Homeಮುಖಪುಟಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ವಿಶ್ಲೇಷಣಾತ್ಮಕ ಲೇಖನಗಳಿಗೆ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ವೆಬ್‌ಸೈಟ್ ಹೇಳಿದೆ.

- Advertisement -
- Advertisement -

’ಜನಶಕ್ತಿ’ ವಾರಪತ್ರಿಕೆಯ ಜಾಲತಾಣ ರೂಪವಾದ ’ಜನಶಕ್ತಿ ಮೀಡಿಯಾ’ ವೆಬ್‌ ಪತ್ರಿಕೆಯು ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಲಿದ್ದು, ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರ ವರೆಗೆ ಪರ್ಯಾಯ ಮಾಧ್ಯಮ ಏಕೆ? ಹೇಗೆ ? ಕುರಿತು ಬರಹ ಮತ್ತು ವೆಬಿನಾರ್‌ಗಳ ಸಂವಾದ ನಡೆಯಲಿದೆ.

ಜನಶಕ್ತಿ ಮೀಡಿಯಾ ವೆಬ್, ಫೇಸ್‌ಬುಕ್, ಪಾಡ್ಕಾಸ್ಟ್ ಮತ್ತು ಯೂ ಟ್ಯೂಬ್ ಚಾನೆಲುಗಳು ಈಗಾಗಲೇ ಸಕ್ರಿಯವಾಗಿದ್ದು, ಪ್ರಸ್ತುತ ಹೊಸ ವಿನ್ಯಾಸದೊಂದಿಗೆ ಪ್ರಕಟಿಸುವ ಸಿದ್ಧತೆ ನಡೆಯುತ್ತಿದೆ. ವೆಬ್ ಪತ್ರಿಕೆಯಲ್ಲಿ ಪ್ರಸಕ್ತ ವಿದ್ಯಮಾನಗಳ ವಸ್ತುನಿಷ್ಠ ವರದಿ, ಟೀಕೆ ಟಿಪ್ಪಣಿ ವಿಮರ್ಶೆಗಳಿರುತ್ತವೆ ಎಂದು ಹೇಳಿಕೆಯಲ್ಲಿ ವಸಂತರಾಜು ಎನ್‌.ಕೆ ತಿಳಿಸಿದ್ದಾರೆ.

ಇದು ರಾಜ್ಯ, ರಾಷ್ಟ್ರ ಮತ್ತು ಅಂರ‍್ರಾಷ್ಟ್ರೀಯ ಮಟ್ಟದ ಚಿಂತಕರ, ಪರಿಣಿತರ, ಬರಹಗಾರರ, ಪತ್ರಕರ್ತರ ವೈವಿಧ್ಯಮಯ ಅಭಿಪ್ರಾಯಗಳಿಗೆ ವೇದಿಕೆಯಾಗಿರುತ್ತದೆ. ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ವಿಜ್ಙಾನ-ತಂತ್ರಜ್ಙಾನ ಇತ್ಯಾದಿ ವಿಷಯಗಳ ಕುರಿತು ವಿಶ್ಲೇಷಣಾತ್ಮಕ ಲೇಖನಗಳಿಗೂ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

“ಕರ್ನಾಟಕ 2020: ಕೊರೊನಾ ಕಾಲದಲ್ಲಿ ಮತ್ತು ನಂತರ” ವಿಷಯದ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಕಾಲದಲ್ಲಿ ಹೇಗೆ ವರ್ತಿಸಿದವು? ಈ ವರ್ತನೆಗೆ ಕೊರೊನಾ ಕಾರಣವೇ?  ಅಲ್ಲದಿದ್ದರೆ ಇದಕ್ಕೆ ಕಾರಣಗಳೇನು? ಮುಖ್ಯವಾಹಿನಿ ಮಾಧ್ಯಮಗಳನ್ನು ‘ಸುಧಾರಿಸಲು’ ಸಾಧ್ಯವಿಲ್ಲವೇ? ಇದೆ ಎನ್ನುವುದಾದರೆ ಏನು ಮಾಡಬೇಕು? ಇಲ್ಲವಾದರೆ ಪರ್ಯಾಯ ಏನು? ಪರ್ಯಾಯ ಮಾಧ್ಯಮದ ಸ್ವರೂಪ, ಕಾರ್ಯವಿಧಾನ ಹೇಗಿರಬೇಕು? ಅದಕ್ಕೆ ಸಂಪನ್ಮೂಲ ಹೊಂದಿಸುವುದು ಹೇಗೆ? ಇನ್ನಿತ್ಯಾದಿ ಪ್ರಶ್ನೆಗಳನ್ನಿಟ್ಟುಕೊಂಡು ಸರಣಿ ಬರಹ ಮತ್ತು ಚರ್ಚೆ ನಡೆಸಲು ಮೀಡಿಯ ತಂದ ಮುಂದಾಗಿದೆ.

ಇದನ್ನೂ ಓದಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ಥೀಮ್‌ ಕುರಿತ ಅಭಿಪ್ರಾಯಗಳನ್ನು ಬರಹ, ಅಡಿಯೋ ಅಥವಾ ವಿಡಿಯೋ ರೂಪದಲ್ಲಿ ಸೆಪ್ಟೆಂಬರ್ 20 ರೊಳಗಾಗಿ 9845172249, 9449260183/ [email protected] ಮೈಲ್/ವಾಟ್ಸಪ್ ಗೆ ಕಳಿಸಿಕೊಡಬೇಕು ಎಂದು ಜನಶಕ್ತಿ ಮೀಡಿಯ ತಂಡ ವಿನಂತಿಸಿದೆ.


ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...