೇ ಮುಕ್ತಾಯಗೊಳಿಸಿದ್ದಾರೆ. ಹೀಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ (ನೃಪತುಂಗಾ ರಸ್ತೆಯ 8 ನೇ ಎಸಿಎಂಎಂ) ಮತ್ತೆ ದೂರು ದಾಖಲಿಸಿದೆ. ಮುಂದಿನ ವಿಚಾರಣೆ ಏಪ್ರಿಲ್ 16 ರಂದು ನಡೆಯಲಿದೆ” ಎಂದು ಪರಿಷತ್ ಸಹ ಅಧ್ಯಕ್ಷ ಆದರ್ಶ ಐಯರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಪ್ರಕರಣದ ತನಿಖೆಗೆ ವಿಷೇಶ ತನಿಖಾ ತಂಡ ರಚಿಸಲಾಗಿದ್ದು, ಸಂತ್ರಸ್ತೆ ಕೂಡ ಬಹಿರಂಗವಾಗಿ ಕಾಣಿಸಿಕೊಂಡು ತನಿಖೆಗೆ ಸಹಕರಿಸುತ್ತಿದ್ದಾರೆ. ಆದರೆ ಪ್ರಕರಣದಲ್ಲಿ ಅತ್ಯಾಚಾರ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ಎಂದು ತಿಳಿಸಿ ವಿಚಾರಣೆಗೆ ಗೈರಾಗಿದ್ದಾರೆ. ಈ ನಡುವೆ ಪೊಲೀಸ್ ಅಧಿಕಾರಿಗಳ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಲು ಹೊರಟಿರುವುದು ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ವರೂಪ ನೀಡಿದೆ.

ಜನಾಧಿಕಾರ ಸಂಘರ್ಷ ಪರಿಷತ್ ನೀಡಿರುವ ದೂರಿನ ಪ್ರತಿ ಓದಲು ಇಲ್ಲಿ ಕ್ಲಿಕ್ ಮಾಡಿ.

PCR CoP DCP PI 166AIPC Annexures PresentationIndex by naanugauri on Scribd


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...