Homeಮುಖಪುಟಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ವಿಶ್ಲೇಷಣಾತ್ಮಕ ಲೇಖನಗಳಿಗೆ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ವೆಬ್‌ಸೈಟ್ ಹೇಳಿದೆ.

- Advertisement -
- Advertisement -

’ಜನಶಕ್ತಿ’ ವಾರಪತ್ರಿಕೆಯ ಜಾಲತಾಣ ರೂಪವಾದ ’ಜನಶಕ್ತಿ ಮೀಡಿಯಾ’ ವೆಬ್‌ ಪತ್ರಿಕೆಯು ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಲಿದ್ದು, ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರ ವರೆಗೆ ಪರ್ಯಾಯ ಮಾಧ್ಯಮ ಏಕೆ? ಹೇಗೆ ? ಕುರಿತು ಬರಹ ಮತ್ತು ವೆಬಿನಾರ್‌ಗಳ ಸಂವಾದ ನಡೆಯಲಿದೆ.

ಜನಶಕ್ತಿ ಮೀಡಿಯಾ ವೆಬ್, ಫೇಸ್‌ಬುಕ್, ಪಾಡ್ಕಾಸ್ಟ್ ಮತ್ತು ಯೂ ಟ್ಯೂಬ್ ಚಾನೆಲುಗಳು ಈಗಾಗಲೇ ಸಕ್ರಿಯವಾಗಿದ್ದು, ಪ್ರಸ್ತುತ ಹೊಸ ವಿನ್ಯಾಸದೊಂದಿಗೆ ಪ್ರಕಟಿಸುವ ಸಿದ್ಧತೆ ನಡೆಯುತ್ತಿದೆ. ವೆಬ್ ಪತ್ರಿಕೆಯಲ್ಲಿ ಪ್ರಸಕ್ತ ವಿದ್ಯಮಾನಗಳ ವಸ್ತುನಿಷ್ಠ ವರದಿ, ಟೀಕೆ ಟಿಪ್ಪಣಿ ವಿಮರ್ಶೆಗಳಿರುತ್ತವೆ ಎಂದು ಹೇಳಿಕೆಯಲ್ಲಿ ವಸಂತರಾಜು ಎನ್‌.ಕೆ ತಿಳಿಸಿದ್ದಾರೆ.

ಇದು ರಾಜ್ಯ, ರಾಷ್ಟ್ರ ಮತ್ತು ಅಂರ‍್ರಾಷ್ಟ್ರೀಯ ಮಟ್ಟದ ಚಿಂತಕರ, ಪರಿಣಿತರ, ಬರಹಗಾರರ, ಪತ್ರಕರ್ತರ ವೈವಿಧ್ಯಮಯ ಅಭಿಪ್ರಾಯಗಳಿಗೆ ವೇದಿಕೆಯಾಗಿರುತ್ತದೆ. ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ವಿಜ್ಙಾನ-ತಂತ್ರಜ್ಙಾನ ಇತ್ಯಾದಿ ವಿಷಯಗಳ ಕುರಿತು ವಿಶ್ಲೇಷಣಾತ್ಮಕ ಲೇಖನಗಳಿಗೂ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

“ಕರ್ನಾಟಕ 2020: ಕೊರೊನಾ ಕಾಲದಲ್ಲಿ ಮತ್ತು ನಂತರ” ವಿಷಯದ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಕಾಲದಲ್ಲಿ ಹೇಗೆ ವರ್ತಿಸಿದವು? ಈ ವರ್ತನೆಗೆ ಕೊರೊನಾ ಕಾರಣವೇ?  ಅಲ್ಲದಿದ್ದರೆ ಇದಕ್ಕೆ ಕಾರಣಗಳೇನು? ಮುಖ್ಯವಾಹಿನಿ ಮಾಧ್ಯಮಗಳನ್ನು ‘ಸುಧಾರಿಸಲು’ ಸಾಧ್ಯವಿಲ್ಲವೇ? ಇದೆ ಎನ್ನುವುದಾದರೆ ಏನು ಮಾಡಬೇಕು? ಇಲ್ಲವಾದರೆ ಪರ್ಯಾಯ ಏನು? ಪರ್ಯಾಯ ಮಾಧ್ಯಮದ ಸ್ವರೂಪ, ಕಾರ್ಯವಿಧಾನ ಹೇಗಿರಬೇಕು? ಅದಕ್ಕೆ ಸಂಪನ್ಮೂಲ ಹೊಂದಿಸುವುದು ಹೇಗೆ? ಇನ್ನಿತ್ಯಾದಿ ಪ್ರಶ್ನೆಗಳನ್ನಿಟ್ಟುಕೊಂಡು ಸರಣಿ ಬರಹ ಮತ್ತು ಚರ್ಚೆ ನಡೆಸಲು ಮೀಡಿಯ ತಂದ ಮುಂದಾಗಿದೆ.

ಇದನ್ನೂ ಓದಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ಥೀಮ್‌ ಕುರಿತ ಅಭಿಪ್ರಾಯಗಳನ್ನು ಬರಹ, ಅಡಿಯೋ ಅಥವಾ ವಿಡಿಯೋ ರೂಪದಲ್ಲಿ ಸೆಪ್ಟೆಂಬರ್ 20 ರೊಳಗಾಗಿ 9845172249, 9449260183/ [email protected] ಮೈಲ್/ವಾಟ್ಸಪ್ ಗೆ ಕಳಿಸಿಕೊಡಬೇಕು ಎಂದು ಜನಶಕ್ತಿ ಮೀಡಿಯ ತಂಡ ವಿನಂತಿಸಿದೆ.


ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...